Monday, February 2, 2026
Monday, February 2, 2026

Sri Shivaganga Yoga Center ಅಸಾಧ್ಯವಾದದನ್ನು ಸಾಧಿಸುವ ಶಕ್ತಿ ಗುರುವಿಗೆ ಮಾತ್ರ ಇದೆ : ಮುರುಘರಾಜೇಂದ್ರ ಸ್ವಾಮೀಜಿ

Date:

Sri Shivaganga Yoga Center ಜಗತ್ತಿನಲ್ಲಿ ಗುರುವಿನ ಸ್ಥಾನಮಾನ ತುಂಬಾ ದೊಡ್ಡದು. ಹೆತ್ತ ತಂದೆ ತಾಯಿ ಹಾಗೂ ಗುರುವಿನ ಋಣ ತೀರಿಸುವುದು ತುಂಬಾ ಕಷ್ಟ. ಅಸಾಧ್ಯವಾದದನ್ನು ಸಾಧಿಸುವ ಶಕ್ತಿ ಗುರುವಿಗೆ ಮಾತ್ರ ಇದೆ ಎಂದು ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.
ನಗರದ ಕಲ್ಲಹಳ್ಳಿಯ ಶ್ರೀ ಶಿವಗಂಗಾ ಯೋಗ ಕೇಂದ್ರದಲ್ಲಿ ಆಯೋಜಿಸಿದ್ದ ವ್ಯಾಸ ಪೂರ್ಣಿಮೆ, ಗುರು ಪೂರ್ಣಿಮೆ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ, ಗುರುಹಿರಿಯರನ್ನು ನಾವೆಲ್ಲರೂ ಗೌರವಿಸಬೇಕು. ಪ್ರತಿಯೊಂದು ಹಂತದಲ್ಲೂ ಕ್ಷೇತ್ರದಲ್ಲೂ ಗುರುವಿನ ಮಾರ್ಗದರ್ಶನ ಬೇಕೇ ಬೇಕು. ಶಿಕ್ಷಣದ ಜೊತೆಗೆ ಯಾವುದೇ ಸಂದರ್ಭದಲ್ಲಿ ಸಣ್ಣಪುಟ್ಟ ಸಹಾಯವನ್ನು ಮಾಡಿದವನು ಸಹ ಗುರುವಾಗುತ್ತಾನೆ ಎಂದು ತಿಳಿಸಿದರು.
ಮನೆಯ ಯಜಮಾನ ಕುಟುಂಬವನ್ನು ರಕ್ಷಿಸಿದರೆ ಒಬ್ಬ ಗುರು ಸಮಾಜವನ್ನು ರಕ್ಷಿಸುತ್ತಾನೆ. ಗುರುವಿಗೆ ಸಹಿಸಿಕೊಳ್ಳುವ ಶಕ್ತಿಯೊಂದಿಗೆ ಸಮಾಜವನ್ನು ತಿದ್ದುವ ಭಾರವಾದ ಶಕ್ತಿಯನ್ನು ಗುರು ಹೊಂದಿರುತ್ತಾನೆ ಎಂದರು.
ಶ್ರೀ ಶಿವಗಂಗಾ ಯೋಗ ಕೇಂದ್ರ ರಾಜ್ಯದಲ್ಲಿ ಮಾದರಿಯಾಗಿದೆ. ಬೆಳಗ್ಗೆ ಸಾವಿರಾರು ಜನ ಯೋಗ ಶಿಬಿರಾರ್ಥಿಗಳು ಬಂದು ಸೇರುವುದು ಸಣ್ಣ ಮಾತಲ್ಲ. ಈ ಸ್ಥಳಕ್ಕೆ ಅಂತ ದಿವ್ಯವಾದ ಶಕ್ತಿ ಇದೆ. ಪ್ರಾತಃಕಾಲದಲ್ಲಿ ಯೋಗವವರು ಸದಾ ಹಸನ್ಮುಖಿಗಳಾಗಿ ಇರುವ ಜತೆಯಲ್ಲಿ ದೀರ್ಘಾಯುಷ್ಯ ಹೊಂದಿರುವವರಾಗಿರುತ್ತಾರೆ ಎಂದು ನುಡಿದರು.
Sri Shivaganga Yoga Center ಇದೇ ಸಂದರ್ಭದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಯೋಗಾಚಾರ್ಯ ಡಾ. ಸಿ.ವಿ.ರುದ್ರಾರಾಧ್ಯ ಮಾತನಾಡಿ ಗುರುಪೂರ್ಣಿಮೆ ನಡೆದು ಬಂದ ದಾರಿ ಹಾಗೂ ಗುರುವಿನ ಮಹತ್ವ ಅದರ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಯೋಗ ಕೇಂದ್ರದ ಶಿಕ್ಷಕರಾದ ಡಾ. ಪದ್ಮನಾಭ ಅಡಿಗ ಮಾತನಾಡಿ, ಗುರು ಎಂದರೆ ದೊಡ್ಡ ಶಕ್ತಿ. ಗುರುವಿನ ಆಶೀರ್ವಾದ ಬೆನ್ನಿಗೆ ವಜ್ರ ಕವಚ. ಗುರುವಿನಿಂದ ಕಲಿತ ಪಾಠ ನಮಗೆ ದಾರಿ ದೀಪ ಎಂದು ತಿಳಿಸಿದರು.
ಶ್ರೀ ಶಿವಗಂಗಾ ಯೋಗ ಕೇಂದ್ರದ ಅಧ್ಯಕ್ಷ ಎಸ್.ರುದ್ರೇಗೌಡ ಎಲ್ಲರನ್ನೂ ಸನ್ಮಾನಿಸಿದರು. ಉರಗತಜ್ಞ ಪ್ರಭಾಕರ್ ಅವರನ್ನು ಸನ್ಮಾನಿಸಲಾಯಿತು.
ಜನಶಿಕ್ಷಣ ಸಂಸ್ಥೆ ನಿರ್ದೇಶಕಿ ಎಸ್.ವೈ.ಅರುಣಾದೇವಿ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಕೆ.ಇ.ಕಾಂತೇಶ್, ಹೊಸತೋಟ ಸೂರ್ಯನಾರಾಯಣ, ಮೋಹನ್ ಬಾಳೇಕಾಯಿ, ಕಾಟನ್ ಜಗದೀಶ್, ಕೆ.ವಿ.ವಸಂತಕುಮಾರ್, ಹಾಲಪ್ಪ, ಕಲಗೋಡು ರತ್ನಾಕರ್, ಕಿರಣ್, ಎಂ.ಪಿ. ಆನಂದಮೂರ್ತಿ, ಜಿ.ಎಸ್. ಓಂಕಾರ್, ಜಿ.ವಿಜಯಕುಮಾರ್, ದೇವೇಂದ್ರ ಹಾಗೂ ಎಲ್ಲಾ ಟ್ರಸ್ಟಿಗಳು, ಪೋಷಕರು. ಶಿಕ್ಷಕರು. ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...