Monday, February 2, 2026
Monday, February 2, 2026

Keladi Shivappa Nayaka University ಶಿವಪ್ಪನಾಯಕ ಕೃಷಿ ವಿವಿ ಯಿಂದ ಉತ್ತಮ ರೈತ/ ರೈತಮಹಿಳೆ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Date:

Keladi Shivappa Nayaka University ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಪ್ರತಿ ವರ್ಷದಂತೆ ಈ ವರ್ಷವೂ ಪ್ರಗತಿಪರ ರೈತ/ರೈತ ಮಹಿಳೆ ಪ್ರಶಸ್ತಿಯನ್ನು ಕೃಷಿ ಮತ್ತು ತೋಟಗಾರಿಕಾ ಮೇಳದಲ್ಲಿ ನೀಡಿ ಸನ್ಮಾನಿಸಲು ತೀರ್ಮಾನಿಸಲಾಗಿದೆ. ವಿಶ್ವವಿದ್ಯಾಲಯದ ವ್ಯಾಪ್ತಿಯ ಏಳು ಜಿಲ್ಲೆಗಳಾದ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯ ಪ್ರಗತಿ ಪರ ರೈತ/ರೈತ ಮಹಿಳೆಯರು ಅರ್ಜಿ ಸಲ್ಲಿಸಲು ಕೋರಲಾಗಿದೆ. ಅರ್ಜಿ ಸಲ್ಲಿಸಿದ ರೈತ/ರೈತ ಮಹಿಳೆಯರಲ್ಲಿ ಪ್ರತಿ ಜಿಲ್ಲೆಯಿಂದ ಒಬ್ಬ ರೈತ ಮತ್ತು ಒಬ್ಬ ರೈತ ಮಹಿಳೆಯನ್ನು ಆಯ್ಕೆ ಮಾಡಿ, ಪ್ರಶಸ್ತಿ ಪುರಸ್ಕಾರ ಮಾಡಲಾಗುವುದು, ಈ ಪ್ರಶಸ್ತಿಯನ್ನು ಅಕ್ಟೋಬರ್-2025 ರಲ್ಲಿ ಜರುಗುವ ಕೃಷಿ ಮತ್ತು ತೋಟಗಾರಿಕಾ ಮೇಳದಲ್ಲಿ ಪ್ರಧಾನ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಯಶಸ್ವಿ ಪ್ರಗತಿಪರ ರೈತ ಮತ್ತು ರೈತ ಮಹಿಳೆಯರು ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿ ಅಥವಾ ಕೃಷಿ ವಿಜ್ಞಾನ ಕೇಂದ್ರಗಳು ಅಥವಾ ವಿಸ್ತರಣಾ ಶಿಕ್ಷಣ ಘಟಕಗಳಲ್ಲಿ ಅರ್ಜಿ ಪಡೆಯಬಹುದು ಅಥವಾ https://www.uahs.edu.in/ ನಲ್ಲಿ ಲಭ್ಯವಿರುವ ಅರ್ಜಿ ತೆಗೆದುಕೊಂಡು ಭರ್ತಿ ಮಾಡಿ, ಭರ್ತಿ ಮಾಡಿದ ಅರ್ಜಿಯನ್ನು ದಿನಾಂಕ 15ನೇ ಸೆಪ್ಟೆಂಬರ್ 2025 ರ ಒಳಗೆ ತಲುಪುವಂತೆ ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಬೇಕು.

Keladi Shivappa Nayaka University
ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಜಂಟಿ ನಿರ್ದೇಶಕರು ಅಥವಾ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರುಗಳು, ಕೃಷಿ ವಿಜ್ಞಾನ ಕೇಂದ್ರ ಇವರನ್ನು ಸಂಪರ್ಕಿಸಬೇಕಾದ ಸಂಖ್ಯೆಗಳು: ಶಿವಮೊಗ್ಗ- 9480838976, 8277932600, ದಾವಣಗೆರೆ-9480838209, ಚಿಕ್ಕಮಗಳೂರು- 9480838203, 8277930890,

ಉಡುಪಿ-9480838202, 8277932500, ಚಿತ್ರದುರ್ಗ-9480838201, ದಕ್ಷಿಣ ಕನ್ನಡ- 8794706468, 8277931060, ಮಡಿಕೇರಿ- 9480838210, 7259005540

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...