Monday, May 4, 2026
Monday, May 4, 2026

JCI Sahyadri Shivamogga ಜೆಸಿಐ ಮಾರ್ಗದರ್ಶನದಿಂದ ವೃತ್ತಿ ಬದುಕಿನಲ್ಲಿ ಶಿಸ್ತು ಬದ್ಧ ಜೀವನ ಶೈಲಿ- ಬಿ.ಮೋಹನ್

Date:

JCI Sahyadri Shivamogga ಮೌನವೀಯ ಮೌಲ್ಯಗಳ ಅರಿವು ಮೂಡಿಸುವ ಜತೆಯಲ್ಲಿ ಉತ್ತಮ ವ್ಯಕ್ತಿತ್ವ ನಿರ್ಮಾಣದಲ್ಲಿ ಜೆಸಿಐ ಸಂಸ್ಥೆ ಮಹತ್ತರ ಪಾತ್ರ ವಹಿಸುತ್ತದೆ ಎಂದು ಜೆಸಿಐ ರಾಷ್ಟ್ರೀಯ ತರಬೇತುದಾರ ಬಿ.ಮೋಹನ್ ಹೇಳಿದರು.

ಜೆಸಿಐ ಸಹ್ಯಾದ್ರಿ ಘಟಕದ ವತಿಯಿಂದ ಸರ್ವ ಪೋಷಕ ಕನ್ಸಲ್ಟೆನ್ಸಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಉದ್ಯೋಗಿ ಹಾಗೂ ಶಿಬಿರಾರ್ಥಿಗಳಿಗೆ ಜೆಸಿಐ ಮಹತ್ವ ಕುರಿತು ಉಪನ್ಯಾಸ ನೀಡಿದ ಅವರು, ವೃತ್ತಿ ಹಾಗೂ ಬದುಕಿನಲ್ಲಿ ಶಿಸ್ತುಬದ್ಧ ಜೀವನಶೈಲಿ ಅಳವಡಿಸಿಕೊಳ್ಳಲು ಜೆಸಿಐ ಮಾರ್ಗದರ್ಶನ ನೀಡುತ್ತದೆ ಎಂದು ತಿಳಿಸಿದರು.

ಅಂತರಾಷ್ಟ್ರೀಯ ಮಟ್ಟದಲ್ಲಿ ಜೆಸಿಐ ಸಂಸ್ಥೆ ತನ್ನದೇ ಆದ ವಿಶೇಷ ಮೌಲ್ಯಗಳೊಂದಿಗೆ ಸಮಾಜದಲ್ಲಿ ಗುರುತಿಸಿಕೊಂಡಿದೆ. ಯುವಜನರಿಗೆ ಹಾಗೂ ಎಲ್ಲ ಕಾರ್ಯಕ್ಷೇತ್ರಗಳನ್ನು ವಿಶೇಷ ತರಬೇತಿಗಳನ್ನು ನೀಡುವುದರ ಮುಖಾಂತರ ಅವರನ್ನು ಜೆಸಿಐ ಸಂಸ್ಥೆಗೆ ಸೇರಿಸಿ ಉತ್ತಮ ಸೇವೆ ಸಲ್ಲಿಸಲು ವೇದಿಕೆ ಒದಗಿಸುತ್ತಿದೆ.

ಜೆಸಿಐ ಸಂಸ್ಥೆಯಲ್ಲಿ ತೊಡಗಿಸಿಕೊಳ್ಳುವುದರಿಂದ ನಮ್ಮಲ್ಲಿನ ಕಾರ್ಯಕ್ಷಮತೆ ಮತ್ತಷ್ಟು ವೃದ್ಧಿಸುತ್ತದೆ ಎಂದು ಹೇಳಿದರು.

ಜೆಸಿಐ ಸಹ್ಯಾದ್ರಿ ಘಟಕದ ಅಧ್ಯಕ್ಷ ಜಿ.ವಿ.ಗಣೇಶ್ ಮಾತನಾಡಿ, ವಿವಿಧ ವೃತ್ತಿ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಯುವಜನರನ್ನು ಜೆಸಿಐ ಸಂಸ್ಥೆಗೆ ಸೇರಿಸುವ ಉದ್ದೇಶವಿದ್ದು, ಈ ವರ್ಷ 1 ಲಕ್ಷ ಸದಸ್ಯರನ್ನು ಜೆಸಿಐ ಸಂಸ್ಥೆಗೆ ಸೇರಿಸುವ ಗುರಿಯನ್ನು ಜೆಸಿಐ ಅಂತರಾಷ್ಟ್ರೀಯ ಅಧ್ಯಕ್ಷರು ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಪ್ರಪಂಚಾದ್ಯಂತ ಅಭಿಯಾನ ನಡೆಯುತ್ತಿದೆ ಎಂದರು.

JCI Sahyadri Shivamogga ಜೆಸಿಐ ಸಂಸ್ಥೆಗೆ ಸೇರುವುದರ ಮುಖಾಂತರ ಹೊಸ ಸಂಚಲನ ಮೂಡುವವರ ಜೊತೆಗೆ ಬೇರೆ ಬೇರೆ ವೃತ್ತಿಪರರ ಸಂಪರ್ಕ ಹಾಗೂ ಅವರ ಪ್ರತಿಭೆ, ಸೇವಾ ಗುಣಗಳು ಮತ್ತು ಮಾನವೀಯ ಮೌಲ್ಯಗಳ ಪರಿಚಯವಾಗುತ್ತದೆ. ಎಲ್ಲ ಶಿಬಿರಾರ್ಥಿಗಳು ಜೆಸಿಐ ಸಂಸ್ಥೆ ಸೇರಬೇಕು ಎಂದು ತಿಳಿಸಿದರು.
ಜೆಸಿಐ ಸಂಸ್ಥೆ ಸಲ್ಲಿಸುತ್ತಿರುವ ಸೇವೆಗಳ ಬಗ್ಗೆ ಹಾಗೂ ತರಬೇತಿಗಳ ಬಗ್ಗೆ ಮಾಹಿತಿ ನೀಡಲಾಯಿತು.

ಸರ್ವ ಪೋಷಕ ಕನ್ಸಲ್ಟೆನ್ಸಿ ಪ್ರೈವೇಟ್ ಲಿಮಿಟೆಡ್‌ನ ಮಾಲೀಕ ಸುನೀಲ್ ನಲ್ಲೂರು ಹಾಗೂ ಉದ್ಯೋಗಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...