Monday, February 2, 2026
Monday, February 2, 2026

Kateel Ashok Pai Memorial College ಮಲ್ಲಿಗೇನಹಳ್ಳಿ ಕೆರೆಯಲ್ಲಿ ತ್ಯಾಜ್ಯದಿಂದಾಗಿರುವ ಕೆರೆಯ ಸೌಂದರ್ಯದ ವಿರೂಪ ತಪ್ಪಿಸಲು ಕೆರೆಯ ಆಸುಪಾಸು ವನಮಹೋತ್ಸವ – ಡಾ.ಸಂಧ್ಯಾ ಕಾವೇರಿ

Date:

Kateel Ashok Pai Memorial College ಶಿವಮೊಗ್ಗದ ಮಾನಸ ಟ್ರಸ್ಟ್ ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಗಿಡ ನೆಡುವುದರ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು.

ಮಾನಸ ಟ್ರಸ್ಟ್ ನ ನಿರ್ದೇಶಕರಾದ ಡಾಕ್ಟರ್ ರಜನಿ ಎ ಪೈರವರು ಮಲ್ಲಿಗೆನಹಳ್ಳಿಯ ಕೆರೆಯ ದಂಡೆಯಲ್ಲಿ ಹೊಂಗೆ ಗಿಡವನ್ನು ನೆಡುವುದರ ಮೂಲಕ ಈ ವನಮಹೋತ್ಸವ ಆಚರಣೆಗೆ ಚಾಲನೆಯನ್ನು ನೀಡಿದರು.

ಕಟೀಲ್ ಅಶೋಕ ಪೈ ಸ್ಮಾರಕ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಮಲೆನಾಡಿನ ಮಳೆಗಾಲದ ತುಂತುರು ಹನಿ ಲೇಪನ ದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಕೆರೆಯ ದಂಡೆಯಲ್ಲಿ ಗಿಡಗಳನ್ನು ನೆಡುವುದರ ಮೂಲಕ ಮಳೆಗಾಲ ದ ಪರಿಸರವನ್ನು ಅರ್ಥಪೂರ್ಣವಾಗಿ ಅನುಭವಿಸಿದರು.

“ಮಲ್ಲಿಗೆನಹಳ್ಳಿ ಕೆರೆಯ ದಂಡೆಯಲ್ಲಿ ಹಲವರು ಅನಗತ್ಯ ಕಸಗಳನ್ನು ಚೆಲ್ಲಾಡುತ್ತಾರೆ ,ಇದರಿಂದ ಕೆರೆಯ ಸೌಂದರ್ಯವು ಹಾಳಾಗುತ್ತಿದೆ ಮಾತ್ರವಲ್ಲದೆ ಪರಿಸರಕ್ಕೆ ಹಾನಿಯಾಗುತ್ತಿದೆ .ಇದನ್ನು ಮನಗಂಡು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ಕೆರೆಯ ದಂಡೆಯಲ್ಲಿ ಮರ ಗಿಡಗಳನ್ನು ಬೆಳೆಸುವ ಯೋಜನೆಯನ್ನು ರೂಪಿಸಲಾಗಿದೆ” ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಧ್ಯಾ ಕಾವೇರಿ ಅವರು ತಿಳಿಸಿದರು.

Kateel Ashok Pai Memorial College ಈ ದಂಡೆಯನ್ನು ಒಂದು ರಮ್ಯ ಹಾಗೂ ಪರಿಸರಕ್ಕೆ ಪೂರಕವಾದ ಮರಗಳ ತಾಣವನ್ನಾಗಿ ಮಾಡುವ ಯೋಜನೆ ಇದೆ ಎಂದು ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮಾಧಿಕಾರಿಗಳಾದ ಡಾಕ್ಟರ್ ಸುಕೀರ್ತಿ ಹಾಗೂ ಮೋಹನ್ ಕುಮಾರ್ ರವರು ತಿಳಿಸಿದರು. ಪರಿಸರಕ್ಕೆ ಪೂರಕವಾದ ಹೊಂಗೆ ,ಬಾದಾಮಿ ,ಹೊಳೆಮತ್ತಿ ಇತ್ಯಾದಿ ಮರಗಳ ಗಿಡಗಳನ್ನು ಇಲ್ಲಿ ನೆಡಲಾಗುತ್ತಿದೆ, ಈ ಗಿಡ ಮರಗಳನ್ನು ಸಂರಕ್ಷಿಸುವ ಜವಾಬ್ದಾರಿಯು ವಿದ್ಯಾರ್ಥಿಗಳು ಹಾಗೂ ಕಾಲೇಜಿನದ್ದಾಗಿದೆ ಎಂದು ತಿಳಿಸಿದರು.

” ಶಿವಮೊಗ್ಗದ ಮಲ್ಲಿಗೆನಹಳ್ಳಿ ಕೆರೆಯು ಅತ್ಯಂತ ಸಂಪನ್ಮೂಲ ಭರಿತ ಹಾಗೂ ಪರಿಸರಕ್ಕೆ ಶೋಭೆಯುಳ್ಳ ಒಂದು ಕೆರೆಯಾಗಿದೆ .ಇದನ್ನು ಸ್ವಚ್ಛವಾಗಿಡಲು ಸಾರ್ವಜನಿಕರು ಸಹಕರಿಸಬೇಕು. ಇಲ್ಲಿ ಕಸಗಳನ್ನು ಯಾರು ಎಸೆಯಬಾರದೆಂದು ಮಾನಸ ಟ್ರಸ್ಟ್ ನ ಶೈಕ್ಷಣಿಕ ಸಲಹೆಗಾರರಾದ ಡಾ. ರಾಜೇಂದ್ರ ಚೆನ್ನಿ ಅವರು ಶಿವಮೊಗ್ಗದ ಜನತೆಗೆ ಮನವಿಯನ್ನು ಮಾಡಿದರು.

ಮುಂದಿನ ದಿನಗಳಲ್ಲಿ ಕಾಲೇಜು ಶಿವಮೊಗ್ಗ ಹಾಗೂ ಸುತ್ತಲಿನ ಕೆರೆಗಳ ಬದಿಗಳಲ್ಲಿ ಗಿಡಗಳನ್ನು ನೆಡುವ ಯೋಜನೆಗಳನ್ನು ಕೈಗೆತ್ತಿಕೊಳ್ಳುವುದು ಎಂದು ನಿರ್ಧರಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...