Saturday, December 6, 2025
Saturday, December 6, 2025

Eshwara Khandre ಬುಕ್ಕಾಪಟ್ಟಣ ವನ್ಯಜೀವಿಧಾಮದಲ್ಲಿ ಯಶಸ್ವಿ ತೆರವು ಕಾರ್ಯಾಚರಣೆ – ಸಚಿವ ಈಶ್ವರ ಖಂಡ್ರೆ

Date:

Eshwara Khandre ತುಮಕೂರು ಜಿಲ್ಲೆಯ ತಿಪಟೂರು ಉಪ ವಿಭಾಗದ ಬುಕ್ಕಾಪಟ್ಟಣ ಚಿಂಕಾರಾ ವನ್ಯಜೀವಿಧಾಮ ವ್ಯಾಪ್ತಿಯ ಮುತ್ತುಗದಹಳ್ಳಿ ಮೀಸಲು ಅರಣ್ಯದಲ್ಲಿ ಇಂದು 300 ಎಕರೆ ಅರಣ್ಯ ಭೂಮಿಯನ್ನು ಅಕ್ರಮ ಒತ್ತುವರಿಯಿಂದ ಮುಕ್ತಗೊಳಿಸಲಾಗಿದೆ.

ಈ ಭೂಮಿಯು ಮೈಸೂರು ಮಹಾರಾಜರಿಂದ 1926ರಲ್ಲಿ ಅರಣ್ಯ ಇಲಾಖೆಗೆ ನೀಡಲಾಗಿದ್ದು, ನಂತರದ ವರ್ಷಗಳಲ್ಲಿ ಕೆಲವು ಮಂದಿ ಅಕ್ರಮವಾಗಿ ಮಂಜೂರು ಮಾಡಿಕೊಂಡು, ಕೆಲವು ಮಂದಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದರು. ಪ್ರಕರಣ ರಾಜ್ಯ ಹೈಕೋರ್ಟ್ ಮೆಟ್ಟಲೇರಿ ಅರಣ್ಯವಾಗಿ ಉಳಿಸಲು ಆದೇಶವಾಗಿತ್ತು. ಇದೀಗ ಭೂಮಿ ಅರಣ್ಯ ಇಲಾಖೆಯ ಹೆಸರಿಗೆ ನೊಂದಾಯಿತವಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ಅವರು ತಿಳಿಸಿದ್ದಾರೆ.

ಹಾಸನ-ತುಮಕೂರು ವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ, ಪೊಲೀಸ್ ಇಲಾಖೆಯ ಬೆಂಬಲದಿಂದ ಭೂಮಿಯನ್ನು ತೆರವುಗೊಳಿಸಲಾಗಿದೆ ಎಂದಿದ್ದಾರೆ.

Eshwara Khandre ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಅರಣ್ಯ ಸಂರಕ್ಷಣೆಯ ದಿಕ್ಕಿನಲ್ಲಿ ಇದು ಮಹತ್ವದ ಹೆಜ್ಜೆ ಎಂದು ಅರಣ್ಯ ಸಚಿವ ಈಶ್ವರ‌ಖಂಡ್ರೆ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...