Saturday, March 21, 2026
Saturday, March 21, 2026

S.N.Chennabasappa ಪೌರ ಕಾರ್ಮಿಕರ ಮುಷ್ಕರದ ಸಂದರ್ಭದಲ್ಲಿ ಶಾಸಕ ಚೆನ್ನಿ ಅವರಿಂದ ಕಾರ್ಮಿಕರ ಮನವಿ ಸ್ವೀಕಾರ

Date:

S.N.Chennabasappa ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಸಂಘದ ವತಿಯಿಂದ, ತಮ್ಮ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಲು ಮಹಾನಗರ ಪಾಲಿಕೆ ಆವರಣದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಸ್ಥಳಕ್ಕೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ನೌಕರರ ಆವಾಲುಗಳನ್ನು ಸ್ವೀಕರಿಸಿದರು.

ನೌಕರರ ಬೇಡಿಕೆಗಳಾದ ಏಳನೇ ವೇತನ ಆಯೋಗದ ಸೌಲಭ್ಯ, ನೇಮಕಾತಿ ನಿಯಮಾವಳಿಗಳ ತಿದ್ದುಪಡಿ, ಕೆಜಿಐಡಿ ಮತ್ತು ಜೆಪಿಎಫ್ ಸೌಲಭ್ಯಗಳ ಕುರಿತು, ಆರೋಗ್ಯ ಸೌಲಭ್ಯಗಳಾದ ಜ್ಯೋತಿ ಆರೋಗ್ಯ ಸಂಜೀವಿನಿಯನ್ನು ಜಾರಿಗೊಳಿಸುವ ಕುರಿತು, ಸರ್ಕಾರಿ ನೌಕರರಿಗೆ ಕ್ರೀಡೆ ಆಯೋಜನೆಗೆ ಸಂಬಂಧಿಸಿದಂತೆ ಮನವಿಯನ್ನು ಸ್ವೀಕರಿಸಿ, ಈ ಕುರಿತು ಮಹಾನಗರ ಪಾಲಿಕೆ ಹಾಗೂ ಸಂಬಂಧಿತ ಇಲಾಖೆಗಳೊಂದಿಗೆ ಸೂಕ್ತ ಮಟ್ಟದಲ್ಲಿ ಚರ್ಚೆ ನಡೆಸುವ ಮೂಲಕ ನ್ಯಾಯ ದೊರಕಿಸುವ ಪ್ರಯತ್ನ ಮಾಡುವ ವಿಶ್ವಾಸವನ್ನು ನೀಡಿದರು.

S.N.Chennabasappa ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾಕ್ಟರ್ ಧನಂಜಯ್ ಸರ್ಜಿ, ನೌಕರರ ಸಂಘದ ಪ್ರಮುಖರು, ಸಂಘದ ಸದಸ್ಯರು ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಶಿವಮೊಗ್ಗದಿಂದ ದಂಪತಿ ನಾಪತ್ತೆ. ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆಮ

Shivamogga News ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಭಾರತಿ ಕಾಲೋನಿ 2ನೇ...

Shivamogga News ಪಂಚಾಂಗ ಶ್ರವಣವು ಪುಣ್ಯಪ್ರದ. ಕೆಟ್ಟಸ್ವಪ್ನವನ್ನು ದೂರಮಾಡುತ್ತದೆ- “ಕಗ್ಗ” ಜಿ.ಎಸ್.ನಟೇಶ್.

Shivamogga News ಪಂಚಾಂಗ ಶ್ರವಣದಿಂದ ಪುಣ್ಯ ಪ್ರಾಪ್ತಿ ಆಗುತ್ತದೆ. ನಮ್ಮ ಎಲ್ಲಾ...

Rangayana, Shivamogga ಚಿಣ್ಣರ ಸಿಹಿಮೊಗೆ ಬೇಸಿಗೆ ಶಿಬಿರದಲ್ಲಿ ನಾಟಕ ನಿರ್ದೇಶಕ ಮತ್ತು ಜನಸಹಾಯಕ ನಿರ್ದೇಶಕರ ಆಯ್ಕೆ ಪ್ರಕ್ರಿಯೆಗೆ ಅರ್ಜಿಗಳ ಆಹ್ವಾನ.

Rangayana ಶಿವಮೊಗ್ಗ ರಂಗಾಯಣವು ಏ.14 ರಿಂದ ಮೇ.03ರವರೆಗೆ ಆಯೋಜಿಸುತ್ತಿರುವ ಚಿಣ್ಣರ ಸಿಹಿಮೊಗ್ಗೆ-ಮಕ್ಕಳ...