Thursday, March 19, 2026
Thursday, March 19, 2026

B.C. Patil ಬಿಜೆಪಿ ಸರ್ಕಾರ ರೈತರ ಆದಾಯ ವೃದ್ಧಿಗೆ ಕಟೀಬದ್ಧ-ಸಚಿವ ಬಿ.ಸಿ.ಪಾಟೀಲ್

Date:

B.C. Patil  ಬಿಜೆಪಿ ಸರ್ಕಾರ ಕೃಷಿಯಲ್ಲಿ ಹಲವು ಮಹತ್ತರ ಬದಲಾವಣೆಗಳನ್ನು ತರುವ ಮೂಲಕ ರೈತರ ಆದಾಯ ವೃದ್ಧಿಗೆ ಕಠಿಬದ್ಧವಾಗಿ ನಡೆಯುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಪುನರುಚ್ಚರಿಸಿದರು.

ಕೃಷಿ ಇಲಾಖೆಯ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ” ಸಂಗಮ ಸಭಾಂಗಣ”ವನ್ನು ಉದ್ಘಾಟಿಸಿ ಮಾತನಾಡಿದರು‌.

B.C. Patil  ಈ ಬಾರಿ ಬಜೆಟ್‌ನಲ್ಲಿ ರೈತರಿಗೆ ಶೂನ್ಯಬಡ್ಡಿ ದರದಲ್ಲಿ ಸಾಲ ಅಲ್ಲದೇ ಸಾಲದ ಮೊತ್ತವನ್ನು 5 ಲಕ್ಷ ರೂ.ಗೆ ಸರ್ಕಾರ ಏರಿಸಿದೆ‌ಅಲ್ಲದೇ ಕೃಷಿಕರಿಗಾಗಿ ಹಲವು ಅಭಿವೃದ್ಧಿಪರ ಯೋಜನೆಗಳನ್ನು ರೂಪಿಸಿದೆ‌. ಜನಸ್ನೇಹಿ ಬಜೆಟ್ ರೂಪಿಸಿರುವ ಬಿಜೆಪಿ ಸರ್ಕಾರ ಕಿರುಧಾನ್ಯಗಳ ವಿಸ್ತೀರ್ಣ ಉತ್ಪಾದನೆ ಹೆಚ್ಚಿಸಲು ರೈತಸಿರಿ ಯೋಜನೆಯಡಿ ಕಿರುಧಾನ್ಯ ಬೆಳೆಗಾರರಿಗೆ 10 ಸಾವಿರ.ರೂ.ಗಳಪ್ರೋತ್ಸಾಹ ಧನವನ್ನು ನೀಡುತ್ತಿದೆ.

ಸಿರಿಧಾನ್ಯಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಕಷ್ಟು ಉತ್ತೇಜನ ನೀಡುತ್ತಿವೆ.ಕೃಷಿ ಮತ್ತು ಪೂರಕ ಚಟುವಟಿಕೆಗಳ ವಲಯಕ್ಕೆ 2023-24 ನೇ‌ಸಾಲಿನಲ್ಲಿ ಒಟ್ಟಾರೆಯಾಗಿ ,39,031 ಕೋಟಿ ರೂ ಅನುದಾನ ಒದಗಿಸಲಾಗಿದೆ ಎಂದರು.

ಇದೇ ತಿಂಗಳ‌ ಅಂದರೆ ಫೆ.27 ರಂದು
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತನ್ನು ನರೇಂದ್ರ ಮೋದಿ ಅವರು ಶಿವಮೊಗ್ಗದಿಂದಲೇ ರೈತರ ಖಾತೆಗಳಿಗೆ ಜಮಾ ಮಾಡಲಿದ್ದಾರೆ ಎಂದು‌ ಸಂಸದ‌ ಬಿ.ವೈ.ರಾಘವೇಂದ್ರ ಮಾಹಿತಿ ನೀಡಿರುವುದಾಗಿ ಇದೇ ವೇಳೆ ಬಿಸಿಪಿ ತಿಳಿಸಿದರು.

ಕೃಷಿ ಇಲಾಖೆ ರೈತಸ್ನೇಹಿಯಾಗಿದ್ದು, ರೈತರು ಸಂಬಂಧಪಟ್ಟ ತಮ್ಮ ವ್ಯಾಪ್ತಿಯಲ್ಲಿನ ಕಚೇರಿಗಳಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ಸಮಸ್ಯೆಗಳಿಗೆ ಪರಿಹಾರ ಪಡೆಯುತ್ತಿರಬೇಕು‌.ಅಲ್ಲದೇ ಕೃಷಿ ವಿಶ್ವವಿದ್ಯಾಲಯಗಳಿಗೂ ಭೇಟಿ ನೀಡಿ ಅಲ್ಲಿನ‌ಹೊಸತಳಿಗಳ ಬಗ್ಗೆ ಮಾಹಿತಿ ಪಡೆಯಬೇಕು ಎಂದು ಸಚಿವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶಿವಯೋಗಿ ಕಳಸದ, ಕೃಷಿ ಇಲಾಖೆಯ ಆಯುಕ್ತ ಶರತ್ ಪಿ, ನಿರ್ದೇಶಕ ಪುತ್ರನ್, ಅಧಿಕಾರಿಗಳಾದ ವೆಂಕಟರಮಣರೆಡ್ಡಿ ಸೇರಿದಂತೆ ಮತ್ತಿತ್ತರು ಉದ್ಘಾಟನಾ ಕಾರ್ಯಕ್ರಮ ವೇಳೆ ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...