Sunday, August 2, 2026
Sunday, August 2, 2026

Krishna Janmashtami ಕಲ್ಪತರು ಶ್ರೀಚೌಡೇಶ್ವರಿ ದೇಗುಲದಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ

Date:

Krishna Janmashtami ಶಿವಮೊಗ್ಗ ಹೊಸಮನೆ ಬಡಾವಣೆಯ ಪ್ರಸಿದ್ಧ ಕಲ್ಪತರು ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಪುಟಾಣಿ ಮಕ್ಕಳಿಗಾಗಿ ರಾಧಾ ಕೃಷ್ಣರ ವೇಷಭೂಷಣ ಸ್ಪರ್ಧೆ ಜರುಗಿತು. ತಾಯ್ತಂದೆಯರು ಮಕ್ಕಳಿಗೆ ಭಕ್ತಿಯಿಂದ ವೇಷಭೂಷಣ ಮಾಡಿಸಿ ಕಳುಹಿಸಿದ್ದು, ಪುಟಾಣಿಗಳ ಕಲೆ-ಭಕ್ತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಉತ್ತಮ ವೇಷಭೂಷಣ ತೊಟ್ಟ ನಾಲ್ವರು ಮಕ್ಕಳಿಗೆ ಬಹುಮಾನ ನೀಡಿ, ಎಲ್ಲರಿಗೂ ನೀತಿಕಥೆ ಪುಸ್ತಕ, ಬರವಣಿಗೆಯ ಪುಸ್ತಕ, ಪೆನ್ಸಿಲ್, ರಬ್ಬರ್ ಮತ್ತು ಸಿಹಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ರಿವರ್ ಸೈಡ್ ಅಧ್ಯಕ್ಷ ಶ್ರೀ ವಿಶ್ವನಾಥ ನಾಯಕ ಅವರು ಬಹುಮಾನ ವಿತರಿಸಿದರು.
ದೇವಸ್ಥಾನ ಸಮಿತಿ ಅಧ್ಯಕ್ಷ ಶ್ರೀ ಸಿ.ಎನ್. ಮಲ್ಲೇಶ್ ಅವರು ಶ್ರೀಕೃಷ್ಣ ಶ್ಲೋಕಗಳನ್ನು ಹೇಳಿ ಪುಟಾಣಿಗಳನ್ನು ಪ್ರೇರೇಪಿಸಿದರು.
ಪುರೋಹಿತರಾದ ಶ್ರೀ ಸಂತೋಷ್ ಭಟ್ ಅವರು ಕೃಷ್ಣ ಮಹಿಮೆಯ ಸುಂದರವಾದ ಗೀತೆ ಹಾಡಿ ಮಕ್ಕಳಿಗೆ ಸಂತೋಷ ತುಂಬಿದರು.

Krishna Janmashtami ಕಾರ್ಯಕಾರಿ ಸಮಿತಿಯ ಸದಸ್ಯರು ಮಕ್ಕಳಿಗೆ ಪ್ರೋತ್ಸಾಹ ನೀಡಿದರು. ಕೊನೆಯಲ್ಲಿ ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು.
ಈ ಕಾರ್ಯಕ್ರಮಕ್ಕೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲರಿಗೂ ದೇವಾಲಯದ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ...

Rotary Club Shivamogga ನಿಸ್ವಾರ್ಥ ಸೇವೆಯಿಂದ ಸಮಾಜಕ್ಕೆ ರೊಟೇರಿಯನ್ಸ್ ದಾರಿದೀಪವಾಗಿದ್ದಾರೆ- ಸಿ.ಎಸ್.ಷಡಾಕ್ಷರಿ

Rotary Club Shivamogga ರೋಟರಿ ಸದಸ್ಯರುಗಳಲ್ಲಿ ನಾಯಕತ್ವ, ಸೇವಾ ಮನೋಭಾವ, ಸಾಮಾಜಿಕ...

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...