Monday, February 2, 2026
Monday, February 2, 2026

Shimoga Institute of Medical Sciences ಶಿವಮೊಗ್ಗ ‘ಸಿಮ್ಸ್ ‘ ಆಸ್ಪತ್ರೆಯಲ್ಲಿ ಪ್ಕಾಸ್ಟಿಕ್ ಸರ್ಜರಿ ಕ್ಯಾನ್ಸರ್,ನ್ಯೂರೋ ಸರ್ಜರಿ, ಮಕ್ಕಳ ಶಸ್ತ್ರ ಚಿಕಿತ್ಸೆ, ಮೂತ್ರರೋಗ ಚಿಕಿತ್ಸೆ ಲಭ್ಯ

Date:

Shimoga Institute of Medical Sciences ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀನದಲ್ಲಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸ್ಪೆಷಾಲಿಟಿ ವಿಭಾಗಗಳು ಮತ್ತು ಆಸ್ಪತ್ರೆಯ ಆವರಣದಲ್ಲಿ ಸೂಪರ್ ಸ್ಪೆಷಾಲಿಟಿ ಕಟ್ಟಡದಲ್ಲಿ ಹೃದ್ರೋಗ ವಿಭಾಗವು ಮತ್ತು ನರರೋಗ ವಿಭಾಗವು ಕಾರ್ಯ ನಿರ್ವಹಿಸುತ್ತಿದ್ದು ಜನರಿಗೆ ಅತ್ಯುತ್ತಮ ಸೇವೆಯನ್ನು ನಿಡಲಾಗುತ್ತಿದ್ದು. ಪ್ರಸ್ತುತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಚ್ಚಿನ ವಿಭಾಗಗಳ ಸೇವೆಯನ್ನು ವಿಸ್ತರಿಸುವ ದೃಷ್ಟಿಯಿಂದ
ಈ ಕೆಳಕಂಡ ಸೂಪರ್ ಸ್ಪೆಷಾಲಿಟಿ ಸೇವೆಗಳು ಸಾರ್ವಜನಿಕರಿಗೆ ಇನ್ನು ಮುಂದೆ ಲಭ್ಯವಾಗುತ್ತಿವೆ

ಪ್ಲಾಸ್ಟಿಕ್ ಸರ್ಜರಿ, ಕ್ಯಾನ್ಸರ್ ಸರ್ಜರಿ, ನ್ಯೂರೋಸರ್ಜರಿ, ಮಕ್ಕಳ ಶಸ್ತ್ರಚಿಕಿತ್ಸೆ (Pediatric) ಮೂತ್ರರೋಗ ಶಸ್ತ್ರ ಚಿಕಿತ್ಸೆ,

ಕಿಡ್ನಿ ಖಾಯಿಲೆ (nephrology) ಸೇವೆಗಳು ದಿನಾಂಕ: 04/09/2025 ರಿಂದ ಕಾರ್ಯರಂಭಗೊಳ್ಳಲಿದ್ದು, ಮೂತ್ರರೋಗ ಶಸ್ತ್ರ ಚಿಕಿತ್ಸೆ, ಪ್ಲಾಸ್ಟಿಕ್ ಸರ್ಜರಿ, ಕ್ಯಾನ್ಸರ್ ಸರ್ಜರಿ, ಮೂತ್ರಪಿಂಡ ಸರ್ಜರಿ, ಮಕ್ಕಳ ಶಸ್ತ್ರಚಿಕಿತ್ಸಾ ತಜ್ಞರ ಸೇವೆಗಳು ಸೋಮವಾರ ಮತ್ತು ಗುರುವಾರ ದೊರೆಯಲಿದೆ.

ನರರೋಗ ವಿಭಾಗವು ಸೋಮವಾರ, ಬುದುವಾರ, ಶುಕ್ರವಾರದಂದು

ನರರೋಗ ಶಸ್ತ್ರಚಿಕಿತ್ಸಾ ಸೇವೆಯು ಮಂಗಳವಾರ, ಗುರುವಾರ, ಶನಿವಾರದಂದು ಹೋರರೋಗಿಗಳ ಸೇವೆ ಲಭ್ಯವಿರುತ್ತದೆ.

ಚಿಕಿತ್ಸೆಯ ನಂತರ ಶಸ್ತ್ರಚಿಕಿತ್ಸೆ ಅವಶ್ಯವಿದ್ದಲ್ಲಿ ರೋಗಿಗಳನ್ನು ದಾಖಲಿಸಿಕೊಂಡು ಬಿ.ಪಿ.ಎಲ್ ಕಾರ್ಡ್‌ದಾರರಿಗೆ ಎ.ಬಿ.ಎ.ಆರ್.ಕೆ ಅಡಿಯಲ್ಲಿ ಉಚಿತ ಸೌಲಭ್ಯ ದೊರೆಯಲಿದೆ.

ಸೂಪರ್ ಸ್ಪೆಷಾಲಿಟಿ ವಿಭಾಗದಲ್ಲಿ ವಾರ್ಡ್‌ಗಳನ್ನು ಪ್ರಾರಂಭಿಸಲಾಗಿದ್ದು ರೋಗಿಗಳು ಈ ಹೆಚ್ಚಿನ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಂಸ್ಥೆಯ ಆಡಳಿತ ಮಂಡಳಿ ಪ್ರಕಟ ಪಡಿಸಿದೆ.

Shimoga Institute of Medical Sciences ಬೆಂಗಳೂರು, ಮೈಸೂರು, ಹುಬ್ಬಳ್ಳಿ ನಗರಗಳ ನಂತರ ಹೆಚ್ಚುವರಿ ಸೂಪರ್ ಸ್ಪೆಷಾಲಿಟಿ ಸೇವೆಯನ್ನು ಒದಗಿಸುವ ಸಂಸ್ಥೆಗಳ ಪಟ್ಟಿಗೆ ಶಿವಮೊಗ್ಗ ವೈದ್ಯಕೀಯ ಸಂಸ್ಥೆ ಸೇರ್ಪಡೆಯಾಗಿರುವುದು, ಸಂಸ್ಥೆಗೆ ಸಂತಸದ ಸುದ್ದಿಯಾಗಿದೆ ಎಂದು ಮೆಗ್ಗಾನ್ ಅಧಿಕ್ಷಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...