Monday, May 4, 2026
Monday, May 4, 2026

District Consumer Disputes Redressal Commission ವಿಮಾ ಮೊತ್ತ‌ ಮಂಜೂರಿಗೆ ನಿರಾಕರಿಸಿ ಸೇವಾ ನ್ಯೂನತೆ. ಪರಿಹಾರ ನೀಡಲು ಆದೇಶ

Date:

District Consumer Disputes Redressal Commission ಶ್ರೀಮತಿ ಆರ್. ರಾಜೇಶ್ವರಿ ಕೋಂ ಲೇಟ್ ಟಿ.ಎಸ್. ಶಿವಕುಮಾರ್, ಶ್ರೀ ದುರ್ಗಮ್ಮ ದೇವಸ್ಥಾನ, ಕಾಮಾಕ್ಷಿ ಬೀದಿ, ಶಿವಮೊಗ್ಗ ಇವರು ಐಸಿಐಸಿಐ ಪ್ರಡೆನ್ಷಿಯಲ್ ಲೈಫ್ ಇನ್ಷೂರನ್ಸ್- ಬೆಂಗಳೂರು, ಐಸಿಐಸಿಐ ಪ್ರಡೆನ್ಷಿಯಲ್ ಲೈಫ್ ಇನ್ಷೂರನ್ಸ್- ಮುಂಬೈ, ಇಂಡಸಿಂಡ್ ಬ್ಯಾಂಕ್ ಲಿ., ಶಿವಮೊಗ್ಗ ಮತ್ತು ಇಂಡಸಿಂಡ್ ಬ್ಯಾಂಕ್ ಲಿ., ಬೆಂಗಳೂರು ಇವರುಗಳ ವಿರುದ್ದ ವಿಮಾ ಸೌಲಭ್ಯ ನೀಡುವಲ್ಲಿನ ಸೇವಾ ನ್ಯೂನತೆ ಕುರಿತು ವಕೀಲರ ಮೂಲಕ ಸಲ್ಲಿಸಿದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ವಿಮಾ ಕಂಪೆನಿಯು ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ತೀರ್ಪು ನೀಡಿದೆ.
ದೂರುದಾರರಾದ ಶ್ರೀಮತಿ ಆರ್. ರಾಜೇಶ್ವರಿಯವರ ಪತಿ ಖರೀದಿಸಿದ್ದ ಅಶೋಕ ಲೈಲ್ಯಾಂಡ್ ಬೋರ್‌ವೆಲ್ ಲಾರಿಯ ಮೇಲೆ ಐಸಿಐಸಿಐ ಪ್ರಡೆನ್ಷಿಯಲ್ ಲೈಫ್ ಇನ್ಷೂರನ್ಸ್ ರವರಿಂದ ರೂ. 1,04,878/- ವಿಮಾ ಫ್ರಿಮಿಯಂ ಪಡೆದಿದ್ದು, 2024ರಲ್ಲಿ ಪಾಲಿಸಿದಾರರು ತೀರಿಕೊಂಡಿದ್ದರು. ಈ ಕುರಿತು ಇನ್ಷೂರನ್ಸ್ ಕಂಪನಿಗೆ ತಿಳಿಸಿ, ವಿಮಾ ಭರವಸೆಯ ಮೊತ್ತದಲ್ಲಿ ಸಾಲದ ಮೊತ್ತವನ್ನು ಭರಿಸಲು ಕೋರಿರುತ್ತಾರೆ. 1 ಮತ್ತು 2ನೇ ಎದುರುದಾರರಿಂದ ವಿಮಾ ಪಾಲಿಸಿಯ ಪ್ರೀಮಿಯಂ ಹಣವನ್ನು 3ನೇ ಎದುರುದಾರರಿಂದ 2023ರಂದು ಪಡೆದಿದ್ದು, ದೂರುದಾರರ ಪತಿ ಮರಣ ಹೊಂದಿದ ನಂತರ ದೂರುದಾರರ ಪತಿಯ ಸಾಲದ ಖಾತೆಗೆ ಜಮಾ ಮಾಡಿರುವುದರಿಂದ ಎಲ್ಲಾ ಎದುರುದಾರರು ಸೇವಾ ನ್ಯೂನ್ಯತೆಯನ್ನುಂಟು ಮಾಡಿರುತ್ತಾರೆ ಎಂದು ದೂರು ಸಲ್ಲಿರುತ್ತಾರೆ.
District Consumer Disputes Redressal Commission ದೂರನ್ನು ದಾಖಲಿಸಿಕೊಂಡ ಆಯೋಗವು ನೀಡಿದ ನೋಟಿಸ್‌ಗೆ ಎದುರುದಾರರು ವಕೀಲರ ಮೂಲಕ ಹಾಜರಾಗಿ ದೂರುದಾರರು ಪಾಲಿಸಿಯನ್ನು ಪಡೆಯುವ ಪೂರ್ವದಲ್ಲಿ ಟಿ.ಎಂ.ಟಿ. ವೈದ್ಯಕೀಯ ತಪಾಸಣೆಯನ್ನು ತೃಪ್ತಿಕರವಾಗಿ ಪೂರ್ಣಗೊಳಿಸಿರುವುದಿಲ್ಲ ಹಾಗೂ ನಿಧನ ಹೊಂದಿದ ದಿನದಂದು ಪಾಲಿಸಿಯು ಚಾಲ್ತಿಯಲ್ಲಿರಲಿಲ್ಲ ಎಂಬ ಕಾರಣದೊಂದಿಗೆ ಪಾಲಿಸಿಯ ಭರವಸೆ ಮೊತ್ತ ಪಾವತಿಸಲು ಸಾಧ್ಯವಿಲ್ಲವೆಂದು ತಕರಾರು ಸಲ್ಲಿಸಿರುತ್ತಾರೆ. ದೂರುದಾರರು ಮತ್ತು ಎದುರುದಾರರು ಸಲ್ಲಿಸಿರುವ ಪ್ರಮಾಣ ಪತ್ರ ಮತ್ತು ದಾಖಲೆಗಳನ್ನು ಪರಿಶೀಲಿಸಿ ಮತ್ತು ಉಭಯ ಪಕ್ಷಗಾರರ ವಕೀಲರ ವಾದವನ್ನು ಆಲಿಸಿ, ಎದುರುದಾರರು ಸೇವಾ ನ್ಯೂನತೆ ಎಸಗಿರುವುದಾಗಿ ಪರಿಗಣಿಸಿ ದೂರುದಾರರು ಸಲ್ಲಿಸಿರುವ ದೂರನ್ನು ಭಾಗಶಃ ಪುರಸ್ಕರಿಸಿ, 1 ಮತ್ತು 2ನೇ ಎದುರುದಾರರು ಜಂಟಿಯಾಗಿ ಮತ್ತು ಪ್ರತ್ಯೇಕವಾಗಿ ಪಾಲಿಸಿ ಪ್ರಸ್ಥಾವನೆಯಲ್ಲಿರುವ ಮೊತ್ತ ರೂ.36,38,583/- ಗಳನ್ನು ಈ ಆದೇಶವಾದ 45 ದಿನಗಳೊಳಗೆ ಪಾವತಿಸಲು ತಪ್ಪಿದ್ದಲ್ಲಿ ದಿ:21/04/2025 ರಿಂದ ಅನ್ವಯವಾಗುವಂತೆ ವಾರ್ಷಿಕ ಶೇ.10.45 ರಂತೆ ಬಡ್ಡಿ ಸಹಿತ ಪಾವತಿಸುವುದು. 3 ಮತ್ತು 4ನೇ ಎದುರುದಾರರು ದೂರುದಾರರ ಪತಿಯ ಉಳಿಕೆ ಸಾಲದ ವಿವರಗಳನ್ನು 1 ಮತ್ತು 2ನೇ ಎದುರುದಾರರಿಗೆ ಒದಗಿಸಿ, ಪಾಲಿಸಿಯ ಮೊತ್ತವನ್ನು ದೂರುದಾರರ ಸಾಲದ ಖಾತೆಗೆ ಜಮೆ ಪಡೆಯಲು ಕ್ರಮವಹಿಸಲು ಹಾಗೂ 1 ರಿಂದ 4ನೇ ಎದುರುದಾರರು ಜಂಟಿಯಾಗಿ ಮತ್ತು ಪ್ರತ್ಯೇಕವಾಗಿ ರೂ. 40,000 ಗಳನ್ನು ಮಾನಸಿಕ ಹಿಂಸೆಗಾಗಿ ಮತ್ತು ರೂ.10,000 ಗಳನ್ನು ವ್ಯಾಜ್ಯದ ಖರ್ಚಾಗಿ ನೀಡಬೇಕೆಂದು, ತಪ್ಪಿದ್ದಲ್ಲಿ ಈ ಆದೇಶವಾದ ದಿನದಿಂದ ಪೂರ್ತಿ ಹಣ ಪಾವತಿಸುವವರೆಗೆ ಮೇಲ್ಕಂಡ ಮೊತ್ತಕ್ಕೆ ವಾರ್ಷಿಕ ಶೇ. 12 ರಂತೆ ಬಡ್ಡಿಯನ್ನು ಸೇರಿಸಿ ನೀಡತಕ್ಕದ್ದು ಎಂದು ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ ಮತ್ತು ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯ ಇವರನ್ನೊಳಗೊಂಡ ಪೀಠವು ಜು.16 ರಂದು ಆದೇಶಿಸಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ರಿಜಿಸ್ಟ್ರಾರ್ ಗಂಗಾಧರ ನಾಯ್ಕ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...