Monday, August 10, 2026
Monday, August 10, 2026

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

Date:

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದೆ.
ಹಿಂದಿನ ಬಿಜೆಪಿ ಸರ್ಕಾರದ ಎರಡು ವರ್ಷಗಳಲ್ಲಿ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬಂದು ಜಾರಿ ಮಾಡಿದ್ದೇವೆ‌ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ ನೀಡಿ, ‘ಲಿಪಿ-ಮನೆ’ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತನಾಡಿದರು

ನಾನು ಉದ್ಘಾಟನೆ ಮಾಡಿರುವ 70 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯ ಸೌರೀಕರಣ ಘಟಕದಿಂದ ರೈತರಿಗೆ ಹಗಲಿನಲ್ಲೇ 3 ಫೇಸ್ ವಿದ್ಯುತ್ ಅನ್ನು 5 ಗಂಟೆಗಳ ಕಾಲ ಒದಗಿಸಲಾಗುತ್ತಿದೆ.
ಸಂಪೂರ್ಣ ಗುಣಮಟ್ಟದ ವಿದ್ಯುತ್ ರೈತರ ಪಂಪ್ ಸೆಟ್ ಗಳಿಗೆ ಸಿಗುತ್ತಿರುವುದರಿಂದ ವಿದ್ಯುತ್ ಅಪವ್ಯಯ ಆಗುವುದು ತಪ್ಪಿದೆ.

ಹೆಸರಿಗೆ ಇದು ಕೇಂದ್ರದ ಯೋಜನೆ. ಆದರೆ ರಾಜ್ಯ ಸರ್ಕಾರ ಶೇ.50 ರಷ್ಟು ಹಣ ಕೊಡುತ್ತದೆ. ಶೇ.20 ರಷ್ಟು ಹಣ ಹೂಡಿಕೆದಾರರದ್ದು. ಕೇಂದ್ರ ಸರ್ಕಾರ ಕೊಡುವುದು ಕೇವಲ ಶೇ.30 ರಷ್ಟು ಹಣ ಮಾತ್ರ. ಆದರೂ ಇದಕ್ಕೆ ಕೇಂದ್ರದ ಯೋಜನೆ ಎಂದು ಹೆಸರಿಟ್ಟಿದ್ದಾರೆ.
ಒಂದು ಮೆವ್ಯಾ ವಿದ್ಯುತ್ ಉತ್ಪಾದನೆಗೆ 3 ಕೋಟಿ ಖರ್ಚಾದರೆ ಒಂದು ಕೋಟಿ ಮಾತ್ರ ಕೇಂದ್ರ ಸರ್ಕಾರದ್ದು. ಉಳಿದದ್ದಷ್ಟನ್ನೂ ನಾವು ಕೊಡುತ್ತೇವೆ.

ನಾವು ಅಧಿಕಾರಕ್ಕೆ ಬಂದು 4 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ ಹೆಚ್ಚಿಸಿದ್ದೇವೆ. ಈಗ ಒಟ್ಟು 30 ಸಾವಿರ ಮೆ.ವ್ಯಾ ಉತ್ಪಾದನೆ ಆಗುತ್ತಿದೆ. ಮುಂದಿನ ಮೂರು ವರ್ಷಗಳಲ್ಲಿ 60 ಸಾವಿರ ಮೆ.ವ್ಯಾ ಗೆ ಉತ್ಪಾದನೆ ಹೆಚ್ಚಿಸುವ ಗುರಿ ಹೊಂದಿದ್ದೇವೆ.
ಆ ಮೂಲಕ ರೈತರ ಬಹು ದೊಡ್ಡ ಸಂಕಷ್ಟಕ್ಕೆ ಪರಿಹಾರ ಒದಗಿಸಿಕೊಡುತ್ತಿದ್ದೇವೆ.

ನಾವು ಚುನಾವಣೆಗೂ ಮೊದಲು ಕೊಟ್ಟಿದ್ದ ಭರವಸೆಗಳಲ್ಲಿ ಬಹುಪಾಲನ್ನು ಈಗಾಗಲೇ ಈಡೇರಿಸಿ ರಾಜ್ಯದ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ್ದದ್ದೆಲ್ಲವನ್ನೂ ಈಡೇರಿಸಿ ನುಡಿದಂತೆ ನಡೆಯುವ ನಮ್ಮ ಪರಂಪರೆಯನ್ನು ಮುಂದುವರೆಸುತ್ತೇವೆ.

CM Siddharamaih ಮುಂದಿನ ಬಜೆಟ್ ನಲ್ಲಿ ಗೌರಿಬಿದನೂರಿಗೆ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು.
ಅಲಿಪುರ ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೆ ಏರಿಸಲಾಗುವುದು.
ಶಾಸಕ ಪುಟ್ಟಸ್ವಾಮಿಗೌಡರು ಮತ್ತು ಶಿವಶಂಕರ ರೆಡ್ಡಿಯವರು ಮುಂದಿಟ್ಟಿರುವ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...