Thursday, March 19, 2026
Thursday, March 19, 2026

Rotary Club ಸರ್ಕಾರಿ ಶಾಲೆಯ ಮಕ್ಕಳಿಗೆ ಮೂಲ ಸೌಕರ್ಯ ಒದಗಿಸುವುದು ಅವಶ್ಯ-ಬಿ.ಬಸವರಾಜ್

Date:

Rotary Club ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದು ಅವಶ್ಯ. ಈ ನಿಟ್ಟಿನಲ್ಲಿ ರೋಟರಿ ಸಂಸ್ಥೆಯು ಸರ್ಕಾರಿ ಶಾಲಾ ಮಕ್ಕಳಿಗೆ ಅಗತ್ಯ ನೆರವು ನೀಡುತ್ತಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಬಸವರಾಜ ಬಿ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ವಿನೋಬನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಉಚಿತ ಊಟದ ತಟ್ಟೆ ಹಾಗೂ ಕೈ ಲೋಟ ಮತ್ತು ಲೇಖನ ಸಾಮಗ್ರಿ ವಿತರಿಸಿ ಮಾತನಾಡಿ, ಮಕ್ಕಳಿಗೆ ಅಗತ್ಯ ವಸ್ತುಗಳನ್ನು ರೋಟರಿ ಕ್ಲಬ್ ಸೆಂಟ್ರಲ್ ಸದಸ್ಯ ನಾರಾಯಣಮೂರ್ತಿ ನೀಡಿದ್ದು, ಇದೇ ರೀತಿ ಸರ್ಕಾರಿ ಶಾಲೆಗಳ ಮೂಲಸೌಕರ್ಯಕ್ಕೆ ದಾನಿಗಳು ಹೆಚ್ಚಿನ ನೆರವು ನೀಡಬೇಕು ಎಂದು ತಿಳಿಸಿದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಸದಸ್ಯ ನಾರಾಯಣ ಮೂರ್ತಿ ಮಾತನಾಡಿ, ರೋಟರಿ ಸಂಸ್ಥೆಯಿಂದ ನಿರಂತರ ಸೇವಾ ಕಾರ್ಯಗಳು ನಡೆಯುತ್ತಿದ್ದು, ಇಂತಹ ಅಂತರಾಷ್ಟ್ರೀಯ ಸೇವಾ ಸಂಸ್ಥೆಯಲ್ಲಿ ಸದಸ್ಯರಾಗಿರುವುದು ಹೆಮ್ಮೆ ಎಂದು ತಿಳಿಸಿದರು.
ವಲಯ ಸೇನಾನಿ ಕಿರಣ್ ಕುಮಾರ್ ಜಿ ಮಾತನಾಡಿ, ರೋಟರಿ ಜಿಲ್ಲಾ ಕಾರ್ಯಕ್ರಮವಾದ ಶಿಕ್ಷಣದ ಅಡಿಯಲ್ಲಿ ರೋಟರಿ ಸಂಸ್ಥೆಯು ಸರ್ಕಾರಿ ಶಾಲೆಗಳ ಕುಂದು ಕೊರತೆಗಳನ್ನು ಪರಿಹರಿಸಲು ಶ್ರಮಿಸುತ್ತಿದೆ ಎಂದರು.
ಆನ್ಸ್ ಕ್ಲಬ್ ಅಧ್ಯಕ್ಷೆ ರಾಜಶ್ರೀ ಬಸವರಾಜ ಮಾತನಾಡಿ, ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಲು ಅಗತ್ಯ ಸಹಕಾರ ನೀಡುತ್ತೇವೆ ಎಂದು ತಿಳಿಸಿದರು.
Rotary Club ಕಾರ್ಯದರ್ಶಿ ಜಯಶೀಲಶೆಟ್ಟಿ, ಮಾಜಿ ಸಹಾಯಕ ಗವರ್ನರ್ ರವಿ ಕೊಟೊಜಿ, ಧರ್ಮೇಂದ್ರ ಸಿಂಗ್, ಗುರುರಾಜ್, ರಮೇಶ, ಸಂತೋಷ್, ಮೋಹನ್, ಗೀತಾ ಜಗದೀಶ್, ಜ್ಯೋತಿ ಶ್ರೀರಾಮ್, ದೀಪಾ ಶೆಟ್ಟಿ, ವಿನುತ ಅಶ್ವಿನ್ ಹಾಗೂ ಆನ್ ಕ್ಲಬ್ ಕಾರ್ಯದರ್ಶಿ ಮಥುರಾ ಧನಂಜಯ್ ಹಾಗೂ ಶಾಲಾ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...