Sunday, February 1, 2026
Sunday, February 1, 2026

Shimoga Bharat Scouts and Guides ಕೃಷಿ ಶಿಬಿರದಿಂದ ಮಕ್ಕಳಲ್ಲಿ ರೈತರ ಶ್ರಮ ಅರಿತುಕೊಳ್ಳುವಲ್ಲಿ ಸಹಕಾರಿ- ಶಕುಂತಲಾ ಚಂದ್ರಶೇಖರ್.

Date:

Shimoga Bharat Scouts and Guides ಮಕ್ಕಳಿಗೆ ಗ್ರಾಮೀಣ ಪ್ರದೇಶದ ಪರಿಚಯ ಹಾಗೂ ಮಲೆನಾಡಿನ ಸೊಬಗು ತಿಳಿಯಬೇಕು ಎಂದು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಶಿವಮೊಗ್ಗ ಜಿಲ್ಲಾ ಪ್ರಧಾನ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಹೇಳಿದರು.
ಸ್ಕೌಟ್ಸ್ ಅಂಡ್ ಗೈಡ್ಸ್ ಮಕ್ಕಳ ನಡಿಗೆ ಕೃಷಿ ಕ್ಷೇತ್ರದ ಕಡೆಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಈ ಕಾರ್ಯಕ್ರಮ ಮಕ್ಕಳಲ್ಲಿ ರೈತರ ಶ್ರಮದ ಮಹತ್ವ ಅರಿತುಕೊಳ್ಳುವ ಮನೋಭಾವ ಬೆಳೆಸುತ್ತದೆ. ಪ್ರತಿಯೊಬ್ಬರಿಗೂ ಪ್ರಕೃತಿಯ ಬಗ್ಗೆ ಗೌರವ ಮೂಡಿಸುತ್ತದೆ. ಆಹಾರ ಭದ್ರತೆ ಹಾಗೂ ಸ್ಥಿರ ಜೀವನಶೈಲಿಯ ಬಗ್ಗೆ ಜಾಗೃತಿ ತರಲು ಸಹಕಾರಿ ಆಗುತ್ತದೆ ಎಂದು ತಿಳಿಸಿದರು.
ಬೆಂಗಳೂರಿನ ಮಕ್ಕಳಿಗೆ ಕೃಷಿ ಮತ್ತು ಗ್ರಾಮೀಣ ಜೀವನದ ನೇರ ಅನುಭವ ಕಲ್ಪಿಸುವ ಉದ್ದೇಶದಿಂದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಬೆಂಗಳೂರು ಉತ್ತರ ಜಿಲ್ಲೆ ವತಿಯಿಂದ ಆ.28ರಿಂದ 30ರವರೆಗೆ ಶಿವಮೊಗ್ಗದಲ್ಲಿ ಕೃಷಿ ಶಿಬಿರ ಆಯೋಜಿಸಲಾಗಿದೆ ಎಂದರು.
ಈ ಶಿಬಿರವು ನಗರ ಜೀವನ ಮತ್ತು ಕೃಷಿ ಜೀವನದ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ, ಭಾಗವಹಿಸಿದ ಮಕ್ಕಳಿಗೆ ಕೃಷಿ ಕುರಿತು ಪ್ರಾಯೋಗಿಕ ಜ್ಞಾನವನ್ನು ನೀಡಿತು. ಮಕ್ಕಳು ಬೀಜ ಬಿತ್ತನೆ, ಮಣ್ಣಿನ ಸಿದ್ಧತೆ ಹಾಗೂ ಸಾಂಪ್ರದಾಯಿಕ ಹಾಗೂ ಆಧುನಿಕ ಕೃಷಿ ವಿಧಾನಗಳ ಅಧ್ಯಯನದಲ್ಲಿ ಉತ್ಸಾಹದಿಂದ ಪಾಲ್ಗೊಂಡರು.
Shimoga Bharat Scouts and Guides ಶಿಬಿರವು ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧಿಯಾ, ಜಿಲ್ಲಾ ಮುಖ್ಯ ಆಯುಕ್ತ ಡಾ. ಪ್ರಸನ್ನಕುಮಾರ್, ಬೆಂಗಳೂರು ಉತ್ತರ ಜಿಲ್ಲಾ ಕಾರ್ಯದರ್ಶಿ ಬಿ.ಕೆ.ಶೇಷಾದ್ರಿ ಹಾಗೂ ಶಿಬಿರದ ಆಯೋಜಕ ರಾಜ್ಯ ಸಹ ಸಂಘಟನಾ ಆಯುಕ್ತ ನಿತಿನ್ ಅಮೀನ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ಆಯುಕ್ತರಾದ ಕೆ.ರವಿ, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್, ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರಯ್ಯ, ಮಲ್ಲಿಕಾರ್ಜುನ ಕಾನೂರು, ಸ್ಥಳೀಯ ಸಂಸ್ಥೆಗಳ ಕಾರ್ಯದರ್ಶಿ ರಾಜೇಶ್ ಅವಲಕ್ಕಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...