District Legal Services Authority ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಇವರ ನಿರ್ದೇಶನದ ಮೇರೆಗೆ ಶಿವಮೊಗ್ಗ ಜಿಲ್ಲೆಯಲ್ಲಿನ ಪಾಲನೆ ಮತ್ತು ಸಂರಕ್ಷಣೆ ಅಗತ್ಯವಿರುವ 28 ಮಕ್ಕಳಿಗೆ ‘ಸಾಥಿ ಅಭಿಯಾನ’ ದಡಿ ಆಧಾರ್ ಕಾರ್ಡ್ ಒದಗಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ ಎಸ್ ತಿಳಿಸಿದ್ದಾರೆ.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಇವರ ನಿರ್ದೇಶನದ ಮೇರೆಗೆ ಶಿವಮೊಗ್ಗ ಜಿಲ್ಲೆಯಲ್ಲಿನ ಪಾಲನೆ ಮತ್ತು ಸಂರಕ್ಷಣೆ ಬೇಕಾಗಿರುವ ಮಕ್ಕಳಿಗೆ ಆಧಾರಕಾರ್ಡ್ ಮಾಡಿಸುವ ಉದ್ದೇಶದಿಂದ ಪ್ರಾಧಿಕಾರದ ಮೂಲಕ ಹಮ್ಮಿಕೊಂಡಿದ್ದ “ಸಾಥಿ ಅಭಿಯಾನ’ ದಡಿ ಒಟ್ಟು 19 ವಿವಿಧ ಇಲಾಖೆಗಳು ಜಿಲ್ಲಾ ಮತ್ತು ವಲಯ ಮಟ್ಟದ ಅಧಿಕಾರಿಗಳು ಮತ್ತು ಪ್ಯಾನಲ್ ವಕೀಲರನ್ನೊಳಗೊಂಡ ಸಾಥಿ ಘಟಕವನ್ನು ರಚಿಸುವ ಮೂಲಕ ಪರಿತ್ಯಕ್ತ, ಪಾಲನೆ, ಸಂರಕ್ಷಣೆ ಅಗತ್ಯವಿರುವ ಮಕ್ಕಳನ್ನು ಗುರುತಿಸಿ ಆಧಾರ್ಕಾರ್ಡ್ ಒದಗಿಸಲಾಗಿದ್ದು, ಈ ಅಭಿಯಾನದ ಯಶಸ್ಸಿಗೆ ಸಹಕರಿಸಿದ ಎಲ್ಲಾ ಇಲಾಖೆಯ ಅಧಿಕಾರಿಗಳು, ಪ್ಯಾನಲ್ ವಕೀಲರಿಗೂ ಮತ್ತು ಪ್ರಾಧಿಕಾರದ ಅರೆಕಾಲಿಕ ಸ್ವಯಂ ಸೇವಕರಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಧನ್ಯವಾದಗಳನ್ನು ಸಲ್ಲಿಸಿರುತ್ತಾರೆ.
ರಾಷ್ಟçಕ್ಕಾಗಿ ಮಧ್ಯಸ್ಥಿಕೆ – 90 ದಿನಗಳ ಮಧ್ಯಸ್ಥಿಕೆ ಅಭಿಯಾನ :
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ರವರ ನಿರ್ದೇಶನದಂತೆ ಶಿವಮೊಗ್ಗ ಜಿಲ್ಲೆಯಲ್ಲಿನ ಎಲ್ಲಾ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ವೈವಾಹಿಕ ವಿವಾಹದ ವ್ಯಾಜ್ಯಗಳು, ಅಪಘಾತಕ್ಕೆ ಸಂಬAಧಿಸಿದ ಪರಿಹಾರದ ವ್ಯಾಜ್ಯಗಳು, ಕೌಟುಂಬಿಕ ದೌರ್ಜನ್ಯ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ವಾಣಿಜ್ಯ ವಿವಾದದ ದಾವೆಗಳು, ವೇತನ ಮತ್ತು ಸೇವೆಗೆ ಸಂಬAಧಿಸಿದ ವ್ಯಾಜ್ಯಗಳು, ರಾಜಿ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಗ್ರಾಹಕರ ವೇದಿಕೆಯ ಪ್ರಕರಣಗಳು, ಸಾಲದ ಪ್ರಕರಣಗಳು, ಪಾಲು ವಿಭಾಗದ ದಾವೆಗಳು, ಸ್ಥಿರ ಆಸ್ತಿ ಸ್ವಾಧೀನದ ದಾವೆಗಳು, ಭೂಸ್ವಾಧೀನದ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳ’ ರಾಜೀ ಸಂಧಾನಕ್ಕಾಗಿ 90 ದಿನಗಳ ಮಧ್ಯಸ್ಥಿಕೆ ಅಭಿಯಾನವನ್ನು ದಿನಾಂಕ: 01.07.2025 ರಿಂದ 30.09.2025 ರವರೆಗೆ ಹಮ್ಮಿಕೊಳ್ಳಲಾಗಿದೆ.
ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಪಕ್ಷಗಾರರು ರಾಜೀ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಶೀಘ್ರವಾಗಿ ಮತ್ತು ತಮಗೆ ಸೂಕ್ತ ಎನ್ನಿಸುವ ನ್ಯಾಯಯುತವಾದ ಪರಿಹಾರಗಳನ್ನು ಪಡೆದುಕೊಳ್ಳಲು ಸಂಬAಧಪಟ್ಟ ನ್ಯಾಯಾಲಯಗಳಲ್ಲಿ ಅಂತಹ ಪ್ರಕರಣಗಳನ್ನು ಮಧ್ಯಸ್ಥಿಕೆಗೆ ನೇಮಿಸಲು ತಾವಾಗಲೀ ಅಥವಾ ವಕೀಲರ ಮೂಲಕ ಮನವಿ ಮಾಡಿಕೊಂಡು ಅದರಂತೆ ಪ್ರಕರಣಗಳಲ್ಲಿ ನ್ಯಾಯವನ್ನು ಪಡೆದುಕೊಳ್ಳಬಹುದಾಗಿದ್ದು, ಆದ್ದರಿಂದ ಎಲ್ಲಾ ಸಾರ್ವಜನಿಕರು ಮತ್ತು ವಕೀಲರು ಈ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು.
District Legal Services Authority ಖಾಯಂ ಲೋಕ್ ಅದಾಲತ್ ಜಾಗೃತಿ ಅಭಿಯಾನ :
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ನಿರ್ದೇಶನದಂತೆ ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲೆಯ ಎಲ್ಲಾ ತಾಲ್ಲೂಕು ಕಾನೂನು ಸೇವಾ ಸಮಿತಿಗಳ ಮೂಲಕ ಸಾರ್ವಜನಿಕ ಉಪಯುಕ್ತ ಸೇವೆಗಳನ್ನು ನೀಡುತ್ತಿರುವ ಬ್ಯಾಂಕ್ಗಳು, ವಿಮಾ ಕಂಪನಿಗಳು, ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳಿಗೆ ಮತ್ತು ಸಾರ್ವಜನಿಕರಲ್ಲಿ ಖಾಯಂ ಲೋಕ್ ಅದಾಲತ್ ಕುರಿತು ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಖಾಯಂ ಲೋಕ್ ಅದಾಲತ್ ಒಂದು ವಿಶೇಷ ನ್ಯಾಯಾಲಯವಾಗಿದ್ದು, ಪ್ರಕರಣಗಳ ರಾಜೀ ಸಂಧಾನವೇ ಈ ನ್ಯಾಯಾಲಯದ ಮೊದಲ ಆದ್ಯತೆಯಾಗಿದೆ. ಪ್ರಯಾಣಿಕರನ್ನು ಅಥವಾ ಸರಕನ್ನು ಸಾಗಿಸುವ ಭೂ ಸಾರಿಗೆ, ಜಲಸಾರಿಗೆ, ವಾಯು ಸಾರಿಗೆ ಸೇವೆಗಳು, ಅಂಚೆ ತಂತಿ, ದೂರವಾಣಿ ಸೇವೆಗಳು, ವಿದ್ಯುತ್, ನೀರು ಸರಬರಾಜು, ಸಾರ್ವಜನಿಕ ನೈರ್ಮಲ್ಯ ಹಾಗೂ ಚರಂಡಿ ವ್ಯವಸ್ಥೆ, ವಿಮಾ ಸೇವೆ, ಆಸ್ಪತ್ರೆ ಹಾಗೂ ಔಷಧಾಲಯಗಳ ಸೇವೆ, ಹಣಕಾಸು ಸಂಸ್ಥೆ ಹಾಗೂ ಬ್ಯಾಂಕ್ ಸೇವೆ, ಶಿಕ್ಷಣ ಸಂಸ್ಥೆಗಳ ಸಂಬAಧಪಟ್ಟ ಸೇವೆ, ಗೃಹ ಹಾಗೂ ರಿಯಲ್ ಎಸ್ಟೇಟ್ ಸೇವೆ ಒಳಗೊಂಡAತೆ ಇನ್ನಿತರ ಸಾರ್ವಜನಿಕ ಉಪಯುಕ್ತ ಸೇವೆಗಳ ಪ್ರಕರಣಗಳನ್ನು ಈ ನ್ಯಾಯಾಲಯದಲ್ಲಿ ಸಲ್ಲಿಸಬಹುದು. ಇತರೆ ನ್ಯಾಯಾಲಯಗಳಂತೆ ಇಲ್ಲಿ ಶುಲ್ಕ ಕಟ್ಟುವಂತಿಲ್ಲ ಹಾಗೂ ಯಾವುದೇ ಆದಾಯದ ಮಿತಿ ಇರುವುದಿಲ್ಲ. ಈ ಖಾಯಂ ಲೋಕ್ ಅದಾಲತ್ ರಾಜ್ಯದ 6 ಜಿಲ್ಲೆಗಳಲ್ಲಿ ಕಚೇರಿ ಹೊಂದಿದ್ದು ಶಿವಮೊಗ್ಗ ಜಿಲ್ಲೆಯು ಮಂಗಳೂರಿನ ವ್ಯಾಪ್ತಿಗೆ ಬರುತ್ತದೆ.
ವೀರ್ ಪರಿವಾರ ಸಹಾಯತಾ ಯೋಜನೆ :
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ರವರ ನಿರ್ದೇಶನದಂತೆ ಜಿಲ್ಲಾ ಸೈನಿಕ ಬೋರ್ಡ್, ಬಿ.ಹೆಚ್. ರಸ್ತೆ, ಶಿವಮೊಗ್ಗ ಇಲ್ಲಿ ವೀರ್ ಪರಿವಾರ ಸಹಾಯತಾ ಯೋಜನಾ ಅಡಿಯಲ್ಲಿ ಮಾಜಿ ಸೈನಿಕರು ಮತ್ತು ಅವರ ಕುಟುಂಬ ಸದಸ್ಯರಿಗೆ ಕಾನೂನು ಸಲಹೆ ಮತ್ತು ನೆರವು ನೀಡಲು ಕಾನೂನು ಸಲಹಾ ಕೇಂದ್ರವನ್ನು ಸ್ಥಾಪಿಸಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕ್ರಮ ಕೈಗೊಂಡಿದ್ದು ಈ ಕೇಂದ್ರಕ್ಕಾಗಿ ಮಾಜಿ ಸೈನಿಕರು ಹಾಗೂ ಪ್ರಸ್ತುತ ವಕೀಲರೊಬ್ಬರನ್ನು ನೇಮಿಸಲು ಶಿಫಾರಸ್ಸು ಮಾಡಲಾಗಿದೆ. ಈ ಯೋಜನೆಯಡಿಯಲ್ಲಿ ಮಾಜಿ ಸೈನಿಕರು ಮತ್ತು ಅವರ ಕುಟುಂಬ ಸದಸ್ಯರು ಕಾನೂನು ಸಲಹಾ ಕೇಂದ್ರಕ್ಕೆ ಭೇಟಿ ನೀಡಿ ತಮ್ಮ ಕುಂದು ಕೊರತೆಗಳಿಗೆ ಉಚಿತವಾಗಿ ಕಾನೂನು ಸಲಹೆ ಹಾಗೂ ನೆರವನ್ನು ಪಡೆದುಕೊಳ್ಳಬಹುದಾಗಿದೆ.
ನಾಲ್ಸಾ ಕಾನೂನು ಉಚಿತ ಸಹಾಯ ವಾಣಿ 15100 :
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿಯ ಸೂಚನೆಯಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿವಮೊಗ್ಗ ವತಿಯಿಂದ ಒಬ್ಬ ಮಹಿಳಾ ವಕೀಲರು ಹಾಗೂ ಒಬ್ಬ ಪುರುಷ ವಕೀಲರನ್ನು ಉಚಿತ ಸಹಾಯವಾಣಿ ಸಂಖ್ಯೆ 15100 ಗೆ ಬರುವ ಕರೆಗಳನ್ನು ಸ್ವೀಕರಿಸಿ ಸಾರ್ವಜನಿಕರ ಕುಂದು ಕೊರತೆಗೆ ಉಚಿತ ಕಾನೂನು ಸಲಹೆ ನೀಡಲು ನೇಮಿಸಲಾಗಿದೆ.
ಸಾರ್ವಜನಿಕರು ಈ ಉಚಿತ ಸಹಾಯವಾಣಿ ಸಂಖ್ಯೆ 15100 ಗೆ ಕರೆ ಮಾಡಿ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ಹೊರತುಪಡಿಸಿ ಉಳಿದಂತೆ ತಮಗೆ ಅವಶ್ಯಕವಿರುವ ತುರ್ತು ಕಾನೂನು ಸಲಹೆಯನ್ನು ದೂರವಾಣಿ ಕರೆಯ ಮೂಲಕ ಪಡೆದುಕೊಳ್ಳಬಹುದಾಗಿದೆ.
ರಾಷ್ಟಿçÃಯ ಲೋಕ್ ಅದಾಲತ್:
ದಿನಾಂಕಃ 13.09.2025 ರಂದು ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳ ಶೀಘ್ರ ವಿಲೇವಾರಿಗೆ ಮತ್ತು ಪಕ್ಷಗಾರರಿಗೆ ತ್ವರಿತ ನ್ಯಾಯ ದಾನದ ದೃಷ್ಟಿಯಿಂದ ಈ ವರ್ಷದ 3ನೇ ರಾಷ್ಟಿçÃಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ.
ಅಂದು ಎಲ್ಲಾ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ವೈವಾಹಿಕ ವಿವಾದದ ವ್ಯಾಜ್ಯಗಳು, ಅಪಘಾತಕ್ಕೆ ಸಂಬAಧಿಸಿದ ಪರಿಹಾರದ ವ್ಯಾಜ್ಯಗಳು, ಕೌಟುಂಬಿಕ ದೌರ್ಜನ್ಯ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ವಾಣಿಜ್ಯ ವಿವಾದದ ದಾವೆಗಳು, ವೇತನ ಮತ್ತು ಸೇವೆಗೆ ಸಂಬAಧಿಸಿದ ವ್ಯಾಜ್ಯಗಳು, ರಾಜೀ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಗ್ರಾಹಕರ ವೇದಿಕೆಯ ಪ್ರಕರಣಗಳು, ಸಾಲದ ಪ್ರಕರಣಗಳು, ಪಾಲು ವಿಭಾಗದ ದಾವೆಗಳು, ಸ್ಥಿರಆಸ್ತಿ ಸ್ವಾಧೀನದ ದಾವೆಗಳು, ಭೂಸ್ವಾಧೀನದ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳ ರಾಜೀ ಸಂಧಾನಕ್ಕಾಗಿ ಉಭಯ ಪಕ್ಷಗಾರರ ಉಪಸ್ಥಿತಿಯಲ್ಲಿ ನ್ಯಾಯಾಧೀಶರು ಮತ್ತು ನ್ಯಾಯಿಕೇತರ ಸಂಧಾನಕಾರರು ರಾಜೀ ಸಂಧಾನದ ಪ್ರಕ್ರಿಯೆಯನ್ನು ಕೈಗೊಂಡು ಪಕ್ಷಗಾರರು ವಿವಾದವನ್ನು ಇತ್ಯರ್ಥಪಡಿಸಿಕೊಂಡರೆ ಅದರಂತೆ ಅಂತಿಮ ಆದೇಶವನ್ನು ಅದೇ ದಿನದಂದು ನೀಡುವ ಅವಕಾಶವನ್ನು ಸಾರ್ವಜನಿಕರು ಮತ್ತು ಪಕ್ಷಗಾರರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಈ ಮೂಲಕ ಕೋರಲಾಗಿದೆ.
ಈ ಮುಂಚೆ ದಿನಾಂಕಃ 12.07.2025 ರಂದು ಕೈಗೊಳ್ಳಲಾದ ಈ ವರ್ಷದ 2ನೇ ರಾಪ್ಟ್ರೀಯ ಲೋಕ್ ಅದಾಲತ್ನಲ್ಲಿ ವಿಚಾರಣೆಗೆ ಬಾಕಿ ಇರುವ 14225 ರಷ್ಟು ಪ್ರಕರಣಗಳು ರಾಜೀ ಸಂಧಾನದ ಮೂಲಕ ಕೊನೆಗೊಂಡಿದ್ದು, ಅವುಗಳ ಮೂಲಕ ಪಕ್ಷಗಾರರು ಒಟ್ಟು ರೂ. 30,50,15,387/- ಮೊತ್ತದ ಪರಿಹಾರ ಒಳಗೊಂಡ ವಿವಾದಗಳನ್ನು ರಾಜೀ ಮಾಡಿಕೊಂಡಿರುತ್ತಾರೆ. ಅದೇ ಸಂದರ್ಭದಲ್ಲಿ ಒಟ್ಟು 1,44,825 ವ್ಯಾಜ್ಯ ಪೂರ್ವ ಪ್ರಕರಣಗಳು ಕೊನೆಗೊಂಡಿದ್ದು, ಅವುಗಳ ಮೂಲಕ ಒಟ್ಟು ರೂ. 75,40,80,831/- ಮೊತ್ತದ ಪರಿಹಾರ ಒಳಗೊಂಡ ವಿವಾದಗಳನ್ನು ರಾಜೀ ಮಾಡಿಕೊಂಡಿರುತ್ತಾರೆ ಎಂದು ತಿಳಿಸಿದ್ದಾರೆ.
