Saturday, December 6, 2025
Saturday, December 6, 2025

CM Siddaramaiah ಧರ್ಮಸ್ಥಳ ಪ್ರದೇಶದಲ್ಲಿ ಶವ ಹೂತಿಟ್ಟ ಪ್ರಕರಣ. ವಿಶೇಷ ತನಿಖಾ ದಳ ರಚನೆ- ಸಿದ್ಧರಾಮಯ್ಯ

Date:

CM Siddaramaiah ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ, ಸ್ಥಳೀಯ ಹಾಗೂ ರಾಷ್ಟ್ರೀಯ ಮಾಧ್ಯಮಗಳು ಮನುಷ್ಯನ ತಲೆಬರುಡೆ ದೊರಕಿದ ಸ್ಥಳ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬದವರ ಹೇಳಿಕೆಯನ್ನು ಪ್ರಸಾರ ಮಾಡಿವೆ.

ಈ ಪ್ರದೇಶದಲ್ಲಿ ಅಸಹಜ ಸಾವುಗಳು, ಕೊಲೆ, ಅತ್ಯಾಚಾರ ಹೀಗೆ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳು ನಡೆದಿರಬಹುದಾಗಿದ್ದು, ಈ ಎಲ್ಲಾ ಸಾಧ್ಯತೆಗಳನ್ನು ಪರಿಗಣಿಸಿ ಪ್ರಕರಣದ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗವು ರಾಜ್ಯ ಸರ್ಕಾರಕ್ಕೆ ಕೋರಿದ್ದು, ಅವರ ಕೋರಿಕೆಯ ಮೇರೆಗೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶಿಸಲಾಗಿದೆ.

CM Siddaramaiah ವಿಶೇಷ ತನಿಖಾ ತಂಡವು ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ದೂರು ಸೇರಿದಂತೆ ಇದಕ್ಕೆ ಸಂಬಂಧಪಟ್ಟಂತೆ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹಾಗೂ ದಾಖಲಾಗುವ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಸಮಗ್ರ ತನಿಖೆ ನಡೆಸಿ, ವರದಿ ನೀಡಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...