Tuesday, February 3, 2026
Tuesday, February 3, 2026

Bhadra Wildlife Sanctuary ಸಕ್ರೆಬೈಲ್ ಸುತ್ತಮುತ್ತ ಕಾಡಾನೆ ದಾಂಧಲೆ, ರೈತರಿಗೆ ಬೆಳೆ ನಷ್ಟ ಆತಂಕ

Date:

Bhadra Wildlife Sanctuary ಭದ್ರಾ ಅಭಯಾರಣ್ಯದಿಂದ ತುಂಗಾ ನದಿ ದಾಟಿ ಶಿವಮೊಗ್ಗ ತಾಲೂಕಿನ ಸಕ್ರೆಬೈಲ್​ ಸುತ್ತ ಮುತ್ತ ಒಂಟಿ ಸಲಗ ಪ್ರತ್ಯಕ್ಷವಾಗಿದೆ.
ಅಷ್ಟೇ ಅಲ್ಲದೆ ಸಕ್ರೆಬೈಲ್​ ಸುತ್ತಾಮುತ್ತಾ ಈ ಒಂಟಿ ಸಲಗ ದಾಂಧಲೆ ನಡೆಸುತ್ತಿದ್ದು, ರೈತರು ಬೆಳೆದ ತೆಂಗು ಹಾಗೂ ಬಾಳೆಗಿಡಗಳನ್ನು ನಾಶ ಮಾಡಿದೆ. ಆನೆಯ ಓಡಾಟವನ್ನು ವಿಡಿಯೋದಲ್ಲಿ ಸೆರೆ ಹಿಡಿದಿರುವ ಸಾರ್ವಜನಿಕರು ಅದನ್ನು ಓಡಿಸಲು ಹರಸಾಹಸ ಪಡುತ್ತಿದ್ದಾರೆ. ಆದರೆ ಅದ್ಯಾವುದಕ್ಕೂ ಕ್ಯಾರೇ ಮಾಡದ ಒಂಟಿ ಸಲಗ ತೋಟದಲ್ಲಿ ಸಿಕ್ಕ ವಸ್ತುಗಳನ್ನು ತಿನ್ನುತ್ತಾ ನದಿಯಲ್ಲಿ ಈಜುತ್ತಾ ಆನೆ ನಡೆದಿದ್ದೇ ದಾರಿ ಎಂಬಂತೆ ಓಡಾಡುತ್ತಿದೆ.
Bhadra Wildlife Sanctuary ಈ ಹಿಂದೆಯೂ ಸಹ ಅನೇಕ ಕಾಡಾನೆಗಳು ಭದ್ರಾ ಅಭಯಾರಣ್ಯದಿಂದ ನದಿ ದಾಟಿ ಈಚೆಗೆ ಬಂದಿದ್ದವು. ಕಳೆದ ತಿಂಗಳು ಸಹ ಸಕಲೇಶ್​ಪುರದಿಂದ ರೇಡಿಯೋ ಕಾಲರ್​ ಆನೆಯೊಂದು ಬಂದಿತ್ತು, ನಂತರ ಸಕ್ರೆಬೈಲ್​ನ ಕುಮ್ಕಿ ಆನೆಗಳ ಸಹಾಯದಿಂದ ಅದನ್ನು ಸೆರೆಹಿಡಿಯಲಾಗಿತ್ತು. ಇದೀಗ ಮತ್ತೊಂದು ಆನೆ ಪ್ರತ್ಯಕ್ಷವಾಗಿದ್ದು, ರೈತರಿಗೆ ಸಂಕಟವಾಗಿ ಪರಿಣಮಿಸಿದೆ. ಆನೆಯನ್ನು ಕೂಡಲೇ ಸೆರೆಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...