Monday, August 3, 2026
Monday, August 3, 2026

Karnataka State Govt Employees Association  ಜೂನ್ 24. ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಆರೋಗ್ಯ ಸಂಜೀವಿನಿ ಯೋಜನೆ ಬಗ್ಗೆ ಕಾರ್ಯಾಗಾರ.

Date:

Karnataka State Govt Employees Association ಕರ್ನಾಟಕ ರಾಜ್ಯ ಸರ್ಕಾರದಲ್ಲಿ HRMS- ತಂತ್ರಾಂಶ-2.0 ಎಂಬ ನೂತನ ವ್ಯವಸ್ಥೆ ಇತ್ತೀಚಿಗೆ ಪರಿಚಯವಾಗಿದ್ದು, ಈ ತಂತ್ರಾಂಶದ ನಿರ್ವಹಣೆ ಮತ್ತು ಸರ್ಕಾರಿ ನೌಕರರಿಗೆ ನಗದುರಹಿತ ಚಿಕಿತ್ಸೆ ಒದಗಿಸುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ (KASS) ನೊಂದಣಿ ಕಾರ್ಯವನ್ನು ಸುಗಮವಾಗಿ ನಿರ್ವಹಣೆ ಮಾಡಲು ಸಹಕಾರಿಯಾಗುವಂತೆ ಸರ್ಕಾರಿ ನೌಕರರಲ್ಲಿ ಅರಿವು ಮೂಡಿಸಲು ದಿನಾಂಕ:24-06-2025 ಮಂಗಳವಾರದಂದು ಶಿವಮೊಗ್ಗ ನಗರದ ಸರ್ಕಾರಿ ನೌಕರರ ಸಭಾಂಗಣದಲ್ಲಿ ಬೆಳಗ್ಗೆ 10.00 ರಿಂದ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ.

ಈ ಕಾರ್ಯಾಗಾರದಲ್ಲಿ ಆರ್ಥಿಕ ಇಲಾಖೆಯ HRMS ತಂತ್ರಾಂಶ-02 ನಿರ್ದೇಶನಾಲಯದಿಂದ ವಿಷಯ ತಜ್ಞರು ಹಾಗೂ ಅಧಿಕಾರಿಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ವಿಶೇಷವಾಗಿ ಶ್ರೀಮತಿ ನಿರ್ಮಲಾ ಯೋಜನಾಧಿಕಾರಿಗಳು ಇವರು ಹೆಚ್.ಆರ್.ಎಂ.ಎಸ್.ತಂತ್ರಾಂಶ ಮತ್ತು ಇ.ಎಸ್.ಆರ್.ಕುರಿತು ಪರಿಚಯಾತ್ಮಕ ತರಬೇತಿ ನೀಡುವರು. ಸುಮಂತ್ ತಾಂತ್ರಿಕ ತರಭೇತುದಾರರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ, ಹೆಚ್.ಆರ್.ಎಂ.ಎಸ್.-02ಕುರಿತು ಹಾಗೂ ಶ್ರೀಮತಿ ಸುಧಾಮಣಿ ಯೋಜನಾಧಿಕಾರಿಗಳು ಇವರು ಕೆ.ಎ.ಎಸ್.ಎಸ್.ನೋಂದಣಿ ಕುರಿತು ತರಬೇತಿ ನೀಡುವರು.

Karnataka State Govt Employees Association ಈ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಇವರು ಉದ್ಘಾಟಿಸುವರು. ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿ ಅವರು ಮುಖ್ಯ ಅತಿಥಿಗಳಾಗಿ ಹಾಗೂ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್‌ಕುಮಾರ್‌ಅವರು ಉಪಸ್ಥಿತರಿರುವರು.

ನೌಕರರಿಗೆ ಅತ್ಯುಪಯುಕ್ತವಾಗಿರುವ ಈ ಕಾರ್ಯಾಗಾರದಲ್ಲಿ ಜಿಲ್ಲೆಯ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಾಗಾರದ ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಕಾರ್ಯಗಾರದಲ್ಲಿ ಭಾಗವಹಿಸುವ ಅಧಿಕಾರಿ ಹಾಗೂ ನೌಕರರಿಗೆ ಓಓಡಿ ಸೌಲಭ್ಯವನ್ನು ನೀಡಿ ಜಿಲ್ಲಾಧಿಕಾರಿಗಳು ಆದೇಶಿಸಿರುತ್ತಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್‌ಕುಮಾರ್‌ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...