Monday, February 2, 2026
Monday, February 2, 2026

Rotary Shimoga ಇಂಟರ್ಯಾಕ್ಟ್ ಸಂಸ್ಥೆಯು ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸುತ್ತದೆ-ಕೆ.ಬಿ.ರವಿಶಂಕರ್

Date:

Rotary Shimoga ಮಕ್ಕಳಿಗೆ ಶಾಲಾ ಹಂತದಲ್ಲಿ ನಾಯಕತ್ವದ ಗುಣವನ್ನು ಬೆಳೆಸಲು ರೋಟರಿ ಸಂಸ್ಥೆಯ ಇಂಟರಾಕ್ಟ್ ಕ್ಲಬ್ ನೆರವಾಗುತ್ತದೆ ಎಂದು ರೋಟರಿ ಶಿವಮೊಗ್ಗ ಪೂರ್ವ ಎಜುಕೇಷನ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕೆ.ಬಿ.ರವಿಶಂಕರ್ ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಆಯೋಜಿಸಿದ್ದ ರೋಟರಿ ಇಂಟರಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿ, ಇಂಟರಾಕ್ಟ್ ಮುಖಾಂತರ ಮಕ್ಕಳಲ್ಲಿ ನಾಯಕತ್ವ ಕೌಶಲ್ಯಗಳನ್ನು ಬೆಳೆಸಲು ಸಾಧ್ಯವಾಗಲಿದೆ. ಟೀಂ ವರ್ಕ್ ಕಲಿಯಬಹುದು. ಸಮಾಜದ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬಹುದು. ಇದು ಕೇವಲ ಕ್ಲಬ್ ಅಲ್ಲ, ವ್ಯಕ್ತಿತ್ವ ನಿರ್ಮಾಣದ ಮಾರ್ಗವಾಗಿದೆ ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವದ ಅಧ್ಯಕ್ಷ ಕಿಶೋರ್ ಕುಮಾರ್ ಡಿ ಮಾತನಾಡಿ, ಈ ಶಾಲೆಯಲ್ಲಿ ಕಲಿತ ಪಾಠಗಳು ನಿಮ್ಮನ್ನು ಜೀವನದಲ್ಲಿ ಮಹಾನ್ ವ್ಯಕ್ತಿಗಳಾಗಿ ರೂಪಿಸಲಿದೆ. ವಿದ್ಯಾರ್ಥಿಗಳು ಸಮಾಜಮುಖಿ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

Rotary Shimoga ರೋಟರಿ ಶಿವಮೊಗ್ಗ ಪೂರ್ವದ ಕಾರ್ಯದರ್ಶಿ ಡಾ. ಧನಂಜಯ್ ಮಾತನಾಡಿ, ಮಕ್ಕಳಲ್ಲಿ ಅಸಾಧಾರಣ ಸಾಮರ್ಥ ಹೊಂದಿರುವವರು ಇರುತ್ತಾರೆ. ನಮ್ಮ ಭವಿಷ್ಯ ನಾವೇ ನಿರ್ಮಿಸಿಕೊಳ್ಳಬೇಕು ಎಂದು ಹೇಳಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ಶಿಕ್ಷಣದಿಂದ ಉತ್ತಮ ಬದುಕು ರೂಪಿಸಿಕೊಳ್ಳಬಹುದು. ಇತರರ ಬದುಕನ್ನೂ ಬೆಳಗಿಸಬಹುದು ಎಂದರು.

ಟ್ರಸ್ಟ್ ಉಪಾಧ್ಯಕ್ಷೆ ನಾಗವೇಣಿ ಮಾತನಾಡಿ, ಬಡತನ ಎನ್ನುವುದು ಅಡಚಣೆಯಾಗಬಹುದು. ಆದರೆ ಅದು ಕನಸುಗಳಿಗೆ ಕಡಿವಾಣವಲ್ಲ. ನಮ್ಮ ಹಿನ್ನೆಲೆ ಏನೇ ಇರಲಿ, ಶ್ರದ್ಧೆ, ಶ್ರಮ ಮತ್ತು ನಂಬಿಕೆಯಿಂದ ನಾವು ಉನ್ನತ ಸಾಧನೆ ಮಾಡಬಹುದು ಎಂದು ತಿಳಿಸಿದರು.

ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಶಬ್ಧಕೋಶಗಳನ್ನು ನೀಡಿ ಗೌರವಿಸಲಾಯಿತು. ಇಂಟರಾಕ್ಟ್ ಕ್ಲಬ್ ನೂತನ ಅಧ್ಯಕ್ಷರಾಗಿ ಪ್ರೀತಮ್, ಕಾರ್ಯದರ್ಶಿಯಾಗಿ
ಬನಶ್ರೀ ಅಧಿಕಾರ ವಹಿಸಿಕೊಂಡು. ಶಾಲೆಯ ವಿದ್ಯಾರ್ಥಿಗಳಿಗೆ ಡಿಕ್ಷನರಿ, ಪೆನ್, ನೋಟ್‌ಬುಕ್ ವಿತರಿಸಲಾಯಿತು.

ಟ್ರಸ್ಟ್ ಅಧ್ಯಕ್ಷರಾದ ರಾಮಚಂದ್ರ, ಮುಷ್ತಕ್ ಆಲಿ, ಪರಮೇಶ್, ಗಣೇಶ್, ಆರ್.ಮನೋಹರ್, ಪ್ರೀತಮ್, ರೂಪ, ಬನಶ್ರಿ, ಮುಖ್ಯಶಿಕ್ಷಕ ಸೂರ್ಯನಾರಾಯಣ್ ಮತ್ತಿತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...