Thursday, September 17, 2026
Thursday, September 17, 2026

D.K.Shivakumar ಬಿಜೆಪಿಯ ಕೆಲವು ಖಾಲಿ ಟ್ರಂಕುಗಳು ಶಬ್ದ ಮಾತ್ರ ಮಾಡುತ್ತವೆ : ಡಿಸಿಎಂ ಡಿ.ಕೆ.ಶಿವಕುಮಾರ್

Date:

D.K.Shivakumar ಬಿಜೆಪಿಯ ಕೆಲವು ಖಾಲಿ ಟ್ರಂಕುಗಳು ಶಬ್ದ ಮಾತ್ರ ಮಾಡುತ್ತವೆ. ಬರೀ ಶಬ್ದ ಮಾಡುವವರು ಸಂಸತ್ ನಲ್ಲಿ ಮಾತನಾಡಿ, ಪ್ರಧಾನ‌ಮಂತ್ರಿಯವರನ್ನು ಭೇಟಿ ಮಾಡಿ ರಾಜ್ಯಕ್ಕೆ ಹತ್ತು ರೂಪಾಯಿಯಾದರೂ ಅನುದಾನ ತೆಗೆದುಕೊಂಡು ಬರಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ಸಂಸದರ ಮೇಲೆ ಮಾತಿನ ಚಾಟಿ ಬೀಸಿದ್ದಾರೆ. ಪ್ರಧಾನಿಯವರ ಮಾತಿನ ಮೇಲೆ ಭರವಸೆಯಿದೆ. ಬೆಂಗಳೂರು ಅಭಿವೃದ್ಧಿಗೆ ಅನುದಾನ ನೀಡುವ ಬಗ್ಗೆ ಪ್ರಧಾನಿಯವರ ಬಳಿ ಮಾತನಾಡಿದೆ. ಅವರು ನಮ್ಮ‌ ಮನವಿಯನ್ನು ಗಮನಿಸುವುದಾಗಿ ತಿಳಿಸಿದ್ದಾರೆ. ಅವರು ಮಾತನಾಡಿದ ಶೈಲಿ ನೋಡಿದರೆ ನನಗೆ ಅವರ ಮಾತಿನ ಮೇಲೆ ಭರವಸೆಯಿದೆ. ಬೆಂಗಳೂರು ಜಾಗತಿಕ ನಗರ ಎನ್ನುವುದನ್ನು ಅವರು ಒಪ್ಪಿಕೊಂಡಿದ್ದಾರೆ. ಬೆಂಗಳೂರು ಭಾರತವನ್ನು ಪ್ರತಿನಿಧಿಸುತ್ತದೆ. D.K.Shivakumar ಬೆಂಗಳೂರು ಅಭಿವೃದ್ಧಿಗೆ ಎಲ್ಲಾ ಪಕ್ಷಗಳು ಕೊಡುಗೆ ‌ನೀಡಿವೆ. ನಾನು ಒಬ್ಬನೇ ಅಥವಾ ನಮ್ಮ ಸರ್ಕಾರದಿಂದಲೇ ಎಲ್ಲಾ ಆಗಿದೆ ಎಂದು ಹೇಳುವುದಿಲ್ಲ. ಬೆಂಗಳೂರು ದೇಶದಲ್ಲಿಯೇ ಪ್ರಮುಖ ನಗರವಾಗಿದೆ. ಇದನ್ನು ಇನ್ನೂ ಅತ್ಯುತ್ತಮ ನಗರವನ್ನಾಗಿ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಇಲ್ಲಿ ರಾಜಕೀಯಕ್ಕಿಂತ ರಾಜ್ಯದ ಹಿತಾಸಕ್ತಿ ಮುಖ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...