Saturday, December 6, 2025
Saturday, December 6, 2025

ಸೊರಬದಲ್ಲಿ ಕಾನುಕೇರಿಯ ಶ್ರೀ ಗಣೇಶಮೂರ್ತಿಯ ವಿಸರ್ಜನಾ ಕಾರ್ಯಕ್ರಮ

Date:

ವಿಶ್ವ ಹಿಂದೂ ಪರಿಷದ್-ಭಜರಂಗದಳ ನೇತೃತ್ವದ ಹಿಂದೂ ಮಹಾಸಭಾ ಗಣಪತಿ ಉತ್ಸವ ಸಮಿತಿಯಿಂದ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ಪ್ರತಿಷ್ಠಾಪಿತ ಶ್ರೀ ಗಣೇಶ ಮೂರ್ತಿಯ ವಿಸರ್ಜನಾ ಕಾರ್ಯಕ್ರಮ ಸೆ.10ರಂದು ಬುಧವಾರ ನಡೆಯಲಿದೆ.

ಬೆಳಗ್ಗೆ 11ಕ್ಕೆ ಶ್ರೀ ಸ್ವಾಮಿಯ ಸನ್ನಿಧಿಯಿಂದ ಆರಂಭವಾಗುವ ಶೋಭಾಯಾತ್ರೆ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನ, ಶ್ರೀ ಸ್ವಾಮಿ ವಿವೇಕಾನಂದ ಭೋದನಾ ಸಂಸ್ಥೆ, ಚಾಮರಾಜ ಪೇಟೆ, ಖಾಸಗಿ ಬಸ್ ನಿಲ್ದಾಣ ವೃತ್ತ ನಂತರ ರಾಜಬೀದಿ ಮಾರ್ಗವಾಗಿ ಶ್ರೀ ವರದಹಸ್ತ ಆಂಜನೇಯ ಸ್ವಾಮಿ ದೇವಸ್ಥಾನ, ಶ್ರೀ ರಂಗನಾಥ ದೇವಸ್ಥಾನದ ವರೆಗೆ ನಡೆಯಲಿದೆ.

ಶೋಭಾಯಾತ್ರೆಯಲ್ಲಿ ಚಂಡೆ ವಾಧ್ಯ, ಭಜನೆ, ಡೊಳ್ಳು ಸೇರಿದಂತೆ ವಿವಿಧ ವಾಧ್ಯ ಮೇಳಗಳು, ಜನಪದ ಕಲಾತಂಡಗಳು ಪ್ರದರ್ಶನ ನೀಡಲಿವೆ. ನಂತರ ಶ್ರೀ ಗಣೇಶ ಮೂರ್ತಿಯನ್ನು ಪುಣ್ಯನದಿ ದಂಡಾವತಿಯಲ್ಲಿ ವಿಸರ್ಜಿಸಲಾಗುವುದು.
ಶೋಭಾಯಾತ್ರೆಯಲ್ಲಿ ಸಾವಿರಾರು ಜನ ಭಾಗವಹಿಸುವ ನಿರೀಕ್ಷೆ ಇದೆ. ಹಿಂದೂ ಬಾಂಧವರು, ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಯವರು, ಮಾತೆಯರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂಪ್ರೇರಣೆಯಿಂದ ಭಾಗವಹಿಸುವ ಮೂಲಕ ಶೋಭಾಯಾತ್ರೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಹಿಂದೂ ಮಹಾಸಭಾ ಗಣಪತಿ ಉತ್ಸವ ಸಮಿತಿ ಅಧ್ಯಕ್ಷ ನಿರಂಜನ್ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...