Monday, February 2, 2026
Monday, February 2, 2026

Gurudatta Hegde ಗಣಪತಿ ವಿಸರ್ಜನೆಗೆ ತೆಪ್ಪ ಬಳಸಿದಲ್ಲಿ ಲೈಫ್ ಜಾಕೆಟ್ ಧರಿಸುವುದುಕಡ್ಡಾಯ – ಗುರುದತ್ತ ಹೆಗಡೆ

Date:

Gurudatta Hegde ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಆ.27 ರಂದು ನಡೆಯಲಿರುವ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಿದ್ದು, ನದಿ/ಕೆರೆಗಳು/ಹಿನ್ನೀರು ಪ್ರದೇಶಗಳಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲು ತೆಪ್ಪ ಬಳಕೆ ಮಾಡಿದಲ್ಲಿ ಕಡ್ಡಾಯವಾಗಿ 3-4 ಜನರಿಗೆ ಮಾತ್ರ ಅವಕಾಶವಿದ್ದು, ಲೈಫ್ ಜಾಕೆಟ್, ನುರಿತ ಈಜುಗಾರರು ಇರುವಂತೆ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
Gurudatta Hegde ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ನಂತರ ವಿವಿಧ ದಿನಾಂಕಗಳAದು ವಿಸರ್ಜನೆಯನ್ನು ಮೆರವಣೆಗೆ ಮೂಲಕ ನದಿ/ಕೆರೆಗಳು/ಹಿನ್ನೀರು ಪ್ರದೇಶಗಳಲ್ಲಿ ವಿಸರ್ಜನೆ ಮಾಲಿದ್ದು, ಈ ಹಿಂದೆ ಶಿವಮೊಗ್ಗ ತಾಲ್ಲೂಕು ಹಾಡೋನಹಳ್ಳಿ ಗ್ರಾಮದಲ್ಲಿ ತೆಪ್ಪ ಮಗುಚಿ 12 ಜನ ಸಾವನ್ನಪ್ಪಿದ ದುರ್ಘಟನೆ ಸಂಘವಿಸಿದ್ದು, ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಗಣಪತಿ ವಿಸರ್ಜನೆ ವೇಳೆ ತೆಪ್ಪ ಬಳಕೆ ಮಾಡಿದಲ್ಲಿ ಕೇವಲ 2 ರಿಂದ 3 ಜನ ಮಾತ್ರ ತೆಪ್ಪದ ಮೂಲಕ ಲೈಫ್ ಜಾಕೆಟ್ ಧರಿಸಿಕೊಂಡು ನುರಿತ ಈಜುಗಾರರ ಸಮ್ಮುಖದಲ್ಲಿ ವಿಸರ್ಜನೆ ಮಾಡಬೇಕೆಂದು ಅವರು ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...