Saturday, December 6, 2025
Saturday, December 6, 2025

Gurudatta Hegde ಗಣೇಶ ಚತುರ್ಥಿ & ಈದ್ ಮಿಲಾದ್ ಹಬ್ಬಗಳ ಆಚರಣೆ ಬಗ್ಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ಸೌಹಾರ್ದ ಕರೆ

Date:

Gurudatta Hegde ಜಿಲ್ಲೆಯಾದ್ಯಂತ ಆಗಸ್ಟ್‌27ರಂದು ನಡೆಯಲಿರುವ ಗಣೇಶ ಚತುರ್ಥಿ ಮತ್ತು ಸೆಪ್ಟಂಬರ್‌05 ನಡೆಯಲಿರುವ ಈದ್‌ಮಿಲಾದ್‌ಹಬ್ಬಗಳನ್ನು ಸರ್ವಧರ್ಮಗಳ ಬಂಧುಗಳು ಸೌಹಾರ್ಧಯುತವಾಗಿ ಸಡಗರ ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಏರ್ಪಡಿಸಲಾಗಿದ್ದ ಸಂಬಂಧಿತ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ಹಬ್ಬಗಳ ಸಂದರ್ಭದಲ್ಲಿ ಬೈಕ್‌ರ್ಯಾಲಿ ನಡೆಸದಂತೆ, ಡಿ.ಜೆ.ಧ್ವನಿವರ್ಧಕಗಳನ್ನು ಬಳಸಿ ಮೆರವಣಿಗೆ ಮಾಡದಂತೆ ಈಗಾಗಲೇ ಆದೇಶ ಹೊರಡಿಸಲಾಗಿದೆ. ಅಲ್ಲದೇ ವಿಶೇಷವಾಗಿ ಗಣಪತಿ ವಿಸರ್ಜನಾ ಸ್ಥಳಗಳಲ್ಲಿ ತೆಪ್ಪ ಇಟ್ಟುಕೊಂಡಿರಬೇಕು. ನೀರಿಗಿಳಿಯುವವರು ಈಜು ಬಲ್ಲವರಾಗಿದ್ದು, ಮೂರ್ನಾಲ್ಕು ಜನಕ್ಕಿಂತ ಹೆಚ್ಚಿನ ಸಂಖ್ಯೆಯ ಜನ ನೀರಿಗೆ ಇಳಿಯಬಾರದು. ಅಲ್ಲದೇ ಲೈವ್‌ಜಾಕೇಟ್‌ಗಳನ್ನು ಕಡ್ಡಾಯವಾಗಿ ಧರಿಸಿರಬೇಕು ಎಂದವರು ತಿಳಿಸಿದರು.
ಗಣಪತಿ ಅಥವಾ ಈದ್‌ಮಿಲಾದ್‌ಹಬ್ಬದ ಸಂಭ್ರಮದ ಮೆರವಣಿಗೆಗಳು ಅತ್ಯಂತ ಶಾಂತಿಯುತವಾಗಿದ್ದು, ಮತ್ತೊಂದು ಸಮುದಾಯ, ಧರ್ಮ, ಜನಾಂಗಕ್ಕೆ ಅಥವಾ ಅವರ ಭಾವನೆಗಳಿಗೆ ಧಕ್ಕೆ ಉಂಟಾಗದಂತಿರಲಿ.
ನಡೆಯುವ ಪ್ರಮುಖ ಬೀದಿಗಳಲ್ಲಿ, ವರ್ತುಲಗಳಲ್ಲಿ ಸಾಕಷ್ಟು ಬೀದಿದೀಪಗಳನ್ನು ಅಳವಡಿಸಲು ಸೂಚಿಸಲಾಗಿದೆ. ಅಲ್ಲದೇ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಅಗತ್ಯವಿರುವಲ್ಲಿ ಡ್ರೋಣ ಕಣ್ಗಾವಲು ಇಡಲಾಗುವುದು ಎಂದರು.
Gurudatta Hegde ಗಣಪತಿ ವಿಸರ್ಜನಾ ಸ್ಥಳಗಳಲ್ಲಿ ಅದರಲ್ಲೂ ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿನ ಕೆರೆ, ಕಟ್ಟೆ-ಕಾಲುವೆಗಳು ಸುರಕ್ಷಿತ ತಾಣಗಳಾಗಿರುವ ಬಗ್ಗೆ ಹಾಗೂ ಅಗತ್ಯವಿರುವಲ್ಲಿ ಸೂಚನಾ ಫಲಕಗಳನ್ನು ಅಳವಡಿಸಬೇಕು. ಈ ಬಗ್ಗೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಗಮನಹರಿಸಬೇಕೆಂದವರು ತಿಳಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್‌ವರಿಷ್ಟಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್‌ಅವರು ಮಾತನಾಡಿ, ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಧರ್ಮಗಳ ಹಬ್ಬ ಆಚರಣೆಗಳು ಶಾಂತಿ-ಸೌಹಾರ್ಧಯುತವಾಗಿ ನಡೆಯುವಲ್ಲಿ ಮಹಾನಗರಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಮುಖ್ಯಾಧಿಕಾರಿಗಳು ಸ್ಥಳೀಯ ಪೊಲೀಸ್‌ಇಲಾಖೆಯ ಅಧಿಕಾರಿಗಳೊಂದಿಗೆ ಸಹಕರಿಸಬೇಕು. ಉತ್ಸವ, ಮೆರವಣಿಗೆಗಳು ನಡೆಯುವ ಸ್ಥಳಗಳಲ್ಲಿ ಸಿ.ಸಿ.ಕ್ಯಾಮರಾ, ಬೀದಿದೀಪ ಅಳವಡಿಕೆ ಹಾಗೂ ರಾಜಬೀದಿಗಳ ಸ್ವಚ್ಚತೆ ಹಾಗೂ ಕಲ್ಲುಮಣ್ಣುಗಳ ರಾಶಿಗಳು ಇಲ್ಲದಿರುವಂತೆ ಗಮನಹರಿಸಬೇಕು. ಆರೋಗ್ಯ ಇಲಾಖೆಯಿಂದ ಅಂಬುಲೆನ್ಸ್‌ಹಾಗೂ ಸ್ಥಳೀಯ ಸಂಸ್ಥೆಗಳಿಂದ ಶುದ್ಧ ಕುಡಿಯುವ ನೀರಿನ ಸ್ಥಾವರಗಳನ್ನು ಅಗತ್ಯವಿರುವಲ್ಲಿ ಸ್ಥಾಪಿಸುವಂತೆ ಸೂಚಿಸಲಾಗಿದೆ. ಈ ಕಾರ್ಯದಲ್ಲಿ ಪೊಲೀಸ್‌ಇಲಾಖೆಯು ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ಸಹಕಾರ ನೀಡಲಿದೆ ಎಂದರು.
ಶಿವಮೊಗ್ಗ, ಭದ್ರಾವತಿ ಸೇರಿದಂತೆ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ವೀಕ್ಷಣಾ ಗೋಪುರಗಳನ್ನು ನಿರ್ಮಿಸಲು ಸ್ಥಳೀಯ ಆಡಳಿತ ಗಮನಹರಿಸಬೇಕು. ಸಂಘ-ಸಂಸ್ಥೆಗಳ ಹಲವು ಕಾರ್ಯಕ್ರಮಗಳ ಪ್ರಚಾರಕ್ಕಾಗಿ ಸ್ಥಳೀಯ ಸಂಸ್ಥೆಗಳು ನೀಡಿರುವ ಪ್ರಚಾರ ಸಾಮಗ್ರಿಗಳನ್ನು ತಕ್ಷಣದಿಂದಲೇ ತೆರವುಗೊಳಿಸಲು ಸೂಚಿಸಬೇಕು. ಸರ್ಕಾರಿ ಸ್ವತ್ತುಗಳಿಗೆ ಹಾನಿ ಉಂಟಾದಲ್ಲಿ ಕಾರ್ಯಕ್ರಮಗಳ ಆಯೋಜಕರೇ ಹೊಣೆಗಾರರಾಗಿದ್ದು, ಅಲ್ಲಿನ ನಷ್ಟವನ್ನು ಭರಿಸಿಕೊಡಲು ಬದ್ದರಾಗಿರಬೇಕು. ಕೆಲವು ಸಂದರ್ಭಗಳಲ್ಲಿ ಮತೀಯ, ಜನಾಂಗೀಯ ವಿಷಯಗಳಿದ್ದಾಗ ಸೂಕ್ಷ್ಮವಾಗಿ ಕ್ರಮ ಕೈಗೊಳ್ಳಬೇಕು. ಇಂತಹ ಸಂದರ್ಭದಲ್ಲಿ ಪೊಲೀಸ್‌ಇಲಾಖೆಯ ಸಹಕಾರ ಪಡೆದುಕೊಳ್ಳುವಂತೆ ಅವರು ಸೂಚಿಸಿದರು.
ಈ ಹಬ್ಬಗಳ ಆಚರಣೆಯ ದಿನಗಳಲ್ಲಿ, ಮೆರವಣಿಗೆ ಸಾಗುವಲ್ಲಿ ವಿದ್ಯುತ್‌ವ್ಯತ್ಯಯವಾಗದಂತೆ ಮೆಸ್ಕಾಂ ಅಧಿಕಾರಿಗಳು ವಿಶೇಷ ಗಮನಹರಿಸಬೇಕು. ಗಣಪತಿ ಪ್ರತಿಷ್ಠಾಪನೆಗಾಗಿ ಏಕಗವಾಕ್ಷಿ ಸೌಲಭ್ಯದ ಮೂಲಕ ನಿಬಂಧನೆಗಳಿಗೊಳಪಟ್ಟು ಅನುಮತಿ ನೀಡಲು ಸೂಚಿಸಲಾಗಿದೆ ಎಂದರು.
ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಜ್ಜಯ್ಯ, ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ, ಮಹಾನಗರಪಾಲಿಕೆ ಆಯುಕ್ತ ಮಾಯಣ್ಣಗೌಡ, ಉಪವಿಭಾಗಾಧಿಕಾರಿ ಸತ್ಯನಾರಾಯಣ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶ್ರೀಮತಿ ಜಯಲಕ್ಷ್ಮಮ್ಮ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಥರ್ಮೋಕೋಲ್ , ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಲ್ಪಟ್ಟ ಗಣೇಶನ ವಿಗ್ರಹಗಳನ್ನು ಪೂಜೆಗೆ ಬಳಸದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಇವು ನೈಸರ್ಗಿಕವಾಗಿ ಜೈವಿಕವಾಗಿ ವಿಘಟನೀಯವಲ್ಲದವು ಮತ್ತು ಅವುಗಳು ದೀರ್ಘಕಾಲದವರೆಗೆ ನೀರಿನ ಮೇಲೆ ತೇಲುತ್ತಲೇ ಇರುತ್ತವೆ, ಇದರಿಂದಾಗಿ ಜಲಮೂಲಗಳು ಮತ್ತು ಜಲ ಪರಿಸರ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ವಿಗ್ರಹಗಳನ್ನು ಹೆಚ್ಚಾಗಿ ಸೀಸ ಮತ್ತು ಪಾದರಸದಿಂದ ಕೂಡಿದ ಬಣ್ಣಗಳಿಂದ ಅಲಂಕರಿಸಲಾಗುತ್ತದೆ, ಇದು ಜಲಮೂಲಗಳ ಸಸ್ಯ ಮತ್ತು ಪ್ರಾಣಿಗಳನ್ನು ನಾಶಮಾಡುವ ನಿರಂತರ ಪ್ರಕ್ರಿಯೆಗೆ ಕಾರಣವಾಗುತ್ತದೆ.
ಜೇಡಿಮಣ್ಣಿನ ಗಣಪತಿ ವಿಗ್ರಹಗಳನ್ನು ನೈಸರ್ಗಿಕ ಮಣ್ಣು ಮತ್ತು ಸರಳ ಜೇಡಿಮಣ್ಣಿನಿಂದ ತಯಾರಿಸಲಾಗುತ್ತದೆ, ನೈಸರ್ಗಿಕ ರಾಸಾಯನಿಕಗಳಿಂದ ಅಲಂಕರಿಸಲಾಗುತ್ತದೆ. ಈ ವಿಗ್ರಹಗಳನ್ನು ನೀರಿನಲ್ಲಿ ಮುಳುಗಿಸಿದಾಗ ಅಥವಾ ಪ್ರಕೃತಿಗೆ ಬಿಟ್ಟಾಗ, ಅವು ಯಾವುದೇ ವಿಷಕಾರಿ ವಸ್ತುಗಳನ್ನು ಬಿಡುಗಡೆ ಮಾಡದೆ ಕರಗುತ್ತವೆ. ಪ್ರಕೃತಿ ಪರಿಸರ ಸ್ನೇಹಿ ಜೇಡಿಮಣ್ಣಿನ ಗಣಪತಿ ವಿಗ್ರಹಗಳನ್ನು ಸ್ಥಳೀಯ ಕುಶಲಕರ್ಮಿಗಳಿಂದ ಪಡೆಯಲಾಗುತ್ತದೆ, ನೈಸರ್ಗಿಕ ಸಸ್ಯ ಆಧಾರಿತ ಬಣ್ಣಗಳಿಂದ ಅಲಂಕರಿಸಲಾಗುತ್ತದೆ. ಆದ್ದರಿಂದ ಸಾರ್ವಜನಿಕರು ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯನ್ನಾಗಿ ಆಚರಿಸಲು ಸಂಕಲ್ಪ ಮಾಡೋಣ. ಹಸಿರು ಪಟಾಕಿಯನ್ನೇ ಬಳಸೋಣ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...