Karnataka State Bioenergy Development Board ವಿಧಾನಸೌಧದ ಉಪ ಮುಖ್ಯಮಂತ್ರಿಯವರ ಕಾರ್ಯಾಲಯದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸುಧೀಂದ್ರ ಅವರು ಒಂದು ವರ್ಷದ ಕಾರ್ಯಾವಧಿಯಲ್ಲಿ ಕೈಗೊಂಡ ಜೈವಿಕ ಅಭಿವೃದ್ಧಿ ಯೋಜನೆ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ವರದಿ ಸಲ್ಲಿಸಿದರು.
ಈ ವೇಳೆ, ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
