Sunday, August 2, 2026
Sunday, August 2, 2026

Linganamakki Dam ಜಲಾಶಯದ ನೀರನ್ನ ಕುಡಿಯುವ ನೀರಿಗೆ ಮಾತ್ರ ಬಳಕೆ ಮಾಡಲಾಗುತ್ತದೆ- ಮಧು ಬಂಗಾರಪ್ಪ

Date:

Linganamakki Dam ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪನವರು ಸಾಗರ ಶಾಸಕರಾದ ಗೋಪಾಲಕೃಷ್ಣ ಬೇಳೂರು‌ , ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ಹಾಗೂ ಇತರೆ ಮುಖಂಡರು ಭಾನುವಾರ ಲಿಂಗನಮಕ್ಕಿ ಜಲಾಶಯದ ಗೇಟ್ ಗಳನ್ನು
ತೆರೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಗೇಟ್ ಗಳನ್ನು ತೆರೆಯುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವರು ಮಾತನಾಡಿ, 5 ಗೇಟ್ ಗಳ‌ ಮೂಲಕ ಸುಮಾರು 3.5 ಕ್ಯೂಸೆಕ್ ನೀರನ್ನು ಶರಾವತಿ ನದಿಗೆ ಬಿಡಲಾಗಿದೆ.

ಜಲಾಶಯದ ನೀರನ್ನು ಕೇವಲ ಕುಡಿಯುವ ನೀರಿಗೆ ಮಾತ್ರ ಬಳಕೆ ಮಾಡಲಾಗುತ್ತದೆ.‌ ಸಾಗರ, ಸೊರಬ ತಾಲ್ಲೂಕುಗಳ ಗ್ರಾಮಗಳು, ಪ್ರದೇಶಗಳಿಗೆ ಕುಡಿಯುವ ನೀರಿಗಾಗಿ ನೀರನ್ನು ಬಳಕೆ ಮಾಡಲಾಗುವುದು. ಹಾಗೂ ಶಿರಸಿ ,ಸಿದ್ದಾಪುರಗಳಿಗೂ ನೀರನ್ನು ಕೇಳಲಾಗುತ್ತಿದೆ.

ಲಿಂಗನಮಕ್ಕಿ‌ ಹೈಡ್ರೋ ಎಲೆಕ್ಟ್ರಿಕ್ ಪವರ್ ಪ್ಲಾಂಟ್ಟ್ ರಾಜ್ಯದಲ್ಲೇ ಅತಿ ಹೆಚ್ಚು ವಿದ್ಯುತ್ ಉತ್ಪಾದಿಸುವ ಘಟಕವಾಗಿದ್ದು ವಿದ್ಯುತ್ ಅಭಾವವನ್ನು ನೀಗಿಸಿದೆ ಎಂದರು.

Linganamakki Dam ಶಾಸಕರಾದ ಗೋಪಾಲ ಕೃಷ್ಣ ಬೇಳೂರು ಮಾತನಾಡಿ ಜಲಾಶಯ ಆರಂಭ ೧೯೬೪ ಯಿಂದ ಇಲ್ಲಿಯವರೆಗೆ ೨೧ ಬಾರಿ ನೀರನ್ನು‌ ನದಿಗೆ ಬಿಡಲಾಗಿದೆ. ಈ ನೀರನ್ನು ಜಿಲ್ಲೆಯ ಕುಡಿಯುವ ನೀರಿಗೆ ಹೊರತಾಗಿ ನೀರಾವರಿ ಸೇರಿದಂತೆ ಬೇರೆ ಯಾವ ಯೋಜನೆಗೂ ಬಳಸಿಕೊಳ್ಳಲಾಗುವುದಿಲ್ಲ ಎಂದರು.

5 ಗೇಟ್ ಗಳನ್ನು ತೆರೆದು 3500 ಕ್ಯುಸೆಕ್ ನೀರನ್ನು‌ ಶರಾವತಿ ನದಿಗೆ ಬಿಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...