Tuesday, March 24, 2026
Tuesday, March 24, 2026

ಮಕ್ಕಳಿಗೆ ಜಾನಪದದ ಅರಿವು ಮೂಡಿಸುವುದು ಅವಶ್ಯ: ಕವಿತಾ ಸುಧೀಂದ್ರ

Date:

ಮಕ್ಕಳಲ್ಲಿ ಬಾಲ್ಯದಿಂದಲೇ ಜಾನಪದ ಸಂಸ್ಕೃತಿಯ ಮಹತ್ವದ ಕುರಿತು ಅರಿವು ಮೂಡಿಸಬೇಕು ಎಂದು ಶಿವಮೊಗ್ಗ ಜಿಲ್ಲಾ ಕನ್ನಡ ಜಾನಪದ ಪರಿಷತ್ತಿನ ಸದಸ್ಯರಾದ ಶ್ರೀಮತಿ ಕವಿತಾ ಸುಧೀಂದ್ರ ಹೇಳಿದರು.
ಶಿವಮೊಗ್ಗ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕದ ವತಿಯಿಂದ ವತಿಯಿಂದ ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಜಾನಪದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿ, ಯುವಜನತೆ ಜಾನಪದದ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಬೇಕು ಎಂದು ತಿಳಿಸಿದರು.
ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ ಅಧ್ಯಕ್ಷ ಡಾ. ಎಂ.ವೆಂಕಟೇಶ್ ಮಾತನಾಡಿ, ಜಾನಪದ ಪರಿಷತ್‌ನಿಂದ ನಿರಂತರವಾಗಿ ಜಾನಪದದ ಬಗ್ಗೆ ಯುವಜನರಲ್ಲಿ ಆಸಕ್ತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಕನ್ನಡ ಜಾನಪದ ಪರಿಷತ್ ಜಿಲ್ಲಾ ಕಾರ್ಯದರ್ಶಿ ಡಾ. ಡಿ.ಬಿ.ಶಿವರುದ್ರಪ್ಪ ಮಾತನಾಡಿ, ಪದವಿಪೂರ್ವ ಶಿಕ್ಷಣ ಹಂತ ಬಹಳ ಮುಖ್ಯ. ವಿದ್ಯಾರ್ಥಿಗಳ ಬದುಕನ್ನು ರೂಪಿಸಿಕೊಳ್ಳುವ ಮಹತ್ವದ ದಿನಗಳು ಆಗಿರುತ್ತವೆ. ಅದರ ಜತೆಗೆ ಇತರ ಒಳ್ಳೆಯ ಹವ್ಯಾಸಗಳು ಅಗತ್ಯ. ಜಾನಪದದ ಪ್ರಜ್ಞೆಯು ಮೊದಲು ಪ್ರಯತ್ನಶೀಲ ಆಗುವುದಕ್ಕಿಂತ ಸಹಜಶೀಲವಾಗಬೇಕು ಎಂದು ಹೇಳಿದರು. ಜಿಲ್ಲಾ ಘಟಕದ ಸದಸ್ಯರಾದ
ಪ್ರೊ. ಮಮತಾ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಜಾನಪದ ಅರಿವು ಬದುಕಿನ ಪಥವನ್ನು ಬದಲಾಯಿಸುತ್ತದೆ ಎಂದರು. ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಹರ್ಷ ಅವರು ವಿದ್ಯಾರ್ಥಿಗಳಿಗೆ ಜಾನಪದ ಹಾಡುಗಳನ್ನು ಹೇಳಿ ಅದರ ಮಹತ್ವ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಈಶ್ವರಪ್ಪ ಅವರು, ಜಾನಪದ ಹಾಡು-ಹಸೆ, ಚಿತ್ತಾರ, ಗೀಗಿ ಪದ ಇತ್ಯಾದಿಗಳನ್ನು ಕಲಿತು ಅದರ ಮೌಲ್ಯವನ್ನು ತಿಳಿಯಬೇಕು ಎಂದರು.
ಕಾರ್ಯಕ್ರಮದಲ್ಲಿ ನಟರಾಜ್, ಶಿವಮೊಗ್ಗ ತಾಲೂಕು ಕನ್ನಡ ಜಾನಪದ ಪರಿಷತ್‌ನ ಅಧ್ಯಕ್ಷರಾದ ಶ್ರೀನಿವಾಸ್, ಡಾ. ಉದಯ್ ಕುಮಾರ್, ಡಾ. ಪ್ರೀತಮ್, ತಿಮ್ಮೆಶಪ್ಪ, ಗಜೇಂದ್ರ, ಸಂದೇಶ್, ರೋಹಿಣಿ, ನಾಗೇಶ್ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...