Monday, December 15, 2025
Monday, December 15, 2025

The Bharat Scouts and Guides Karnataka ದೈಹಿಕ ಕ್ಷಮತೆ, ಮಾನಸಿಕ ಸಧೃಡತೆಗೆ ಯೋಗ ಸಹಕಾರಿ – ಡಾ. ಅಮಿತ್ ಕುಮಾರ್

Date:

The Bharat Scouts and Guides Karnataka ಭಾರತ್ ಸ್ಕೌಟ್ ಮತ್ತು ಗೈಡ್ಸ್ ಶಿವಮೊಗ್ಗ ಜಿಲ್ಲಾ ಸಂಸ್ಥೆ, ಸ್ಥಳೀಯ ಸಂಸ್ಥೆ ಮತ್ತು ಆಯುಷ್ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಜಿಲ್ಲಾ ಸ್ಕೌಟ್ ಭವನದ ಬೇಡನ್ ಪೋವೆಲ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ನಗರದ ಖ್ಯಾತ ಫಿಸಿಷಿಯನ್ ಮತ್ತು ರಾಷ್ಟ್ರಪತಿ ಸ್ಕೌಟ್ ಪದಕ ಪುರಸ್ಕೃತರಾದ ಡಾಕ್ಟರ್ ಅಮಿತ್ ಕುಮಾರ್ ರವರು ಪ್ರಾತ್ಯಕ್ಷಿತ ಉದ್ಘಾಟಿಸಿ ಮಾತನಾಡುತ್ತಿದ್ದರು . ಚಿಕ್ಕಂದಿನಿಂದಲೇ ಯೋಗಭ್ಯಾಸವನ್ನು ಮಾಡುತ್ತ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಮಕ್ಕಳಿಗೆ ತಿಳಿಹೇಳಿದರು. ಮೊಬೈಲ್ ನಿಂದ ದೂರವಿದ್ದು ಸ್ಕೌಟ್ ಗೈಡ್ ಚಳುವಳಿಯಲ್ಲಿ ತೊಡಗಿಸಿಕೊಂಡರೆ ಸರ್ವಾಂಗೀಣ ಬೆಳವಣಿಗೆ ಹೊಂದಬಹುದು ಎಂದರು.
The Bharat Scouts and Guides Karnataka ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಮುಖ್ಯ ಆಯುಕ್ತರಾದ ಶ್ರೀಮತಿ ಶಕುಂತಲಾ ಚಂದ್ರಶೇಖರ್ ಮೇಡಂ ರವರು ಮಾತನಾಡುತ್ತಾ ಕರ್ನಾಟಕ ರಾಜ್ಯ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆ ಹಾಗೂ ಆಯುಷ್ ಇಲಾಖೆಯ ಮಾರ್ಗದರ್ಶನದಲ್ಲಿ ಜಿಲ್ಲಾ ಸಂಸ್ಥೆ ಮತ್ತು ಸ್ಥಳೀಯ ಸಂಸ್ಥೆಯ ವತಿಯಿಂದ ಪ್ರತಿ ವರ್ಷವೂ ಯೋಗ ದಿನಾಚರಣೆಯನ್ನು ಆಯೋಜನೆ ಮಾಡಲಾಗುತ್ತಿದ್ದು ಮಕ್ಕಳಿಗೆ ಯೋಗಾಸನಗಳ ಮಹತ್ವವನ್ನ ತಿಳಿಸಿಕೊಡಲಾಗುತ್ತಿದೆ ಜೊತೆಗೆ ಅವರ ಪಾರಮಾರ್ಥಿಕ ಬೆಳವಣಿಗೆಗೆ ಸಂಸ್ಥೆ ಸಹಕಾರ ನೀಡುತ್ತಿದೆ ಎಂದು ಹೇಳಿದರು. ಶ್ರೀ ಚೂಡಾಮಣಿ ಈ. ಪವಾರ್ ಜಿಲ್ಲಾ ಖಜಾಂಚಿ ಅವರು ಸರ್ವರನ್ನು ಸ್ವಾಗತಿಸಿದರು. ಶ್ರೀ ಜಿ ವಿಜಯಕುಮಾರ್ ಕೇಂದ್ರ ಸ್ಥಾನವಿಕ ಆಯುಕ್ತರು ಪ್ರಾಸ್ತವಿಕ ನುಡಿಗಳನಾಡಿದರು. ಶ್ರೀ ಕೆ ವಿ ಚಂದ್ರಶೇಖರಯ್ಯ ಜಿಲ್ಲಾ ಕಾರ್ಯದರ್ಶಿ ಸರ್ವರಿಗೂ ವಂದಿಸಿದರು. ಶ್ರೀ ರಾಜೇಶ್ ವಿ ಅವಲಕ್ಕಿ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಕಾರ್ಯಕ್ರಮವನ್ನು ನಿರೂಪಿಸಿದರು. ಆಯುಷ್ ಇಲಾಖೆಯ ಶ್ರೀ ಮಹೇಂದ್ರ ಕುಮಾರ್, ಕುಮಾರಿ ಮೋನಿಕಾ ಮತ್ತು ಶಿವಗಂಗಾ ಯೋಗ ಕೇಂದ್ರದ ಶ್ರೀಮತಿ ಅಶ್ವಿನಿ ಸಿ. ರವರು ಯೋಗಾಸನಗಳ ಪ್ರಾತ್ಯಕ್ಷಿತೆಯನ್ನು ನಡೆಸಿಕೊಟ್ಟರು. ಶ್ರೀ ಎಸ್. ಜಿ. ಆನಂದ್ ಜಿಲ್ಲಾ ಆಯುಕ್ತರು ಸ್ಕೌಟ್, ಶ್ರೀಮತಿ ಲಕ್ಷ್ಮೀ ರವಿ ಜಿಲ್ಲಾ ಜಂಟಿ ಕಾರ್ಯದರ್ಶಿ , ಶ್ರೀ ವೈ. ಆರ್. ವೀರೇಶಪ್ಪ ಜಿಲ್ಲಾ ಸಹ ಕಾರ್ಯದರ್ಶಿ, ಶ್ರೀಹೆಚ್ ಶಿವಶಂಕರ್ ಜಿಲ್ಲಾ ತರಬೇತಿ ಆಯುಕ್ತ, ಶ್ರೀ ರುದ್ರಪ್ಪ, ಸಹಾಯಕ ಜಿಲ್ಲಾ ಆಯುಕ್ತ ಶ್ರೀ ಮಲ್ಲಿಕಾರ್ಜುನ ಕಾನೂರ್, ಕಚೇರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ನಗರದ ನ್ಯಾಷನಲ್ ಪಬ್ಲಿಕ್ ಶಾಲೆ, ಕಸ್ತೂರ್ಬಾ ಪ್ರೌಢಶಾಲೆ, ಮೇರಿ ಇಮ್ಮಕ್ಯುಲೇಟ್ ಹಿರಿಯ ಪ್ರಾಥಮಿಕ ಶಾಲೆ, ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ ಸ್ಟಡೀಸ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಚಾರ್ಯ ತುಳಿಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಮಲ್ನಾಡ್ ಓಪನ್ ಗ್ರೂಪಿನ ಕಬ್, ಬುಲ್ ಬುಲ್, ಸ್ಕೌಟ್ಸ್, ಗೈಡ್, ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿಕೊಟ್ಟರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...