Monday, February 2, 2026
Monday, February 2, 2026

Karnataka Media Academy ಮಾಧ್ಯಮ ಅಕಾಡೆಮಿಯಿಂದ ವಿವಿಧ ವಿಷಯಗಳ ಬಗ್ಗೆ ಫೆಲೋಷಿಪ್ ಪಡೆಯಲು ಅಸಕ್ತರಿಂದ ಅರ್ಜಿ ಆಹ್ವಾನ

Date:

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯ ವತಿಯಿಂದ ಪತ್ರಕರ್ತರಿಗೆ ಆರು ವಿಷಯಗಳ ಕುರಿತ ಫೆಲೋಷಿಪ್‌ಗೆ ಅರ್ಜಿ ಆಹ್ವಾನಿಸಲಾಗಿದೆ.

ಅಕಾಡೆಮಿಯ ಸಾಮಾನ್ಯ ಆಯವ್ಯಯದಡಿ ಎರಡು, ಮಹಿಳಾ ಆಯವ್ಯಯದಡಿ ಎರಡು ಹಾಗೂ ಪರಿಶಿಷ್ಟ ಜಾತಿ ಉಪಯೋಜನೆಯಡಿ ಒಂದು ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಒಂದು ಫೆಲೋಷಿಪ್‌ ನೀಡಲಾಗುವುದು.

ಫೆಲೋಷಿಪ್‌ ಅವಧಿ 6 ತಿಂಗಳು.
ಕನಿಷ್ಠ ಐದು ವರ್ಷ ಸೇವಾನುಭವ ಹೊಂದಿರುವ, ಕನಿಷ್ಠ 30 ವರ್ಷದಿಂದ 50 ವರ್ಷ ವಯೋಮಿತಿಯ ಪತ್ರಕರ್ತರು ಫೆಲೋಷಿಪ್‌ಗೆ ಅರ್ಜಿ ಸಲ್ಲಿಸಬಹುದು.

ಪತ್ರಕರ್ತರು ಪದವೀಧರರಾಗಿರಬೇಕು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳು ಹಾಗೂ ಉಪಗ್ರಹ ಸುದ್ದಿವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರಬೇಕು. ಈ ಕುರಿತು ಸಂಪಾದಕರ ದೃಢೀಕರಣ ಪತ್ರ ಸಲ್ಲಿಸಬೇಕು.

ಫೆಲೋಷಿಪ್‌ನ ವಿಷಯಗಳು ಈ ಕೆಳಗಿನಂತಿವೆ

  1. ಬಾಲ್ಯವಿವಾಹ, POCSO, ಮರ್ಯಾದೆಗೇಡು ಹತ್ಯೆ- ಮಾಧ್ಯಮ ದೃಷ್ಟಿಕೋನ
  2. ಕೃಷಿ ಸಂವಹನ- ಒಂದು ಅಧ್ಯಯನ
  3. ಕಲ್ಯಾಣ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಮಾಧ್ಯಮಗಳ ಪಾತ್ರ
  4. ಬುಡಕಟ್ಟು ಕಾಯ್ದೆಗಳು ಹಾಗೂ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ- ಮಾಧ್ಯಮ ನೋಟ
  5. Role of Media in creating awareness on cybercrime and digital safety (ಇಂಗ್ಲಿಷ್‌ನಲ್ಲಿ ಅಧ್ಯಯನ ವರದಿ ಸಲ್ಲಿಸುವುದು)
  6. ಮಾಧ್ಯಮ ಶಿಕ್ಷಣ ಮತ್ತು ವೃತ್ತಿ ನಡುವಿನ ಅಂತರ: ಕಾರಣಗಳು, ಪರಿಣಾಮ ಹಾಗೂ ಪರಿಹಾರ

Karnataka Media Academy ಫೆಲೋಷಿಪ್‌ ಅವಧಿ ಆರು ತಿಂಗಳು. ಅರ್ಜಿ ಸ್ವೀಕರಿಸಲು 2 ನೇ ಆಗಸ್ಟ್‌ 2025 ಕೊನೆಯ ದಿನವಾಗಿದ್ದು, ವಿಜೇತರ ಆಯ್ಕೆಯಲ್ಲಿ ಅಕಾಡೆಮಿಯ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ.

ಅರ್ಜಿ ನಮೂನೆಯನ್ನು ಅಕಾಡೆಮಿಯ ವೆಬ್‌ಸೈಟ್‌ mediaacademy.karnataka.gov.in
ನಿಂದ ಡೌನ್‌ಲೋಡ್‌ ಮಾಡಿಕೊಂಡು ಭರ್ತಿ ಮಾಡಿ ಪೂರಕ ದಾಖಲೆಗಳು ಹಾಗೂ ಅಧ್ಯಯನ ಕುರಿತ ಟಿಪ್ಪಣಿಯೊಂದಿಗೆ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್‌, ವಿಶ್ವೇಶ್ವರಯ್ಯ ಗೋಪುರ, ಡಾ. ಬಿ.ಆರ್.‌ ಅಂಬೇಡ್ಕರ್‌ ವೀದಿ, ಬೆಂಗಳೂರು 560001 ಇವರಿಗೆ ಕಳುಹಿಸಬಹುದು ಅಥವಾ kmafellowship2025@gmail.com ಗೆ ಇ – ಮೇಲ್ ಮೂಲಕ ಕಳಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...