Friday, March 20, 2026
Friday, March 20, 2026

Kateel Ashok Pai Memorial College ಮಲ್ಲಿಗೇನಹಳ್ಳಿ ಕೆರೆಯಲ್ಲಿ ತ್ಯಾಜ್ಯದಿಂದಾಗಿರುವ ಕೆರೆಯ ಸೌಂದರ್ಯದ ವಿರೂಪ ತಪ್ಪಿಸಲು ಕೆರೆಯ ಆಸುಪಾಸು ವನಮಹೋತ್ಸವ – ಡಾ.ಸಂಧ್ಯಾ ಕಾವೇರಿ

Date:

Kateel Ashok Pai Memorial College ಶಿವಮೊಗ್ಗದ ಮಾನಸ ಟ್ರಸ್ಟ್ ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಗಿಡ ನೆಡುವುದರ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು.

ಮಾನಸ ಟ್ರಸ್ಟ್ ನ ನಿರ್ದೇಶಕರಾದ ಡಾಕ್ಟರ್ ರಜನಿ ಎ ಪೈರವರು ಮಲ್ಲಿಗೆನಹಳ್ಳಿಯ ಕೆರೆಯ ದಂಡೆಯಲ್ಲಿ ಹೊಂಗೆ ಗಿಡವನ್ನು ನೆಡುವುದರ ಮೂಲಕ ಈ ವನಮಹೋತ್ಸವ ಆಚರಣೆಗೆ ಚಾಲನೆಯನ್ನು ನೀಡಿದರು.

ಕಟೀಲ್ ಅಶೋಕ ಪೈ ಸ್ಮಾರಕ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಮಲೆನಾಡಿನ ಮಳೆಗಾಲದ ತುಂತುರು ಹನಿ ಲೇಪನ ದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಕೆರೆಯ ದಂಡೆಯಲ್ಲಿ ಗಿಡಗಳನ್ನು ನೆಡುವುದರ ಮೂಲಕ ಮಳೆಗಾಲ ದ ಪರಿಸರವನ್ನು ಅರ್ಥಪೂರ್ಣವಾಗಿ ಅನುಭವಿಸಿದರು.

“ಮಲ್ಲಿಗೆನಹಳ್ಳಿ ಕೆರೆಯ ದಂಡೆಯಲ್ಲಿ ಹಲವರು ಅನಗತ್ಯ ಕಸಗಳನ್ನು ಚೆಲ್ಲಾಡುತ್ತಾರೆ ,ಇದರಿಂದ ಕೆರೆಯ ಸೌಂದರ್ಯವು ಹಾಳಾಗುತ್ತಿದೆ ಮಾತ್ರವಲ್ಲದೆ ಪರಿಸರಕ್ಕೆ ಹಾನಿಯಾಗುತ್ತಿದೆ .ಇದನ್ನು ಮನಗಂಡು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಮೂಲಕ ಕೆರೆಯ ದಂಡೆಯಲ್ಲಿ ಮರ ಗಿಡಗಳನ್ನು ಬೆಳೆಸುವ ಯೋಜನೆಯನ್ನು ರೂಪಿಸಲಾಗಿದೆ” ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಧ್ಯಾ ಕಾವೇರಿ ಅವರು ತಿಳಿಸಿದರು.

Kateel Ashok Pai Memorial College ಈ ದಂಡೆಯನ್ನು ಒಂದು ರಮ್ಯ ಹಾಗೂ ಪರಿಸರಕ್ಕೆ ಪೂರಕವಾದ ಮರಗಳ ತಾಣವನ್ನಾಗಿ ಮಾಡುವ ಯೋಜನೆ ಇದೆ ಎಂದು ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮಾಧಿಕಾರಿಗಳಾದ ಡಾಕ್ಟರ್ ಸುಕೀರ್ತಿ ಹಾಗೂ ಮೋಹನ್ ಕುಮಾರ್ ರವರು ತಿಳಿಸಿದರು. ಪರಿಸರಕ್ಕೆ ಪೂರಕವಾದ ಹೊಂಗೆ ,ಬಾದಾಮಿ ,ಹೊಳೆಮತ್ತಿ ಇತ್ಯಾದಿ ಮರಗಳ ಗಿಡಗಳನ್ನು ಇಲ್ಲಿ ನೆಡಲಾಗುತ್ತಿದೆ, ಈ ಗಿಡ ಮರಗಳನ್ನು ಸಂರಕ್ಷಿಸುವ ಜವಾಬ್ದಾರಿಯು ವಿದ್ಯಾರ್ಥಿಗಳು ಹಾಗೂ ಕಾಲೇಜಿನದ್ದಾಗಿದೆ ಎಂದು ತಿಳಿಸಿದರು.

” ಶಿವಮೊಗ್ಗದ ಮಲ್ಲಿಗೆನಹಳ್ಳಿ ಕೆರೆಯು ಅತ್ಯಂತ ಸಂಪನ್ಮೂಲ ಭರಿತ ಹಾಗೂ ಪರಿಸರಕ್ಕೆ ಶೋಭೆಯುಳ್ಳ ಒಂದು ಕೆರೆಯಾಗಿದೆ .ಇದನ್ನು ಸ್ವಚ್ಛವಾಗಿಡಲು ಸಾರ್ವಜನಿಕರು ಸಹಕರಿಸಬೇಕು. ಇಲ್ಲಿ ಕಸಗಳನ್ನು ಯಾರು ಎಸೆಯಬಾರದೆಂದು ಮಾನಸ ಟ್ರಸ್ಟ್ ನ ಶೈಕ್ಷಣಿಕ ಸಲಹೆಗಾರರಾದ ಡಾ. ರಾಜೇಂದ್ರ ಚೆನ್ನಿ ಅವರು ಶಿವಮೊಗ್ಗದ ಜನತೆಗೆ ಮನವಿಯನ್ನು ಮಾಡಿದರು.

ಮುಂದಿನ ದಿನಗಳಲ್ಲಿ ಕಾಲೇಜು ಶಿವಮೊಗ್ಗ ಹಾಗೂ ಸುತ್ತಲಿನ ಕೆರೆಗಳ ಬದಿಗಳಲ್ಲಿ ಗಿಡಗಳನ್ನು ನೆಡುವ ಯೋಜನೆಗಳನ್ನು ಕೈಗೆತ್ತಿಕೊಳ್ಳುವುದು ಎಂದು ನಿರ್ಧರಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...