Friday, March 20, 2026
Friday, March 20, 2026

Vishveshvaraya Jala Nigam Ltd ವಾಣಿವಿಲಾಸ ಸಾಗರಕ್ಕೆ ಭದ್ರಾ ಮೇಲ್ದಂಡೆ ಕಾಲುವೆ ಮೂಲಕ ಜುಲೈ 27 ರಂದು ನೀರನ್ನು ಹರಿಸಲಾಗುತ್ತದೆ, ಸಾರ್ವಜನಿಕ ಸುರಕ್ಷತೆಗೆ ಮನವಿ

Date:

Vishveshvaraya Jala Nigam Ltd ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಅಡಿಯಲ್ಲಿ ಬರುವ ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯಿಂದ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಗ್ರಾಮಗಳ ಮಾರ್ಗವಾಗಿ ವೇದಾವತಿ ನದಿಗೆ ಸೇರುವ ಹಳ್ಳದ ಮುಖಾಂತರ ವಾಣಿ ವಿಲಾಸ ಸಾಗರಕ್ಕೆ ಸರ್ಕಾರದ ನಿರ್ದೇಶನದಂತೆ ದಿನಾಂಕ: 27-07-2025 ರಿಂದ ನೀರನ್ನು ಹರಿಸಲಾಗುವುದು.
ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯು ಭದ್ರಾ ಜಲಾಶಯದಿಂದ ಪ್ರಾರಂಭವಾಗಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ, ಲಿಂಗದಹಳ್ಳಿ, ತರೀಕೆರೆ ಕಸಬಾ, ಅಮೃತಾಪುರ, ಅಜ್ಜಂಪುರ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಹಾದು ಹೋಗಿದ್ದು, ಸರ್ಕಾರದ ನಿರ್ದೇಶನದಂತೆ ದಿನಾಂಕ: 27-07-2025 ರಿಂದ ಶಾಂತಿಪುರ ಪಂಪ್ ಹೌಸ್-1, ಜಂಭದಹಳ್ಳ ಅಕ್ವೆಡಕ್ಟ್, ತರೀಕೆರೆ ರೈಲು ಸೇತುವೆ, ಬೆಟ್ಟತಾವರೆಕೆರೆ ಪಂಪ್ ಹೌಸ್-2, ಅಜ್ಜಂಪುರ ಸುರಂಗದ ಮಾರ್ಗವಾಗಿ ಹೆಟ್ಟೂರು ಗ್ರಾಮದ ಹತ್ತಿರವಿರುವ ವೈ-ಜಂಕ್ಷನ್‌ನಿAದ ಹೆದ್ದೂರು, ಕಾಟಿನಗೆರೆ, ಬೆಣಕುಣಿಸೆ, ಮುಗಳಿ, ಬೇಗೂರು, ಆಸಂದಿ, ಹಡಗಲು, ಕಲ್ಕೆರೆ, ಹೆಚ್. ತಿಮ್ಮಾಪುರ, ಕಲ್ಲಹಳ್ಳಿ, ಚಿಕ್ಕಬಳ್ಳೇಕೆರೆ, ಹನುಮನಹಳ್ಳಿ, ಚೌಳಹಿರಿಯೂರು ಮತ್ತು ಹಿ. ತಿಮ್ಮಾಪುರ ಗ್ರಾಮಗಳ ಮಾರ್ಗವಾಗಿ ಹರಿದು ವೇದಾವತಿ ನದಿಗೆ ಸೇರುವ ಹಳ್ಳದ ಮುಖಾಂತರ ವಾಣಿ ವಿಲಾಸ ಸಾಗರಕ್ಕೆ ನೀರನ್ನು ಹರಿಸಲಾಗುವುದು.
ಆದ್ದರಿಂದ, ಸಾರ್ವಜನಿಕರ ಸುರಕ್ಷತೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಕಾಲುವೆ ಹಾಗೂ ಹಳ್ಳದ ಪಾತ್ರಗಳಲ್ಲಿ ಸಾರ್ವಜನಿಕರು ತಿರುಗಾಡುವುದು, ಜನ ಜಾನುವಾರುಗಳನ್ನು ಕಾಲುವೆ ಒಳಗಡೆ ಬಿಡುವುದು ಹಾಗೂ ಇತರೆ ಚಟುವಟಿಕೆಗಳನ್ನು ಮಾಡುವುದು ಮುಂತಾದವುಗಳನ್ನು ನಿಷೇಧಿಸಲಾಗಿದೆ.
Vishveshvaraya Jala Nigam Ltd ಈ ಸೂಚನೆಗಳನ್ನು ಉಲ್ಲಂಘಿಸುವುದು, ನಿಗಮದ ಆಸ್ತಿಯಾದ ನೀರಾವರಿ ಕಾಲುವೆ, ಕಟ್ಟಡಗಳನ್ನು ಜಖಂಗೊಳಿಸುವುದು, ಅನಧಿಕೃತವಾಗಿ ಪಂಪ್‌ಸೆಟ್ ಗಳನ್ನು ಅಳವಡಿಸಿ ನೀರನ್ನು ಎತ್ತುವುದು ನೀರಾವರಿ ಕಾಯ್ದೆಯ ವಿವಿಧ ನಿಯಮಗಳ ಪ್ರಕಾರ ಕಾನೂನು ಬಾಹಿರವಾಗಿದ್ದು, ಇದನ್ನು ಉಲ್ಲಂಘಿಸಿದವರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಸಾರ್ವಜನಿಕರ ಗಮನಕ್ಕೆ ತರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...