Thursday, June 18, 2026
Thursday, June 18, 2026

S.N.Chennabasappa ಬೀದಿಬದಿ ಹೂವಿನ ವ್ಯಾಪಾರಿಗಳಿಗೆ ಶಾಶ್ವತ ವ್ಯವಸ್ಥೆ ಆಗುವವರೆಗೂ ತಾತ್ಕಾಲಿಕವಾಗಿ ತೊಂದರೆ ಕೊಡಬೇಡಿ- ಶಾಸಕ ಚನ್ನಬಸಪ್ಪ

Date:

S.N.Chennabasappa ಟ್ರಾಫಿಕ್ ಸಮಸ್ಯೆಯ ನೆಪದಲ್ಲಿ ಟ್ರಾಫಿಕ್ ಪೊಲೀಸರು ಮತ್ತು ಪಾಲಿಕೆ ಅಧಿಕಾರಿಗಳು ಹೂವಿನ ವ್ಯಾಪಾರಿಗಳಿಗೆ ತೊಂದರೆ ನೀಡುತ್ತಿರುವ ಕುರಿತು ವ್ಯಾಪಾರಿಗಳು ಹಾಗೂ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ, ಇಂದು ಬೆಳಗ್ಗೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಶಿವಮೊಗ್ಗದ ಶಿವಪ್ಪ ನಾಯಕ ಹೂವಿನ ಮಾರುಕಟ್ಟೆಗೆ ಪಾಲಿಕೆ ಅಧಿಕಾರಿಗಳು ಭೇಟಿ ನೀಡಿದರು.

ಶ್ರಾವಣ ಮಾಸದ ಹಿನ್ನಲೆಯಲ್ಲಿ ಹೂವಿನ ವ್ಯಾಪಾರವು ಸಕ್ರಿಯಗೊಂಡಿರುವ ಈ ಸಂದರ್ಭದಲ್ಲಿ, ವ್ಯಾಪಾರಿಗಳಿಗೆ ಯಾವುದೇ ಅಡಚಣೆ ಉಂಟಾಗದಂತೆ ಕ್ರಮ ಕೈಗೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

S.N.Chennabasappa ಈಗಾಗಲೇ ಪಾಲಿಕೆ ವತಿಯಿಂದ ಹೂವಿನ ವ್ಯಾಪಾರಿಗಳಿಗೆ ಶಾಶ್ವತ ಪರಿಹಾರವಾಗಿ ಮಳಿಗೆಗಳು ನಿರ್ಮಿಸಲಾಗಿದ್ದು, ಅದರ ಹಂಚಿಕೆಯ ಪ್ರಕ್ರಿಯೆ ಶೀಘ್ರ ಆರಂಭವಾಗಲಿದ್ದು, ಮಳಿಗೆ ಹಂಚಿಕೆಯಾಗುವವರೆಗೂ ಯಾವುದೇ ತೆರವು ಕಾರ್ಯಾಚರಣೆ ಅಥವಾ ಅಡಚಣೆ ಉಂಟುಮಾಡದಂತೆ, ತಾತ್ಕಾಲಿಕವಾಗಿ ವ್ಯಾಪಾರ ಮಾಡುವ ಅವಕಾಶ ಕಲ್ಪಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...