Monday, May 4, 2026
Monday, May 4, 2026

Bharat Scouts And Guides ಸದ್ಭಾವನೆ ದಿನಾಚರಣೆಯು ಸೌಹಾರ್ದತೆ & ರಾಷ್ಟ್ರೀಯ ಏಕತೆಯನ್ನ ಸಾರುತ್ತದೆ- ಎಸ್.ಜಿ.ಆನಂದ್

Date:

Bharat Scouts And Guides ಸೌಹಾರ್ದತೆ ಶಾಂತಿ ರಾಷ್ಟ್ರೀಯ ಏಕತೆಗಳ ಮಹತ್ವವನ್ನು ಸಾರುವ ಈ ಸದ್ಭಾವನ ದಿನಾಚರಣೆ ಈಗಿನ ದಿನಕ್ಕೆ ಅತಿ ಅಗತ್ಯವಾಗಿದೆ ಎಂದು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ ಸ್ಕೌಟ್ ಆಯುಕ್ತರಾದ ಎಸ್ ಜಿ ಆನಂದ್ ಅಭಿಮತ ವ್ಯಕ್ತಪಡಿಸಿದರು. ಇಂದು ದೇಶ ದೇಶಗಳ ಮಧ್ಯೆ ಯುದ್ಧಗಳು ಭಿನ್ನಾಭಿಪ್ರಾಯಗಳು ಹೆಚ್ಚುತ್ತಿರುವುದರಿಂದ ಸಾಕಷ್ಟು ಸಾವು ನೋವುಗಳು ಉಂಟಾಗುತ್ತಿವೆ ಪ್ರಕೃತಿ ಪರಿಸರ ಹಾಗೂ ವಾತಾವರಣ ಸಂಪೂರ್ಣ ನಾಶವಾಗುತ್ತಿದೆ. ಈ ನಿಟ್ಟಿನಲ್ಲಿ ನಾವು ಎಲ್ಲವನ್ನೂ ಮರೆತು ಪರಸ್ಪರರಲ್ಲಿ ಪ್ರೀತಿ ವಿಶ್ವಾಸ ಶಾಂತಿ ನೆಲೆಸುವಂತಹ ಕಾರ್ಯದಲ್ಲಿ ಮುಂದಾಗೋಣ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ದೇವರಾಜ ಅರಸ್ ಅವರ ಜನ್ಮದಿನವೂ ಕೂಡ ಹೌದು ಎಂದು ನುಡಿದರು ಇದೇ ಸಂದರ್ಭದಲ್ಲಿ ಕೇಂದ್ರ ಸ್ತಾನಿಕ ಆಯುಕ್ತರಾದ ಜಿ ವಿಜಯಕುಮಾರ್ ಅವರು ಮಾತನಾಡುತ್ತಾ ಈ ದಿನ ರಾಜೀವ್ ಗಾಂಧಿ ಫೌಂಡೇಶನ್ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡಿದವರಿಗೆ ರಾಜೀವ್ ಗಾಂಧಿ ರಾಷ್ಟ್ರೀಯ ಪ್ರಶಸ್ತಿ ನೀಡಿ ಸಹ ಗೌರವಿಸಲಾಗುತ್ತದೆ ಅಲ್ಲದೆ ತಮ್ಮ ಆಡಳಿತ ಅವಧಿಯಲ್ಲಿ ರಾಷ್ಟ್ರೀಯ ಸೌಹಾರ್ದತೆ ಗೆ ಶ್ರಮಿಸಿದ ಅವರಿಗೆ ಗೌರವ ನೀಡುವ ಸಲುವಾಗಿ ಅವರ ಜನ್ಮದಿನವನ್ನು ರಾಷ್ಟ್ರೀಯ ಸದ್ಭಾವನಾ ದಿನವನ್ನಾಗಿ ಆಚರಿಸಲು ತೀರ್ಮಾನಿಸಲಾಗಿತ್ತು ಎಂದರು. Bharat Scouts And Guides ಇದೇ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ರಾಜೇಶ್ ಅವನತಿ ಅವರು ಮಾತನಾಡುತ್ತಾ ಜಾತಿ ಧರ್ಮ ಭಾಷೆ ರಾಧೇಶಿಕತೆಗಳ ಹೆಸರಿನಲ್ಲಿ ಒಡೆದು ಹೋಗುತ್ತಿರುವ ನಮ್ಮ ದೇಶಕ್ಕೆ ಏಕತೆಯ ತಂದು ಕೊಡುವುದೇ ಈ ಸೌಹಾರ್ದತೆ ಮತ್ತು ಸದ್ಭಾವನೆಗಳು ದೇಶದ ಪ್ರತಿಯೊಬ್ಬ ಪ್ರಜೆಗಳು ಈ ಗುಣವನ್ನು ತಮ್ಮಲ್ಲಿ ಅಳವಡಿಸಿಕೊಂಡರೆ ನಮ್ಮ ದೇಶ ವಿಶ್ವದಲ್ಲೇ ಒಂದು ಪ್ರಬಲ ರಾಷ್ಟ್ರವಾಗುವುದರಲ್ಲಿ ಅನುಮಾನವಿಲ್ಲ ಎಂದರು. ಜಿಲ್ಲಾ ಕಾರ್ಯದರ್ಶಿಗಳಾದ ಕೆವಿ ಚಂದ್ರಶೇಖರಯ್ಯನವರು ಹಾಗೂ ಜೀವನ ದಿನಾಚರಣೆಯ ಮಹತ್ವವನ್ನು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...