ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಮಾಜಿ ಉಪಾಧ್ಯಕ್ಷರು. ರಾಷ್ಟ್ರೀಯ ಸ್ವಯಂ ಸೇವಕ . ಸಂಘ ಪರಿವಾರದ ಹಿರಿಯರು ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ ಹಿರಿಯರು ಆದ ಬಿ ಹೆಚ್ ರುದ್ರಪ್ಪನವರು 94 ವರ್ಷ. ಇವರಿಗೆ. ಇಬ್ಬರು ಹೆಣ್ಣು ಮಕ್ಕಳು ಇಬ್ಬರು ಗಂಡು ಮಕ್ಕಳು ಇದ್ದು. ನಿನ್ನೆ ಸಂಜೆ ಅವರ ಸ್ವಗೃಹದಲ್ಲಿ ದೈವಾಧೀನರಾದರು. ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ ಎಂದು ಹಾಗೂ ಮೃತರ ಕುಟುಂಬ ವರ್ಗದವರಿಗೆ ಅವರ ಅಗಲಿಕೆಯ ಶೋಕವನ್ನು ಭರಿಸುವ ಶಕ್ತಿಯನ್ನು ಭಗವಂತನು ದಯಪಾಲಿಸಲಿ ಎಂದು ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಿಲ್ಲಾ ಅಧ್ಯಕ್ಷರಾದ ಜಿ ವಿಜಯಕುಮಾರ್. ಕಾರ್ಯದರ್ಶಿ ಕಿರಣ್ ಕುಮಾರ್ ಸಜ್ಜನ್. ಹಾಗೂ ಗೌರವಾಧ್ಯಕ್ಷರಾದ ಭದ್ರಾವತಿ ಶಾಸಕರಾದ ಬಿಕೆ ಶ್ರೀ ಸಂಗಮೇಶ್ವರ.. ಕಟ್ಟಡ ಸಮಿತಿಯ ಅಧ್ಯಕ್ಷರಾದ ಎಸ್ ಎಸ್ ಜ್ಯೋತಿ ಪ್ರಕಾಶ್. ನಿರ್ದೇಶಕರಗಳಾದ ಕಾನೂರು ಮಲ್ಲಿಕಾರ್ಜುನ್. ಎಂವಿ ಸಜ್ಜನ್ ಶೆಟ್ಟರ್. ಹಾಗೂ ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ನಿರ್ದೇಶಕರು ಪದಾಧಿಕಾರಿಗಳು ಸದಸ್ಯರು. ಹಾಗೂ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕು ಘಟಕದ ಅಧ್ಯಕ್ಷರು ಕಾರ್ಯದರ್ಶಿಗಳು ಪದಾಧಿಕಾರಿಗಳು ತೀರ್ವ ಸಂತಾಪ ವ್ಯಕ್ತಪಡಿಸಿದ್ದಾರೆ. ಇವರ ಅಂತ್ಯ ಸಂಸ್ಕಾರ ಇಂದು ಭದ್ರಾವತಿಯ ವೀರಶೈವ ರುದ್ರಭೂಮಿಯಲ್ಲಿ. ಸಂಜೆ 4:00ಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ನೇತ್ರ ದಾನಿ ಭದ್ರಾವತಿಯ ಬಿ.ಹೆಚ್.ರುದ್ರಪ್ಪ ನಿಧನ
Date:
