Friday, March 20, 2026
Friday, March 20, 2026

Department of Youth Empowerment and Sports ಶಿವಮೊಗ್ಗ ಜಿಲ್ಲೆಯಲ್ಲಿನ ತಾಲ್ಲೂಕು‌ ಮಟ್ಟದ ದಸರಾ ಕ್ರೀಡಾಕೂಟ, ನಡೆಸಲಿರುವ ದಿನಾಂಕಗಳ ಮಾಹಿತಿ

Date:

Department of Youth Empowerment and Sports ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2025-26 ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ.

ಕ್ರೀಡಾ ಕೂಟವನ್ನು ಆಯಾ ತಾಲ್ಲೂಕುಗಳಲ್ಲಿ ಆಯೋಜನೆ ಮಾಡಲಾಗಿದೆ. ದಿ: 16-08-2025 ರಂದು ನೆಹರು ಕ್ರೀಡಾಂಗಣ ಶಿವಮೊಗ್ಗ. ದಿ: 17-08-2025 ರಂದು ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನ ತೀರ್ಥಹಳ್ಳಿ. ದಿ: 22-08-2025 ತಾಲ್ಲೂಕು ಕ್ರೀಡಾಂಗಣ ಶಿಕಾರಿಪುರ. ದಿ: 23-08-2025 ರಂದು ತಾಲ್ಲೂಕು ಕ್ರೀಡಾಂಗಣ ಹೊಸನಗರ. ದಿ: 24-08-2025 ರಂದು ನೆಹರೂ ಮೈದಾನ ಸಾಗರ, ವಿ.ಐ.ಎಸ್.ಎಲ್. ಕ್ರೀಡಾಂಗಣ ಭದ್ರಾವತಿ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನ ಸೊರಬ ಇಲ್ಲಿ ನೆಡೆಸಲಾಗುವುದು.

ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್ ಬಾಲ್, ಖೋ ಖೋ, ಕಬಡ್ಡಿ, ಥ್ರೋಬಾಲ್, ಮತ್ತು ಯೋಗಾಸನ ಸ್ಪರ್ಧೆಗಳನ್ನು ಮಾತ್ರ ಏರ್ಪಡಿಸಲಾಗಿದೆ.

ವೈಯಕ್ತಿಕ ಕ್ರೀಡೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದಿರುತ್ತಾರೆ.

ಆಯಾ ತಾಲ್ಲೂಕಿನ ಕ್ರೀಡಾಪಟುಗಳು ಆಯಾ ತಾಲ್ಲೂಕಿನಲ್ಲಿ ಮಾತ್ರ ಭಾಗವಹಿಸಲು ಅರ್ಹತೆ ಹೊಂದಿರುತ್ತಾರೆ. ಭಾಗವಹಿಸುವ ಸಮಯದಲ್ಲಿ ಮೂಲ ಆಧಾರ್ ಕಾರ್ಡ್ ತರುವುದು ಕಡ್ಡಾಯವಾಗಿರುತ್ತದೆ. ಬೇರೆ ತಾಲ್ಲೂಕಿನ ಆಟಗಾರರು ಭಾಗವಹಿಸಬೇಕಾದರೆ ಆ ತಾಲ್ಲೂಕಿನಲ್ಲಿ ಅವರು ಶಿಕ್ಷಣ ಪಡೆಯುತ್ತಿರಬೇಕು. ಒಂದು ವೇಳೆ ಬೇರೆ ತಾಲ್ಲೂಕಿನ ಆಟಗಾರರು ಕ್ರೀಡೆಯಲ್ಲಿ ಪಾಲ್ಗೂಂಡಲ್ಲಿ ನಿರ್ದಾಕ್ಷಿಣ್ಯವಾಗಿ ತೆಗೆದು ಹಾಕಲಾಗುವುದು.

Department of Youth Empowerment and Sports ಒಬ್ಬರಿಗೆ ಎರಡು ವೈಯಕ್ತಿಕ ಹಾಗೂ ಒಂದು ಗುಂಪು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶವಿದ್ದು, ಬೆಳಿಗ್ಗೆ 9.30 ಗಂಟೆಯೊಳಗೆ ನೋಂದಣಿ ಮಾಡಿಕೊಂಡವರಿಗೆ ಮಾತ್ರ ಆಟವಾಡುವ ಅವಕಾಶ ಮತ್ತು ಉಪಹಾರದ ವ್ಯವಸ್ಥೆ ಇರುತ್ತದೆ. ಕ್ರೀಡಾಕೂಟವನ್ನು ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಏರ್ಪಡಿಸಲಾಗಿದ್ದು, ಸಮಯಕ್ಕೆ ಸರಿಯಾಗಿ ಹಾಜರಿರದ ತಂಡಗಳನ್ನು ನಿರ್ದಾಕ್ಷಿಣ್ಯವಾಗಿ ತೆಗೆದು ಹಾಕಲಾಗುವುದು. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿದ್ದು, ಮನವಿಯನ್ನು ಸಲ್ಲಿಸಲು ಅವಕಾಶವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿಗಳು, ದೂ.ಸಂ.08182-223328 ಗೆ ಸಂರ್ಕಿಸಬಹುದು ಎಂದು ಶಿವಮೊಗ್ಗ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...