ದೈವಜ್ಞ ಬ್ರಾಹ್ಮಣ ಗುರುಪೀಠ ಸೇವಾ ಸಮಿತಿಯಿಂದ ನಗರದ ಜೈಲ್ ಸರ್ಕಲ್ನಲ್ಲಿರುವ ದೈವಜ್ಞ ಕಲ್ಯಾಣ ಮಂದಿರದಲ್ಲಿ ಜುಲೈ 10ರಿಂದ 13ರವರೆಗೆ ಪ್ರತಿ ದಿನ ಬೆಳಗ್ಗೆ 7ರಿಂದ 8:30 ರವರೆಗೆ ಸಂಧ್ಯಾವಂದನೆ ಮತ್ತು ದೇವಪೂಜೆ ಕಲಿಕಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಜುಲೈ 10ರಂದು ಬೆಳಗ್ಗೆ 8:30 ರಿಂದ ಗುರುಪೂಜಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬ್ರಹ್ಮೋಪದೇಶ ಪಡೆದ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಶಿಬಿರವು ಸಂತೋಷ್ ಎನ್.ಭಟ್ ಅವರ ಮಾರ್ಗದರ್ಶನದಲ್ಲಿ ನಡೆಯಲಿದೆ. ಸಂಧ್ಯಾವಂದನೆ ಮತ್ತು ದೇವಪೂಜಾ ಪರಿಕರಗಳನ್ನು ಶಿಬಿರದಲ್ಲಿ ಪಾಲ್ಗೊಳ್ಳುವವರು ತರಬೇಕು. ಹೆಚ್ಚಿನ ಮಾಹಿತಿಗೆ ಚಂದ್ರಹಾಸ ಪಿ ರಾಯ್ಕರ್ 9448154495 ಹಾಗೂ ಎಸ್.ಪಾಂಡುರಂಗ ಶೇಟ್ 6361846002 ಸಂಪರ್ಕಿಸಬಹುದಾಗಿದೆ.
ದೈವಜ್ಞ ಕಲ್ಯಾಣ ಮಂದಿರದಲ್ಲಿ ದೇವಪೂಜೆ & ಸಂಧ್ಯಾವಂದನೆ ಕಲಿಕಾ ಶಿಬಿರ
Date:
