Thursday, June 18, 2026
Thursday, June 18, 2026

Karnataka State Govt Employees Association  ಜೂನ್ 24. ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಆರೋಗ್ಯ ಸಂಜೀವಿನಿ ಯೋಜನೆ ಬಗ್ಗೆ ಕಾರ್ಯಾಗಾರ.

Date:

Karnataka State Govt Employees Association ಕರ್ನಾಟಕ ರಾಜ್ಯ ಸರ್ಕಾರದಲ್ಲಿ HRMS- ತಂತ್ರಾಂಶ-2.0 ಎಂಬ ನೂತನ ವ್ಯವಸ್ಥೆ ಇತ್ತೀಚಿಗೆ ಪರಿಚಯವಾಗಿದ್ದು, ಈ ತಂತ್ರಾಂಶದ ನಿರ್ವಹಣೆ ಮತ್ತು ಸರ್ಕಾರಿ ನೌಕರರಿಗೆ ನಗದುರಹಿತ ಚಿಕಿತ್ಸೆ ಒದಗಿಸುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ (KASS) ನೊಂದಣಿ ಕಾರ್ಯವನ್ನು ಸುಗಮವಾಗಿ ನಿರ್ವಹಣೆ ಮಾಡಲು ಸಹಕಾರಿಯಾಗುವಂತೆ ಸರ್ಕಾರಿ ನೌಕರರಲ್ಲಿ ಅರಿವು ಮೂಡಿಸಲು ದಿನಾಂಕ:24-06-2025 ಮಂಗಳವಾರದಂದು ಶಿವಮೊಗ್ಗ ನಗರದ ಸರ್ಕಾರಿ ನೌಕರರ ಸಭಾಂಗಣದಲ್ಲಿ ಬೆಳಗ್ಗೆ 10.00 ರಿಂದ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ.

ಈ ಕಾರ್ಯಾಗಾರದಲ್ಲಿ ಆರ್ಥಿಕ ಇಲಾಖೆಯ HRMS ತಂತ್ರಾಂಶ-02 ನಿರ್ದೇಶನಾಲಯದಿಂದ ವಿಷಯ ತಜ್ಞರು ಹಾಗೂ ಅಧಿಕಾರಿಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ವಿಶೇಷವಾಗಿ ಶ್ರೀಮತಿ ನಿರ್ಮಲಾ ಯೋಜನಾಧಿಕಾರಿಗಳು ಇವರು ಹೆಚ್.ಆರ್.ಎಂ.ಎಸ್.ತಂತ್ರಾಂಶ ಮತ್ತು ಇ.ಎಸ್.ಆರ್.ಕುರಿತು ಪರಿಚಯಾತ್ಮಕ ತರಬೇತಿ ನೀಡುವರು. ಸುಮಂತ್ ತಾಂತ್ರಿಕ ತರಭೇತುದಾರರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ, ಹೆಚ್.ಆರ್.ಎಂ.ಎಸ್.-02ಕುರಿತು ಹಾಗೂ ಶ್ರೀಮತಿ ಸುಧಾಮಣಿ ಯೋಜನಾಧಿಕಾರಿಗಳು ಇವರು ಕೆ.ಎ.ಎಸ್.ಎಸ್.ನೋಂದಣಿ ಕುರಿತು ತರಬೇತಿ ನೀಡುವರು.

Karnataka State Govt Employees Association ಈ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಇವರು ಉದ್ಘಾಟಿಸುವರು. ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿ ಅವರು ಮುಖ್ಯ ಅತಿಥಿಗಳಾಗಿ ಹಾಗೂ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್‌ಕುಮಾರ್‌ಅವರು ಉಪಸ್ಥಿತರಿರುವರು.

ನೌಕರರಿಗೆ ಅತ್ಯುಪಯುಕ್ತವಾಗಿರುವ ಈ ಕಾರ್ಯಾಗಾರದಲ್ಲಿ ಜಿಲ್ಲೆಯ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಾಗಾರದ ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಕಾರ್ಯಗಾರದಲ್ಲಿ ಭಾಗವಹಿಸುವ ಅಧಿಕಾರಿ ಹಾಗೂ ನೌಕರರಿಗೆ ಓಓಡಿ ಸೌಲಭ್ಯವನ್ನು ನೀಡಿ ಜಿಲ್ಲಾಧಿಕಾರಿಗಳು ಆದೇಶಿಸಿರುತ್ತಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್‌ಕುಮಾರ್‌ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...