Monday, February 2, 2026
Monday, February 2, 2026

Akhila Bharatiya Sahitya Parishat ಕನ್ನಡ ಕಾವ್ಯ ಪರಂಪರೆ ಶ್ರೇಷ್ಠ ,ಶ್ರೀಮಂತ, ಮತ್ತೆ ಛಂದೋಬದ್ಧ ಕವಿತಾ ರಚನೆಗೆ ಕಾಲ ಪಕ್ವವಾಗುತ್ತಿದೆ- ತಿಮ್ಮಣ್ಣ ಭಟ್

Date:

Akhila Bharatiya Sahitya Parishat ನಮ್ಮ ಕನ್ನಡ ಕಾವ್ಯ ರಚನಾ ಪರಂಪರೆಯನ್ನ ಮರೆಯುತ್ತಿದ್ದೇವೆ. ಹೀಗಾಗಿ ನಮ್ಮ ಕನ್ನಡ ಪ್ರಾಚೀನ ಕವಿಗಳ ಕೃತಿಗಳ ಓದು ಕುಸಿಯುತ್ತಿದೆ. ಕವಿತೆ ರಚಿಸುವವರು ಈ ಬಗ್ಗೆ
ವಿವೇಚಿಸಬೇಕಾದ ಸಂಕ್ರಮಣ ಸ್ಥಿತಿ ಎದುರಾಗಿದೆ.
ಕಾವ್ಯಬಂಧದಲ್ಲಿ ಛಂದಸ್ಸಿನ ಬಳಕೆ ಸಹೃದಯರಿಗೆ ಓದಿನ ಆನಂದ ನೀಡುತ್ತದೆ.
ಪಂಪ,ರನ್ನ ,ಕುಮಾರವ್ಯಾಸರ ಕೃತಿಗಳ ಸೌಂದರ್ಯ ಅಡಗಿರುವುದೇ ಛಂದಸ್ಸಿನಲ್ಲಿ. ಅಂತಹ ಕಾವ್ಯ ಲಕ್ಷಣಗಳನ್ನ ನಮ್ಮ ಕವಿತಾ ರಚನಾಕಾರರು ತಮ್ಮ ರಚನಾ ಪ್ರಕ್ರಿಯೆಯಲ್ಲಿ ಪ್ರಯತ್ನಿಸಬಹುದು.
ನಮ್ಮ ಪರಂಪರೆಯ ಕಾವ್ಯಲಕ್ಷಣಗಳನ್ನ ತಮ್ಮ ಬರವಣಿಗೆಯಲ್ಲಿ
ಮುಂದುವರೆಸಲು ಅವಕಾಶ ಹೇರಳವಾಗಿದೆ ಎಂದು
ಬೆಂಗಳೂರಿನ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಕಾಲೇಜು ವಿದ್ಯಾರ್ಥಿ ವಿಭಾಗದ
ಪ್ರಚಾರ ಪ್ರಮುಖ್
ಶ್ರೀತಿಮ್ಮಣ್ಣ ಭಟ್ ಹೇಳಿದರು.
ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಶಿವಮೊಗ್ಗ ಜಿಲ್ಲಾ ಶಾಖೆಯ ಆಶ್ರಯದಲ್ಲಿ ಜೂನ್ 28 ರಂದು
ಏರ್ಪಡಿಸಿದ್ದ ಛಂದೋಬದ್ಧ ಕಾವ್ಯ ರಚನಾ ಕಮ್ಮಟದಲ್ಲಿ
ಕಮ್ಮಟಾರ್ಥಿಗಳನ್ನ ಉದ್ದೇಶಿಸಿ ಮಾತನಾಡುತ್ತಿದ್ದರು.

ಕಾವ್ಯ ರಚನಾ ಕಮ್ಮಟದಲ್ಲಿ ಶ್ರೀತಿಮ್ಮಣ್ಣ ಭಟ್ ಮತ್ತು ಕವಿ ಶ್ರೀ ಮೃತ್ಯುಂಜಯ ತೇಜಸ್ವಿ
ಸಂಪನ್ಮೂಲ ವ್ಯಕ್ತಿಗಳಾಗಿ ಉಪಸ್ಥಿತರಿದ್ದರು.
ಕನ್ನಡ ಚಲನಚಿತ್ರ ಗೀತೆಗಳು, ಭಾವಗೀತೆಗಳಲ್ಲಿನ ಛಂದಸ್ಸಿನ ಬಳಕೆ ಬಗ್ಗೆ
ಕವಿ ಮೃತ್ಯುಂಜಯ ತೇಜಸ್ವಿ ಸೋದಾಹರಣ ಭಾಷಣ ಮಾಡಿದರು.
” ಲಯ ಮತ್ತು ಗತಿಗಳ ಅನುಸರಣೆ ಕವಿತೆಗಳಿಗೆ
ಗೇಯತೆ ನೀಡುತ್ತದೆ. ಹೀಗಾಗಿ ಛಂದಸ್ಸಿನ ಚೌಕಟ್ಟು ಕವಿಯ ಪ್ರಯೋಗ ಪರಿಣಿತಿ,ಪ್ರತಿಭೆಗೆ ಸಾಕ್ಷಿಯಾಗುತ್ತದೆ ಎಂದು ಕವಿ ಮೃತ್ಯುಂಜಯ ತೇಜಸ್ವಿ ನುಡಿದರು.
ಕನ್ನಡ ಕಾವ್ಯಗಳು, ಈಗಾಗಲೇ ಬಳಸಿರುವ ಸಿನಿಮಾಗೀತೆಗಳು, ಅದರಲ್ಲಿನ ಛಂದಸ್ಸು ,
ಓದಿದಾಗ ಉಂಟಾಗುವ
ಕಾವ್ಯ ಸ್ಪಂದನದ ರಹಸ್ಯವನ್ನ ಎಳೆಎಳೆಯಾಗಿ ಬಿಚ್ಚಿಟ್ಟರು.

Akhila Bharatiya Sahitya Parishat ಶಿವಮೊಗ್ಗದ ಕೋಟೆ ರಸ್ತೆಯ ವಾಸವಿ ವಿದ್ಯಾಲಯದಲ್ಲಿ ಕಮ್ಮಟವನ್ನ ಆಯೋಜಿಸಲಾಗಿತ್ತು.
ಇಪ್ಪತ್ತೇಳು ಆಭ್ಯರ್ಥಿಗಳು ಕಮ್ಮಟದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದರು. ಕಮ್ಮಟದಲ್ಲಿ ಕೊನೆಗೆ
ಎಲ್ಲರೂ ಛಂದೋಬದ್ಧ ಕವಿತೆಗಳನ್ನ ರಚಿಸಿ ಪ್ರಸ್ತುತ ಪಡಿಸಿದ ರೀತಿ
ಅತ್ಯಂತ ಆಕರ್ಷಕವಾಗಿತ್ತು.
ಬಹುಪಾಲು ಮಹಿಳೆಯರು ಈ ಕಮ್ಮಟದಲ್ಲಿ ಪಾಲ್ಗೊಂಡಿದ್ದುದು ವಿಶೇಷವಾಗಿ ಗಮನಸೆಳೆಯಿತು.

ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ವಿಭಾಗೀಯ ಸಂಚಾಲಕ ಶ್ರೀಹರ್ಷ, ಶಿವಮೊಗ್ಗ ಜಿಲ್ಲಾ ಶಾಖೆಯ ಅಧ್ಯಕ್ಷ ಡಾ.ಸುಧೀಂದ್ರ, ಕಾರ್ಯದರ್ಶಿಗಳಾದ ಸುರೇಶ್ ಭಟ್, ಶಾಲಿನಿ ಅಜಿತ್,ಮಂಜುನಾಥ ಶರ್ಮ ಮುಂತಾದವರು
ಉಪಸ್ಥಿತರಿದ್ದರು.
ಕಾರ್ಯಕಾರಿ ಸಮಿತಿಯ
ಶ್ರೀಮತಿ ಜಯಶ್ರೀ ಗಣೇಶ್ ಪ್ರಾರ್ಥಿಸಿದರು.
ಡಾ.ಜಿ.ಮುಕುಂದ್ ಅವರು ಸ್ವಾಗತಿಸಿ ಅತಿಥಿಗಳನ್ನ ಪರಿಚಯಿಸಿದರು.
‘ಅಭಾಸಾಪ’ದ ಕಾರ್ಯಕಾರಿ ಸಮಿತಿಯ ಕುಮಾರ ಶಾಸ್ತ್ರಿ ಎಲ್ಲರಿಗೂ ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...