Monday, December 15, 2025
Monday, December 15, 2025

Rotary Shivamogga ಆರ್ಥಿಕ ಪ್ರಗತಿ ಸಾಧಿಸುವಲ್ಲಿ ಚಿಟ್ ಫಂಡ್ ಉದ್ಯಮದ ಕೊಡುಗೆ ಅಪಾರ

Date:

Rotary Shivamogga ದೇಶ ಆರ್ಥಿಕವಾಗಿ ಪ್ರಗತಿ ಸಾಧಿಸುವಲ್ಲಿ ಚಿಟ್ ಫಂಡ್ ಉದ್ಯಮದ ಕೊಡುಗೆ ಅಪಾರವಾಗಿದೆ ಎಂದು ಸಹ್ಯಾದ್ರಿ ಚಿಟ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಮೇಶ್ ಭಟ್ ಹೇಳಿದರು.

ರಾಜೇಂದ್ರ ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಿಟ್ ಫಂಡ್ ಉದ್ಯಮದ ಕುರಿತು ಮಾತನಾಡಿ, ಜಿಎಸ್‌ಟಿ ತೆರಿಗೆ ರೂಪದಲ್ಲಿ ಹಾಗೂ ಆದಾಯ ತೆರಿಗೆ ರೂಪದಲ್ಲಿ ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿಗಳನ್ನು ಸರ್ಕಾರಕ್ಕೆ ಪಾವತಿಸುತ್ತಿದೆ. ಆರ್ಥಿಕ ದುರ್ಬಲರಿಗೆ, ಶ್ರೀಸಾಮಾನ್ಯರಿಗೆ, ನೌಕರರಿಗೆ ಹಾಗೂ ಉದ್ಯಮಿಗಳಿಗೆ ಚಿಟ್ ಫಂಡ್ ನಿಂದ ತುಂಬಾ ಅನುಕೂಲಕರವಾಗಿದೆ. ಲಕ್ಷಾಂತರ ಜನರಿಗೆ ಉದ್ಯೋಗ ಅವಕಾಶವನ್ನು ನೀಡಿದೆ ಎಂದು ತಿಳಿಸಿದರು.

ಸಹ್ಯಾದ್ರಿ ಚಿಟ್ಸ್ ಸಂಸ್ಥೆಯ ಮಾರುಕಟ್ಟೆ ನಿರ್ದೇಶಕ ಶಿವರಾಜ್ ಉಡುಗಣಿ ಮಾತನಾಡಿ, ಚಿಟ್ ಫಂಡ್ ಹೇಗೆ ನಡೆಯುತ್ತದೆ ಮತ್ತು ಇದರಿಂದ ಆಗುವ ಉಪಯೋಗಗಳ ಬಗ್ಗೆ ವಿವರವಾದ ಮಾಹಿತಿಯನ್ನು ಮತ್ತು ರಿಜಿಸ್ಟರ್ ಚಿಟ್ ಫಂಡ್ ಗಳಿಗೂ ಹಾಗೂ ಅನ್ ರಿಜಿಸ್ಟರ್ ಫಂಡ್ ಗಳಿಗೂ ಇರುವ ವ್ಯತ್ಯಾಸಗಳ ಬಗ್ಗೆ ವಿವರಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಸದಸ್ಯರ ಪ್ರಶ್ನೆಗಳಿಗೆ ಉತ್ತರಗಳನ್ನು ನೀಡಿದರು. ಚಿಟ್ ಫಂಡ್ ಉಪಯೋಗಗಳ ಮಾಹಿತಿಯನ್ನು ಯುವ ಜನತೆಗೆ ಹಂಚಲು ಕೋರಿದರು.

Rotary Shivamogga ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಅರುಣ್ ದೀಕ್ಷಿತ್ ಮಾತನಾಡಿ, ನೋಂದಾಯಿತ ಚಿಟ್ ಫಂಡ್ ಸಂಸ್ಥೆಗಳಲ್ಲಿ ಸಿಗುವ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯಮದಲ್ಲಿ ಯಶಸ್ಸು ಸಾಧಿಸಬೇಕು. ಸರಿಯಾದ ಮಾಹಿತಿಯನ್ನು ಪರಿಣಿತರಿಂದ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಶಶಿಕಾಂತ್ ನಾಡಿಗ್, ಜಿ.ವಿಜಯಕುಮಾರ್, ವಸಂತ ಹೋಬಳಿದಾರ್, ನಾಗರಾಜ್ ಹಾಗೂ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯ ಸದಸ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...