Friday, March 20, 2026
Friday, March 20, 2026

Department of Youth Empowerment and Sports ನಮ್ಮೂರ ಶಾಲೆಗೆ ನಮ್ಮ ಯುವಜನರು ಯೋಜನೆ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Date:

Department of Youth Empowerment and Sports ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯ ಯುವನೀತಿ 2012 ಅನುಷ್ಠಾನದಡಿಯಲ್ಲಿ ನಮ್ಮೂರ ಶಾಲೆಗೆ ನಮ್ಮ ಯುವಜನರು ಯೋಜನೆಯನ್ನು ಮತ್ತೊಮ್ಮೆ ಜಾರಿಗೆ ತರಲಾಗಿದ್ದು, ಆಸಕ್ತ ಶಾಲೆಗಳಿಂದ ಪ್ರಸ್ತಾವನೆ/ ಅರ್ಜಿ ಆಹ್ವಾನಿಸಿದೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಕೆ, ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರುವ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಆಯ್ಕೆಯಾದ ಪ್ರತಿ ಶಾಲೆಗೆ ಪ್ರೋತ್ಸಾಹವಾಗಿ ತಲಾ ರೂ. 1.00 ಲಕ್ಷದಂತೆ ಸರ್ಕಾರದಿಂದ ಪ್ರೋತ್ಸಾಹಧನವನ್ನು ನೀಡಲು ತೀರ್ಮಾನಿಸಿದ್ದು, ಈ ಅನುದಾನದಲ್ಲಿ ರೂ. 10,000/-ಗಳನ್ನು ಆಯ್ಕೆಯಾದ ಶಾಲೆಯ ದೈಹಿಕ ಶಿಕ್ಷಕರಿಗೆ ಮತ್ತು ರೂ. 90,000/-ಗಳನ್ನು ಶಾಲೆಯ ಎಸ್.ಡಿ.ಎಂ.ಸಿ.ಗೆ ಅಗತ್ಯ ಕ್ರೀಡಾ ಸಾಮಗ್ರಿಗಳ ಖರೀದಿಸಬೇಕಾಗಿರುತ್ತದೆ.
Department of Youth Empowerment and Sports ಆಸಕ್ತ ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಶಾಲೆಗಳು 2024-25ನೇ ಸಾಲಿನ ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರಿರುವ ಹೆಚ್ಚಿನ ಸಂಖ್ಯೆಯ ಕ್ರೀಡಾಪಟುಗಳನ್ನು ಹೊಂದಿದ ಜಿಲ್ಲೆಯ ಸರ್ಕಾರಿ ಶಾಲೆಯವರು ಪ್ರಸ್ತಾವನೆಯನ್ನು ಜೂ. 25 ರೊಳಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ, ಶಿವಮೊಗ್ಗ ಸಲ್ಲಿಸುವಂತೆ ಇಲಾಖೆ ಸಹಾಯಕ ನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9900280416 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...