Saturday, December 6, 2025
Saturday, December 6, 2025

Ashakirana Public School ಕರಾಟೆ ಕಲಿತರೆ ರಕ್ಷಣೆ ಜೊತೆಗೆ ಆತ್ಮವಿಶ್ವಾಸದ ವೃದ್ಧಿ- ಸಿಯಾನ್ ಪಂಚಪ್ಪ

Date:

Ashakirana Public School ಕರಾಟೆ ಜನಪ್ರಿಯವಾದ ಸಮರ ಕಲೆಯಾಗಿದ್ದು, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕರಾಟೆಯನ್ನು ಕಲಿಯುವುದರಿಂದ ಆತ್ಮರಕ್ಷಣೆಯೊಂದಿಗೆ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಕರಾಟೆ ತರಬೇತುದಾರ ಸಿಯಾನ್ ಪಂಚಪ್ಪ ಹೇಳಿದರು.
ಸೊರಬ ಪಟ್ಟಣದ ಹೊಸಪೇಟೆ ಬಡಾವಣೆಯ ಆಶಾಕಿರಣ ಪಬ್ಲಿಕ್ ಶಾಲೆಯಲ್ಲಿ ಸಾಗರ ಕರಾಟೆ ಇನ್ಸಿ÷್ಟಟ್ಯೂಟ್ ವತಿಯಿಂದ ಹಮ್ಮಿಕೊಂಡ ಕರಾಟೆ ತರಬೇತಿ ಶಿಬಿರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಕ್ಕಳು ಕೇವಲ ಪಠ್ಯದಲ್ಲಿ ತೊಡಗಿಸಿಕೊಳ್ಳಬೇಕು ಎನ್ನುವ ಮನೋಭಾವದಿಂದ ಪೋಷಕರು ಹೊರ ಬರಬೇಕು. ಶಿಕ್ಷಣ ಎಷ್ಟು ಮುಖ್ಯವೋ ಅದೇ ರೀತಿಯಲ್ಲಿ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವೂ ಲಭಿಸುತ್ತದೆ. ಗ್ರಾಮೀಣ ಭಾಗದಲ್ಲಿ ಅನೇಕ ಪ್ರತಿಭೆಗಳಿದ್ದು, ಅವರಿಗೆ ತರಬೇತಿ ನೀಡಿದರೆ ಒಲಂಪಿಕ್‌ನAತಹ ಕ್ರೀಡೆಗಳಲ್ಲೂ ಭಾಗವಹಿಸುವರಿದ್ದಾರೆ. ಪ್ರಸ್ತುತ ದಿನಮಾನಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯಗಳು ನಡೆಯುತ್ತಿದೆ. ಈ ನಿಟ್ಟಿನಲ್ಲಿ ಕರಾಟೆ ತರಬೇತಿಯು ಸ್ವರಕ್ಷಣೆಗೆ ಅತ್ಯಂತ ಸೂಕ್ತವಾಗಿದೆ ಎಂದರು.
Ashakirana Public School ಕಾರ್ಯಕ್ರಮ ಉದ್ಘಾಟಿಸಿದ ಆಶಾಕಿರಣ ಪಬ್ಲಿಕ್ ಶಾಲೆ ಮುಖ್ಯಸ್ಥ ಹಾಗೂ ಮಾಜಿ ಯೋಧ ಯು. ಸಂಗಪ್ಪ ಮಾತನಾಡಿ, ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಿದ್ದರೆ ಮಾತ್ರ ಕಲಿಕೆಯಲ್ಲಿ ಆಸಕ್ತಿ ಮೂಡಲು ಸಾಧ್ಯವಾಗುತ್ತದೆ. ಬಹುಉಪಕಾರಿಯಾದ ಕರಾಟೆ ಹಾಗೂ ಯೋಗವನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕರಾಟೆ ತರಬೇತಿಯಿಂದ ಸಾಮರ್ಥ್ಯವು ಸಹ ಹೆಚ್ಚುತ್ತದೆ ಮತ್ತು ಕ್ರಿಯಾಶೀಲರಾಗಲು ಸಾಧ್ಯವಾಗುತ್ತದೆ ಎಂದರು.
ಪೋಷಕ ಪ್ರತಿನಿಧಿ ರಾಜು ಹಿರಿಯಾವಲಿ, ಸಂಸ್ಥೆಯ ಮುಖ್ಯಶಿಕ್ಷಕಿ ಯು. ಶೋಭಾ, ಸಹಶಿಕ್ಷಕರಾದ ಚಂದ್ರಶೇಖರ್, ಹೇಮಾವತಿ, ಸುಮಲತಾ, ಸುಪ್ರಜಾ, ಸಂಪ್ರತಾ, ರಾಧಿಕಾ, ಪ್ರವೀಣ್, ಅಮೃತಾ, ಕರಾಟೆ ತರಬೇತುದಾರರಾದ ಮಧುಕೇಶ್ವರ ಹಾಗೂ ಮಧು ಯು.ಎನ್. ಸೇರಿದಂತೆ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...