H. S. Venkateshamurthy ಕನ್ನಡ ಸಾಹಿತ್ಯ ಲೋಕಕ್ಕೆ ಹೆಚ್. ಎಸ್. ವೆಂಕಟೇಶಮೂರ್ತಿ ಅಗಲಿಕೆ ತುಂಬಲಾರದ ನಷ್ಟವಾಗಿದೆ. ಕನ್ನಡಕ್ಕೆ ಅನೇಕ ಕವಿತೆಗಳನ್ನು, ನಾಟಕಗಳನ್ನು , ಸಾಹಿತ್ಯಗಳನ್ನು ಕೊಡುಗೆ ನೀಡಿದ್ದು ಅವರ ಸೇವೆ ಅಪಾರವಾಗಿದೆ ಎಂದು ಹಿರಿಯ ಸಾಹಿತಿ, ಲೇಖಕ ಡಾ. ಶಾಂತಾರಾಮ ಪ್ರಭು ಹೇಳಿದರು.
ಕಾರಣಗಿರಿಯ ಸಿದ್ಧಿವಿನಾಯಕ ಸಭಾಭವನದಲ್ಲಿ ಗ್ರಾಮಭಾರತಿ ಟ್ರಸ್ಟ್, ರಾಷ್ಟ್ರೋತ್ಥಾನ ಬಳಗದ ಆಶ್ರಯದಲ್ಲಿ ನಡೆದ ಹೆಚ್. ಎಸ್. ವೆಂಕಟೇಶ ಮೂರ್ತಿ ಸ್ಮರಣೆಗಾಗಿ ಭಾವನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
H. S. Venkateshamurthy ಇದೇ ಸಂದರ್ಭದಲ್ಲಿ ವಿವಿಧ ಕಲಾವಿದರಿಂದ ಹೆಚ್ಎಸ್ ವಿ ಅವರು ರಚಿಸಿದ ಹಾಡುಗಳ ಗಾಯನ ಕಾರ್ಯಕ್ರಮ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಗಣೇಶಮೂರ್ತಿ ನಾಗರ್ಕೊಡಿಗೆ, ರಾಷ್ಟ್ರೋತ್ಥಾನ ಬಳಗದ ಅಧ್ಯಕ್ಷ ನಳಿನಚಂದ್ರ, ಗ್ರಾಮಭಾರತಿ ಟ್ರಸ್ಟ್ ಅಧ್ಯಕ್ಷ ಹನಿಯ ರವಿ, ಮತ್ತಿತರರು ಉಪಸ್ಥಿತರಿದ್ದರು.
ಪಕ್ಕ ವಾದ್ಯದಲ್ಲಿ ಸಾಗರದ ಪುಟ್ಟು, ಸುನಿಲ್ ಉಡುಪ ಸಹಕರಿಸಿದರು.