Thursday, June 18, 2026
Thursday, June 18, 2026

CM Siddaramaiah ರೈಲ್ವೆ ಇಲಾಖೆ ಕಾರ್ಯ ನಿರ್ವಹಣೆ: ಶ್ವೇತಪತ್ರ ಹೊರಡಿಸಿ- ಮುಖ್ಯಮಂತ್ರಿ ಸಿದ್ಧರಾಮಯ್ಯ

Date:

CM Siddaramaiah ಸಾಮಾನ್ಯ ಜನರ ಸಾರಿಗೆಯಾಗಿಯೇ ಜನಪ್ರಿಯವಾಗಿರುವ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ದೇಶದ ಕೋಟ್ಯಂತರ ಮಧ್ಯಮ ಮತ್ತು ಬಡವರ್ಗದ ಬದುಕಿನ ಮೇಲೆ ಬರೆ ಎಳೆದಿದೆ. ಈ ಬೆಲೆ ಏರಿಕೆಯನ್ನು ತಕ್ಷಣ ಹಿಂದೆಗೆದುಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಏರುತ್ತಲೇ ಇರುವ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ದರಗಳ ಭಾರದಿಂದ ಜನರು ಈಗಾಗಲೇ ತತ್ತರಿಸಿಹೋಗಿದ್ದಾರೆ. ಹಾಲು, ಮೊಸರು, ಚಹಾ ಪುಡಿಯಿಂದ ಹಿಡಿದು ಪಾಪ್ ಕಾರ್ನ್ ವರೆಗೆ ಎಲ್ಲದರ ಮೇಲೆ ಜಿಎಸ್‌ಟಿ ಹೇರಿಕೆಯಿಂದಾಗಿ ಪ್ರತಿಯೊಂದು ಕುಟುಂಬದ ಬಜೆಟ್ ಏರುಪೇರಾಗಿದೆ. ಇದೇ ವೇಳೆ ರೈಲು ಪ್ರಯಾಣದ ದರ ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಸರ್ಕಾರ ಜನರ ಜೇಬು ಖಾಲಿ ಮಾಡಲು ಹೊರಟಿದೆ ಎಂದಿದ್ದಾರೆ.

ನಮ್ಮ ಸರ್ಕಾರ ರೈತರಿಗೆ ನೆರವಾಗುವ ಉದ್ದೇಶದಿಂದ ಹಾಲಿನ ದರ ಏರಿಕೆ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿ ಕರ್ನಾಟಕ ನಾಯಕರು ತಮ್ಮದೇ ಸರ್ಕಾರ ರೈಲು ಪ್ರಯಾಣ ಹೆಚ್ಚಿಸಿದಾಗ ಸದ್ದಿಲ್ಲದೆ ಬಿಲ ಸೇರಿಕೊಂಡಿದ್ದಾರೆ.

ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಏರಿಕೆಯಾದಾಗ ಬೀದಿಗಿಳಿದಿದ್ದ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಪ್ರತಿನಿಧಿಗಳನ್ನು ಹೊಂದಿರುವ ದರ ನಿರ್ಣಯ ಸಮಿತಿಯೇ ಆ ಏರಿಕೆಯ ನಿರ್ಧಾರ ಕೈಗೊಂಡಿರುವುದನ್ನು ಬಚ್ಚಿಟ್ಟು ನಮ್ಮ ಸರ್ಕಾರದ ವಿರುದ್ದ ಜನರನ್ನು ಎತ್ತಿಕಟ್ಟುವ ವಿಫಲ ಪ್ರಯತ್ನ ನಡೆಸಿದ್ದರು.

ರೈಲ್ವೆ ಇಲಾಖೆ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿದ್ದು, ಪ್ರಪಂಚದಲ್ಲಿಯೇ ಅತ್ಯಂತ ಹೆಚ್ಚು ಪ್ರಯಾಣಿಕರು ಸಂಚರಿಸುವ ಈ ಸಾರಿಗೆ ವ್ಯವಸ್ಥೆ ಈಗಲೂ ಲಾಭದಾಯಕವಾಗಿದೆ. ರೈಲ್ವೆ ಇಲಾಖೆಗೆ ಸಂಬಂಧಿಸಿದ ಪ್ರತ್ಯೇಕ ಬಜೆಟ್ ಮಂಡನೆಯ ಪದ್ಧತಿಯನ್ನು ನರೇಂದ್ರ ಮೋದಿ ಸರ್ಕಾರ ಕೈಬಿಟ್ಟಿರುವ ಕಾರಣ ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆಯೇ ಇಲ್ಲದಂತಾಗಿದೆ.

CM Siddaramaiah ಈ ಹಿನ್ನೆಲೆಯಲ್ಲಿ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೊದಲು ಇಲಾಖೆಯ ಕಾರ್ಯನಿರ್ವಹಣೆಯ ಬಗ್ಗೆ ಶ್ವೇತಪತ್ರವನ್ನು ದೇಶದ ಜನತೆಯ ಮುಂದಿಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...