Thursday, March 19, 2026
Thursday, March 19, 2026

Rotary Shimoga ರಸ್ತೆ ಅಪಘಾತಕ್ಕೆ ಸಂಚಾರಿ ನಿಯಮಗಳ ಪಾಲನೆ ಮಾಡದಿರುವುದೇ ಕಾರಣ-ಬಿ.ಎಂ.ಭಟ್

Date:

Rotary Shimoga ಪ್ರತಿ ನಿತ್ಯ ಸಾವಿರಾರು ಜನರು ಅಪಘಾತಗಳಿಂದ ಸಾವನ್ನಪ್ಪುತ್ತಿದ್ದು, ರಸ್ತೆ ಸಂಚಾರ ನಿಯಮಗಳ ಪಾಲನೆ ಮಾಡದಿರುವುದು ಸಹ ಒಂದು ಕಾರಣವಾಗಿದೆ ಎಂದು ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ಬಿ.ಎಂ.ಭಟ್ ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ನಗರದ ಬಿಹೆಚ್ ರಸ್ತೆಯಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಅಳವಡಿಸಿದ ಜಾಗೃತಿ ನಾಮಫಲಕ ಉದ್ಘಾಟಿಸಿ ಮಾತನಾಡಿ, ಮದ್ಯಪಾನ ಸೇವಿಸಿ ಚಾಲನೆ ಮಾಡುವುದು ಹಾಗೂ ಹೆಲ್ಮೆಟ್ ಧರಿಸದೆ ಗಾಡಿ ಚಲಾಯಿಸುವುದು, ಯುವಕರು ವೀಲ್ಹಿಂಗ್ ಮಾಡುವುದು ಮತ್ತು ಓವರ್ ಸ್ಪೀಡ್‌ನಿಂದ ರಸ್ತೆ ಅಪಘಾತಗಳ ಪ್ರಮಾಣ ಹೆಚ್ಚುತ್ತಿದೆ. ಆದ್ದರಿಂದ ಈ ವರ್ಷ ರೋಟರಿಯು ರಸ್ತೆ ಸುರಕ್ಷತೆ ಜಾಗೃತಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದರು.

ನಿಯೋಜಿತ ಜಿಲ್ಲಾ ಗವರ್ನರ್ ವಸಂತ ಹೋಬಳಿದಾರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಲ್ಲಿ ರಸ್ತೆ ಸಂಚಾರ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಿ ಅವರಿಂದ ಪ್ರಾತ್ಯಕ್ಷತೆ ಮಾಡಿಸಬೇಕು. ಅವರ ಮನಸ್ಸಿನಲ್ಲಿ ಇಂತಹ ಕಾರ್ಯಕ್ರಮಗಳು ಉಳಿಯುವುದರಿಂದ ಪೋಷಕರಿಗೆ ಅರಿವು ಮೂಡಿಸುತ್ತಾರೆ ಎಂದು ನುಡಿದರು.

ರೋಟರಿ ಶಿವಮೊಗ್ಗ ಪೂರ್ವದ ನೂತನ ಅಧ್ಯಕ್ಷ ನೆಪ್ಚೂನ್ ಕಿಶೋರ್‌ಕುಮಾರ್ ಮಾತನಾಡಿ, ರೋಟರಿ ಜಿಲ್ಲಾ ಯೋಜನೆಗಳಲ್ಲಿ ಒಂದಾದ ರಸ್ತೆ ಸುರಕ್ಷತೆ ಹಾಗೂ ಪರಿಸರ ಸಂರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ ನೀಡುವುದರ ಮುಖಾಂತರ ವರ್ಷದ ಸಮಾಜಮುಖಿ ಕಾರ್ಯಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಹೇಳಿದರು.

Rotary Shimoga ಸಂಚಾರಿ ಠಾಣೆಯ ಇನ್ಸೆಪೆಕ್ಟರ್ ತಿರುಮಲೇಶ್ ಮಾತನಾಡಿ, ರಸ್ತೆ ಸಂಚಾರ ನಿಯಮಗಳ ಬಗ್ಗೆ ಯುವಜನತೆ ಅರಿತುಕೊಳ್ಳಬೇಕು ಎಂದು ತಿಳಿಸಿದರು. ವಲಯ 11ರ ಸಹಾಯಕ ಗವರ್ನರ್ ಲಕ್ಷ್ಮಣ್ ಗೌಡ, ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ವಲಯ ಸೇನಾನಿ ಕಿರಣ್ ಕುಮಾರ್, ಅರುಣ್ ದೀಕ್ಷಿತ್, ಡಾ. ಗುಡದಪ್ಪ ಕಸಬಿ, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಡಾ. ಧನಂಜಯ ರಾಂಪುರ, ಮಾಜಿ ಅಧ್ಯಕ್ಷರಾದ ಎನ್.ಹೆಚ್.ಶ್ರೀಕಾಂತ್, ಓ.ಮಹೇಶ್, ಮಂಜುನಾಥ್, ಲಕ್ಷ್ಮಣ್, ಮಂಜುನಾಥ್ ರಾವ್ ಕದಂ, ಡಾ. ರವಿಕಿರಣ್ ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...