Monday, February 2, 2026
Monday, February 2, 2026

Krishna Janmashtami ಕಲ್ಪತರು ಶ್ರೀಚೌಡೇಶ್ವರಿ ದೇಗುಲದಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ

Date:

Krishna Janmashtami ಶಿವಮೊಗ್ಗ ಹೊಸಮನೆ ಬಡಾವಣೆಯ ಪ್ರಸಿದ್ಧ ಕಲ್ಪತರು ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಪುಟಾಣಿ ಮಕ್ಕಳಿಗಾಗಿ ರಾಧಾ ಕೃಷ್ಣರ ವೇಷಭೂಷಣ ಸ್ಪರ್ಧೆ ಜರುಗಿತು. ತಾಯ್ತಂದೆಯರು ಮಕ್ಕಳಿಗೆ ಭಕ್ತಿಯಿಂದ ವೇಷಭೂಷಣ ಮಾಡಿಸಿ ಕಳುಹಿಸಿದ್ದು, ಪುಟಾಣಿಗಳ ಕಲೆ-ಭಕ್ತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಉತ್ತಮ ವೇಷಭೂಷಣ ತೊಟ್ಟ ನಾಲ್ವರು ಮಕ್ಕಳಿಗೆ ಬಹುಮಾನ ನೀಡಿ, ಎಲ್ಲರಿಗೂ ನೀತಿಕಥೆ ಪುಸ್ತಕ, ಬರವಣಿಗೆಯ ಪುಸ್ತಕ, ಪೆನ್ಸಿಲ್, ರಬ್ಬರ್ ಮತ್ತು ಸಿಹಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ರಿವರ್ ಸೈಡ್ ಅಧ್ಯಕ್ಷ ಶ್ರೀ ವಿಶ್ವನಾಥ ನಾಯಕ ಅವರು ಬಹುಮಾನ ವಿತರಿಸಿದರು.
ದೇವಸ್ಥಾನ ಸಮಿತಿ ಅಧ್ಯಕ್ಷ ಶ್ರೀ ಸಿ.ಎನ್. ಮಲ್ಲೇಶ್ ಅವರು ಶ್ರೀಕೃಷ್ಣ ಶ್ಲೋಕಗಳನ್ನು ಹೇಳಿ ಪುಟಾಣಿಗಳನ್ನು ಪ್ರೇರೇಪಿಸಿದರು.
ಪುರೋಹಿತರಾದ ಶ್ರೀ ಸಂತೋಷ್ ಭಟ್ ಅವರು ಕೃಷ್ಣ ಮಹಿಮೆಯ ಸುಂದರವಾದ ಗೀತೆ ಹಾಡಿ ಮಕ್ಕಳಿಗೆ ಸಂತೋಷ ತುಂಬಿದರು.

Krishna Janmashtami ಕಾರ್ಯಕಾರಿ ಸಮಿತಿಯ ಸದಸ್ಯರು ಮಕ್ಕಳಿಗೆ ಪ್ರೋತ್ಸಾಹ ನೀಡಿದರು. ಕೊನೆಯಲ್ಲಿ ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು.
ಈ ಕಾರ್ಯಕ್ರಮಕ್ಕೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲರಿಗೂ ದೇವಾಲಯದ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...