Thursday, March 19, 2026
Thursday, March 19, 2026

ಸೊರಬದಲ್ಲಿ ಕಾನುಕೇರಿಯ ಶ್ರೀ ಗಣೇಶಮೂರ್ತಿಯ ವಿಸರ್ಜನಾ ಕಾರ್ಯಕ್ರಮ

Date:

ವಿಶ್ವ ಹಿಂದೂ ಪರಿಷದ್-ಭಜರಂಗದಳ ನೇತೃತ್ವದ ಹಿಂದೂ ಮಹಾಸಭಾ ಗಣಪತಿ ಉತ್ಸವ ಸಮಿತಿಯಿಂದ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ಪ್ರತಿಷ್ಠಾಪಿತ ಶ್ರೀ ಗಣೇಶ ಮೂರ್ತಿಯ ವಿಸರ್ಜನಾ ಕಾರ್ಯಕ್ರಮ ಸೆ.10ರಂದು ಬುಧವಾರ ನಡೆಯಲಿದೆ.

ಬೆಳಗ್ಗೆ 11ಕ್ಕೆ ಶ್ರೀ ಸ್ವಾಮಿಯ ಸನ್ನಿಧಿಯಿಂದ ಆರಂಭವಾಗುವ ಶೋಭಾಯಾತ್ರೆ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನ, ಶ್ರೀ ಸ್ವಾಮಿ ವಿವೇಕಾನಂದ ಭೋದನಾ ಸಂಸ್ಥೆ, ಚಾಮರಾಜ ಪೇಟೆ, ಖಾಸಗಿ ಬಸ್ ನಿಲ್ದಾಣ ವೃತ್ತ ನಂತರ ರಾಜಬೀದಿ ಮಾರ್ಗವಾಗಿ ಶ್ರೀ ವರದಹಸ್ತ ಆಂಜನೇಯ ಸ್ವಾಮಿ ದೇವಸ್ಥಾನ, ಶ್ರೀ ರಂಗನಾಥ ದೇವಸ್ಥಾನದ ವರೆಗೆ ನಡೆಯಲಿದೆ.

ಶೋಭಾಯಾತ್ರೆಯಲ್ಲಿ ಚಂಡೆ ವಾಧ್ಯ, ಭಜನೆ, ಡೊಳ್ಳು ಸೇರಿದಂತೆ ವಿವಿಧ ವಾಧ್ಯ ಮೇಳಗಳು, ಜನಪದ ಕಲಾತಂಡಗಳು ಪ್ರದರ್ಶನ ನೀಡಲಿವೆ. ನಂತರ ಶ್ರೀ ಗಣೇಶ ಮೂರ್ತಿಯನ್ನು ಪುಣ್ಯನದಿ ದಂಡಾವತಿಯಲ್ಲಿ ವಿಸರ್ಜಿಸಲಾಗುವುದು.
ಶೋಭಾಯಾತ್ರೆಯಲ್ಲಿ ಸಾವಿರಾರು ಜನ ಭಾಗವಹಿಸುವ ನಿರೀಕ್ಷೆ ಇದೆ. ಹಿಂದೂ ಬಾಂಧವರು, ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಯವರು, ಮಾತೆಯರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂಪ್ರೇರಣೆಯಿಂದ ಭಾಗವಹಿಸುವ ಮೂಲಕ ಶೋಭಾಯಾತ್ರೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಹಿಂದೂ ಮಹಾಸಭಾ ಗಣಪತಿ ಉತ್ಸವ ಸಮಿತಿ ಅಧ್ಯಕ್ಷ ನಿರಂಜನ್ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...