Monday, February 2, 2026
Monday, February 2, 2026

Karnataka State Govt Employees Association  ಜೂನ್ 24. ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಆರೋಗ್ಯ ಸಂಜೀವಿನಿ ಯೋಜನೆ ಬಗ್ಗೆ ಕಾರ್ಯಾಗಾರ.

Date:

Karnataka State Govt Employees Association ಕರ್ನಾಟಕ ರಾಜ್ಯ ಸರ್ಕಾರದಲ್ಲಿ HRMS- ತಂತ್ರಾಂಶ-2.0 ಎಂಬ ನೂತನ ವ್ಯವಸ್ಥೆ ಇತ್ತೀಚಿಗೆ ಪರಿಚಯವಾಗಿದ್ದು, ಈ ತಂತ್ರಾಂಶದ ನಿರ್ವಹಣೆ ಮತ್ತು ಸರ್ಕಾರಿ ನೌಕರರಿಗೆ ನಗದುರಹಿತ ಚಿಕಿತ್ಸೆ ಒದಗಿಸುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ (KASS) ನೊಂದಣಿ ಕಾರ್ಯವನ್ನು ಸುಗಮವಾಗಿ ನಿರ್ವಹಣೆ ಮಾಡಲು ಸಹಕಾರಿಯಾಗುವಂತೆ ಸರ್ಕಾರಿ ನೌಕರರಲ್ಲಿ ಅರಿವು ಮೂಡಿಸಲು ದಿನಾಂಕ:24-06-2025 ಮಂಗಳವಾರದಂದು ಶಿವಮೊಗ್ಗ ನಗರದ ಸರ್ಕಾರಿ ನೌಕರರ ಸಭಾಂಗಣದಲ್ಲಿ ಬೆಳಗ್ಗೆ 10.00 ರಿಂದ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ.

ಈ ಕಾರ್ಯಾಗಾರದಲ್ಲಿ ಆರ್ಥಿಕ ಇಲಾಖೆಯ HRMS ತಂತ್ರಾಂಶ-02 ನಿರ್ದೇಶನಾಲಯದಿಂದ ವಿಷಯ ತಜ್ಞರು ಹಾಗೂ ಅಧಿಕಾರಿಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ವಿಶೇಷವಾಗಿ ಶ್ರೀಮತಿ ನಿರ್ಮಲಾ ಯೋಜನಾಧಿಕಾರಿಗಳು ಇವರು ಹೆಚ್.ಆರ್.ಎಂ.ಎಸ್.ತಂತ್ರಾಂಶ ಮತ್ತು ಇ.ಎಸ್.ಆರ್.ಕುರಿತು ಪರಿಚಯಾತ್ಮಕ ತರಬೇತಿ ನೀಡುವರು. ಸುಮಂತ್ ತಾಂತ್ರಿಕ ತರಭೇತುದಾರರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ, ಹೆಚ್.ಆರ್.ಎಂ.ಎಸ್.-02ಕುರಿತು ಹಾಗೂ ಶ್ರೀಮತಿ ಸುಧಾಮಣಿ ಯೋಜನಾಧಿಕಾರಿಗಳು ಇವರು ಕೆ.ಎ.ಎಸ್.ಎಸ್.ನೋಂದಣಿ ಕುರಿತು ತರಬೇತಿ ನೀಡುವರು.

Karnataka State Govt Employees Association ಈ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಇವರು ಉದ್ಘಾಟಿಸುವರು. ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿ ಅವರು ಮುಖ್ಯ ಅತಿಥಿಗಳಾಗಿ ಹಾಗೂ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್‌ಕುಮಾರ್‌ಅವರು ಉಪಸ್ಥಿತರಿರುವರು.

ನೌಕರರಿಗೆ ಅತ್ಯುಪಯುಕ್ತವಾಗಿರುವ ಈ ಕಾರ್ಯಾಗಾರದಲ್ಲಿ ಜಿಲ್ಲೆಯ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಾಗಾರದ ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಕಾರ್ಯಗಾರದಲ್ಲಿ ಭಾಗವಹಿಸುವ ಅಧಿಕಾರಿ ಹಾಗೂ ನೌಕರರಿಗೆ ಓಓಡಿ ಸೌಲಭ್ಯವನ್ನು ನೀಡಿ ಜಿಲ್ಲಾಧಿಕಾರಿಗಳು ಆದೇಶಿಸಿರುತ್ತಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್‌ಕುಮಾರ್‌ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...