Monday, December 15, 2025
Monday, December 15, 2025

Shimoga News ವಿದ್ಯಾರ್ಥಿಗಳೆ,ನೀವು ಪಡೆದ ಶಿಕ್ಷಣ ನೊಂದವರ ಕಣ್ಣೀರು ಒರೆಸುವಂತಾಗಬೇಕು- ಆರುಂಡಿ ಶ್ರೀನಿವಾಸ ಮೂರ್ತಿ

Date:

Shimoga News ಷ್ಯದ ಶಿಲ್ಪಿಗಳು ನೀವೇ ಆಗಬೇಕು ಎಂದು ಕರ್ನಾಟಕ ಮಾಧ್ಯಮ ಅಕಾ ಡೆಮಿ ಪುರಸ್ಕೃತ ಆರುಂಡಿ ಶ್ರೀನಿವಾಸ ಮೂರ್ತಿ ಹೇಳಿದರು.

ಅವರು ಎಟಿಎನ್‌ಸಿ (ಆಚಾರ ತುಳಸಿ ವಾಣಿಜ್ಯ ಕಾಲೇಜು) ಯ ಚಂದನ ಸಭಾಂಗಣದಲ್ಲಿ ಪ್ರಥ ಮ ವರ್ಷದ ಪದವಿ ವಿದ್ಯಾರ್ಥಿ ಗಳಿಗಾಗಿ ಆಯೋಜಿಸಿದ್ದ ಸ್ವಾಗತ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣ ಬಹಳ ಮಹತ್ವವಾದದ್ದು. ಎಲ್ಲಾ ಇಷ್ಟ-ಕಷ್ಟಗಳನ್ನು ದಾಟಿ, ಈಗ ಜವಾಬ್ದಾರಿ ಸ್ಥಾನದಲ್ಲಿ ವ್ಯಾಸಂಗ ಮಾಡುತ್ತಿರುವಿರಿ. ಅಂಕಗಳನ್ನು ಪಡೆಯುವುದಷ್ಟೇ

ಮುಖ್ಯವಲ್ಲ, ಇದರ ಜೊತೆಗೆ ಮಾನ ವೀಯತೆ, ಅಂತಃಕರಣ ಬೆಳೆಸಿಕೊಳ್ಳ ಬೇಕು. ನೀವು ಪಡೆದ ಶಿಕ್ಷಣ. ನೊಂದವರ ಕಣ್ಣೀರು ಒರೆಸುವಂತಾಗಬೇಕು. ಮಿತಿಮೀರಿದ ಆಕಾಂಕ್ಷೆಗಳು, ಅನಗತ್ಯ ಒತ್ತಡಗಳನ್ನು ಸೃಷ್ಟಿಸುತ್ತಿವೆ. ಅವುಗಳಿಂದ ಹೊರಬನ್ನಿ, ಭ್ರಮೆಗಳನ್ನು ಕಳಚಿಡಿ. ನಿಮ್ಮ ಭವಿಷ್ಯದ ಶಿಲ್ಪಿಗಳು ನೀವೇ ಆಗಿರುವಿರಿ ಎಂದರು.

ಮುಖ್ಯ ಅತಿಥಿಯಾಗಿ ಮಾತನಾ ಡಿದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ. ವಿಜಯ ಕುಮಾರ್, ಎನ್.ಎಸ್. ಎಸ್. ವಿದ್ಯಾ ರ್ಥಿಗಳಲ್ಲಿ ನಾಯಕತ್ವ, ಸಹೋದರತೆ, ಮತ್ತು ಸಾಮರಸ್ಯತೆ ಯನ್ನು ಮೂಡಿಸುತ್ತದೆ. ಪಠ್ಯಚಟುವಟಿಕೆಗಳ ಜೊತೆಗೆ ಪಕ್ಷೇತರ ಚಟುವಟಿಕೆಗಳಲ್ಲೂ

ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದರು.

Shimoga News ಇದೇ ಸಂದರ್ಭದಲ್ಲಿ ರೋಟರಿ ಪೂರ್ವ ಕಾರ್ಯದರ್ಶಿ ಹಾಗೂ ನಿವೃತ್ತ ಪ್ರಾಂಶುಪಾಲ ಪ್ರೊ. ಧನಂಜಯ ಅವರನ್ನು ಸನ್ಮಾನಿಸಲಾಯಿತು.

ಅಧ್ಯಕ್ಷತೆಯನ್ನು ಪ್ರಾಂಶುಪಾಲೆ ಪ್ರೊ. ಪಿ.ಆರ್. ಮಮತಾ ವಹಿಸಿದ್ದರು. ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ಸಂಚಾಲಕ ಪ್ರೊ. ಕೆ.ಎಂ. ನಾಗರಾಜ್, ಐಕ್ಯೂಎಸಿ ವಿಭಾಗದ ಪ್ರೊ. ಮಂಜುನಾಥ್ ಎನ್.. ಪ್ರೊ. ಸೌರ್ಪಣಿಕಾ ಉಮೇಶ್, ಪ್ರೊ. ನವೀನ್ ತೇಲ್ಕರ್, ಪ್ರೊ. ಶೃತಿ ಕೆ.. ಪ್ರೊ. ಶ್ರೀಲಲತಾ ಎಂ.ಕೆ. ಸೇರಿದಂತೆ ಹಲವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...