Friday, March 20, 2026
Friday, March 20, 2026

Shivaganga Yoga Center ಯೋಗಾಭ್ಯಾಸದಿಂದ ಆತ್ಮವಿಶ್ವಾಸದ ವೃದ್ಧಿ-ಕಲಗೋಡು ರತ್ನಾಕರ್

Date:

Shivaganga Yoga Center ಯೋಗ, ಧ್ಯಾನ ಹಾಗೂ ಪ್ರಾಣಾಯಾಮದ ಅಭ್ಯಾಸದಿಂದ ಆತ್ಮವಿಶ್ವಾಸ ವೃದ್ಧಿಸುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಹೇಳಿದರು.

ಕುವೆಂಪು ನಗರದ ಎನ್‌ಇಎಸ್ ಬಡಾವಣೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಹಾಗೂ ಶ್ರೀ ಶಿವಗಂಗಾ ಯೋಗಕೇಂದ್ರದಲ್ಲಿ ಆಯೋಜಿಸಿದ್ದ ಉಚಿತ ಯೋಗ ಶಿಬಿರದ ಸಮಾರೋಪದಲ್ಲಿ ಮಾತನಾಡಿದರು.

ವಯಸ್ಸು ಹೆಚ್ಚಿದಂತೆ ದೈಹಿಕ ಮತ್ತು ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಯೋಗಾಭ್ಯಾಸ ಮಾಡಬೇಕು. ಇದರಿಂದ ಕಾಯಿಲೆಗಳು ಬರದಂತೆ ಎಚ್ಚರ ವಹಿಸಬಹುದಾಗಿದೆ. ದೇಹ ಮತ್ತು ಮನಸ್ಸಿನ ಆರೋಗ್ಯಕ್ಕೆ ಯೋಗ ಉತ್ತಮ ಪರಿಹಾರ. ಸದಾ ಲವಲವಿಕೆಯಿಂದ ಇರಲು ನೆರವಾಗುತ್ತದೆ ಎಂದು ತಿಳಿಸಿದರು.

ಶ್ರೀ ಶಿವಗಂಗಾ ಯೋಗ ಕೇಂದ್ರ ನಗರದ 38 ಕೇಂದ್ರಗಳಲ್ಲಿ ಉಚಿತವಾಗಿ ಯೋಗ ಶಿಕ್ಷಣವನ್ನು ನೀಡುತ್ತಿರುವ ಸಂಸ್ಥೆಯಾಗಿದೆ. ಯೋಗಾಚಾರ್ಯ, ರಾಜ್ಯ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಸಿವಿ ರುದ್ರಾರಾಧ್ಯ ಅವರ ಸಾಧನೆ ಅವಿಸ್ಮರಣೀಯವಾಗಿದೆ ಎಂದು ಹೇಳಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ರುದ್ರಮುನಿ ಸಜ್ಜನ್ ಮಾತನಾಡಿ, ಹಾನಗಲ್ ಕುಮಾರ ಸ್ವಾಮಿಗಳ ಆಶೀರ್ವಾದದಿಂದ ಹಾಗೂ ಎಲ್ಲ ಸಾರ್ವಜನಿಕರ ಸಹಕಾರದಿಂದ ಭವನ ನಿರ್ಮಾಣವಾಗಿದ್ದು, ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದು ತಿಳಿಸಿದರು.

ಯೋಗಚಾರ್ಯ ಸಿ.ವಿ.ರುದ್ರಾರಾಧ್ಯ ಮಾತನಾಡಿ, ಮನೆಮನಗಳಿಗೆ ಯೋಗವನ್ನು ತಲುಪಿಸಬೇಕು. ಶಿವಮೊಗ್ಗವನ್ನು ಯೋಗ ನಗರವನ್ನಾಗಿ ಮಾರ್ಪಾಡು ಮಾಡಬೇಕೆಂಬ ಆಶಯವಿದೆ ಎಂದರು.

Shivaganga Yoga Center ಯೋಗ ಶಿಕ್ಷಕರಿಗೆ ಗೌರವಿಸಲಾಯಿತು. ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದ ಮಾಜಿ ಅಧ್ಯಕ್ಷ ಜಿ.ವಿಜಯ್ ಕುಮಾರ್, ಮಹಾಸಭಾ ಮಾಧ್ಯಮ ವಿಭಾಗದ ಜಿಲ್ಲಾಧ್ಯಕ್ಷ ಸೋಮನಾಥ್.ಕೆ.ಆರ್., ಖಜಾಂಚಿ ಮಲ್ಲಿಕಾರ್ಜುನ್ ಕಾನೂರ್, ಎಲ್.ಎಂ.ಮೋಹನ್, ಲವಕುಮಾರ್, ವಿಜಯ ಬಾಯರ್, ಕಾಟನ್ ಜಗದೀಶ್, ಎಚ್.ಎಸ್.ನಾಗರಾಜ್, ಶಿಲ್ಪಾ, ಸರೋಜಾ, ತಿಮ್ಮಪ್ಪ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...