Sunday, August 2, 2026
Sunday, August 2, 2026

Department of Information and Public Relations ಬೀದಿನಾಟಕ/ ಜಾನಪದ ಸಂಗೀತ ಕಾರ್ಯಕ್ರಮಗಳ ಮೂಲಕ ಸರ್ಕಾರದ ಯೋಜನೆಗಳ ಪ್ರಚಾರ ಮಾಡಲು ಆಸಕ್ತ ಕಲಾತಂಡಗಳಿಂದ ಅರ್ಜಿ ಆಹ್ವಾನ

Date:

Department of Information and Public Relations ಶಿವಮೊಗ್ಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2025-26ನೇ ಸಾಲಿನಲ್ಲಿ ಬೀದಿನಾಟಕ ಪ್ರದರ್ಶನ ಮತ್ತು ಜಾನಪದ ಸಂಗೀತ ಕಾರ್ಯಕ್ರಮಗಳ ಮೂಲಕ ಸರ್ಕಾರದ ವಿವಿಧ ಯೋಜನೆಗಳು/ಕಾರ್ಯಕ್ರಮಗಳ ಕುರಿತಂತೆ ಪ್ರಚಾರ ಕೈಗೊಳ್ಳಲು ಅರ್ಹ ಆಸಕ್ತ ಕಲಾತಂಡಗಳಿಂದ ಅರ್ಜಿ ಆಹ್ವಾನಿಸಿದೆ.

ಜಿಲ್ಲಾ ಮಟ್ಟದಲ್ಲಿ ಅಧೀನ ಕಚೇರಿಗಳ ಮೂಲಕ 2025-26ನೆ ಸಾಲಿನಲ್ಲಿ ಬೀದಿನಾಟಕ/ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಅನುಕೂಲವಾಗುವಂತೆ ಪ್ರತಿ ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾತಂಡಗಳ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಪ್ರತಿ ಬೀದಿನಾಟಕ ತಂಡದಲ್ಲಿ 8 ಜ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರನ್ನೊಳಗೊಂಡಿರಬೇಕು.

ಪ್ರತಿ ಜಾನಪದ ಸಂಗೀತ ಕಲಾತಂಡದಲ್ಲಿ 3 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಒಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರು ಇರುವುದು ಕಡ್ಡಾಯವಾಗಿದೆ.

ಕಲಾತಂಡಗಳ ಆಯ್ಕೆ ಮಾಡಲು ಜಿಲ್ಲಾ ಮಟ್ಟದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ, ಪರಿಶಿಷ್ಟ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೃಷಿ ಇಲಾಖೆಯ ಜಿಲ್ಳಾ ಮಟ್ಟದ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗಿದ್ದು, 2025ರ ಆಗಸ್ಟ್ 12 ರಂದು ಬೆಳಿಗ್ಗೆ 11 ಗಂಟೆಗೆ ರಾಜ್ಯಾದ್ಯಂತ 31 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು.

Department of Information and Public Relations ಜಿಲ್ಲೆಯ ಆಸಕ್ತ ಬೀದಿ ನಾಟಕ ತಂಡಗಳು ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ದಿ: 05/08/2025 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...