Saturday, May 23, 2026
Saturday, May 23, 2026

Kannada Sahitya Parishad ಕನ್ನಡಕ್ಕೆ ಹೋರಾಡಿದ ಕನ್ನಡ ಚಳವಳಿಗಾರರ ಮೇಲಿನ ಮೊಕದ್ದಮೆಗಳನ್ನೂ ಹಿಂಪಡೆಯಲಿ- ಡಾ.ಮಹೇಶ್ ಜೋಷಿ

Date:

Kannada Sahitya Parishad ಕನ್ನಡಕ್ಕಾಗಿ ಹೋರಾಡಿದ ಕನ್ನಡ ಚಳವಳಿಗಾರರ ಮೇಲಿನ ಮೊಕದ್ದಮೆಗಳನ್ನು ರಾಜ್ಯ ಸರ್ಕಾರ ಕೂಡಲೇ ಹಿಂಪಡೆಯುವಂತೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಆಗ್ರಹ ಪಡಿಸಿದ್ದಾರೆ.

ಈ ಕುರಿತು 2023ರ ಜನವರಿ 6,7 ಮತ್ತು 8ರಂದು ಹಾವೇರಿಯಲ್ಲಿ ನಡೆದ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಬಹಿರಂಗ ಅಧಿವೇಶನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸರ್ವಾನುಮತದಿಂದ ನಿರ್ಣಯವನ್ನು ತೆಗೆದುಕೊಂಡಿತ್ತು.

ನಿರಂತರವಾಗಿ ಕರ್ನಾಟಕ ರಾಜ್ಯ ಸರ್ಕಾರದ ಮೇಲೆ ಒತ್ತಡವನ್ನೂ ಹಾಕುತ್ತಾ ಬಂದಿತ್ತು. ಆದರೆ ಅದು ಇಂದಿಗೂ ಕಾರ್ಯರೂಪಕ್ಕೆ ಬಂದಿಲ್ಲ. ರಾಜಕೀಯ ಮತ್ತು ಸಾಮಾಜಿಕ ನೆಲೆಗಳಲ್ಲಿ ಮೊಕದ್ದಮೆಗಳನ್ನು ಹಿಂಪಡೆಯಲಾಗುತ್ತಿದೆಯೇ ಹೊರತು ಕನ್ನಡಕ್ಕೆ ಹೋರಾಡಿದ ಚಳವಳಿಗಾರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯದಿರುವುದು ದುರದೃಷ್ಟಕರ ಸಂಗತಿ ಎಂದು ನಾಡೋಜ ಡಾ.ಮಹೇಶ ಜೋಶಿ ತಿಳಿಸಿದ್ದಾರೆ.

ಕನ್ನಡ ಹೋರಾಟಗಾರರು ತಮ್ಮ ಸಮಸ್ತವನ್ನು ಕನ್ನಡಕ್ಕಾಗಿ ತ್ಯಾಗ ಮಾಡಿ. ಕೇವಲ ಕನ್ನಡದ ಮೇಲಿನ ಅಭಿಮಾನದಿಂದ ಮೊಕದ್ದಮೆಗಳನ್ನು ಹೇರಿಕೊಂಡು ಹಲವು ಕಷ್ಟಗಳನ್ನು ಅನುಭವಿಸುತ್ತಾರೆ, ನ್ಯಾಯಾಲಯಕ್ಕೆ ಸುತ್ತುವ, ಸೆರೆಮನೆ ವಾಸ ಅನುಭವಿಸುವ, ವಿದೇಶಗಳಿಗೆ ಹೋಗುವ ರಹದಾರಿಯು ದೊರಕದೆ, ಅವಕಾಶಗಳಿಂದ ವಂಚಿತರಾಗುವ ಹೀಗೆ ಹಲವು ಸಂಕಷ್ಟಗಳನ್ನು ಅನುಭವಿಸಿ ವೈಯಕ್ತಿಕ ಜೀವನವನ್ನೇ ಇದಕ್ಕಾಗಿ ತ್ಯಾಗ ಮಾಡಿರುತ್ತಾರೆ.

Kannada Sahitya Parishad ರಾಜ್ಯ ಸರ್ಕಾರ ಅವರ ನೋವುಗಳಿಗೆ ಮಿಡಿಯದಿದ್ದರೆ ಕನ್ನಡಪರ ಎನ್ನಿಸಿಕೊಳ್ಳುವುದು ಹೇಗೆ? ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಇನ್ನು ಹೆಚ್ಚು ಸಮಯ ವ್ಯರ್ಥ ಮಾಡದಂತೆ ಕನ್ನಡಪರ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯಬೇಕೆಂದು ನಾಡೋಜ ಡಾ.ಮಹೇಶ ಜೋಶಿಯವರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga jyanendra ಉಪಲೋಕಾಯುಕ್ತರ ಅನಿಸಿಕೆ ಸರಿ. ರಾಜ್ಯದಲ್ಲಿ ಭ್ರಷ್ಠಾಚಾರದ ತಾಂಡವ- ಆರಗ ಜ್ಞಾನೇಂದ್ರ

Araga jyanendra ಕರ್ನಾಟಕದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂಬ ಉಪ ಲೋಕಾಯುಕ್ತ ಬಿ...

Backward Classes Welfare Department ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಆನ್ ಲೈನ್ ಅರ್ಜಿ ಆಹ್ವಾನ

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2026-27...

Nidhi Apke Nikat ಮೇ 27 .ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ನಿಧಿ ಆಪ್ ಕೆ ನಿಕಟ್ 2.0 ಕಾರ್ಯಕ್ರಮ

Nidhi Apke Nikat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ...

Shivamogga Police ಅನಾಮಧೇಯ ಶವದ ವಾರಸುದಾರರ ಪತ್ತೆಗೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆ

Shivamogga Police ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಬಸ್...