Thursday, June 18, 2026
Thursday, June 18, 2026

Rotary Club Shimoga ಅತಿಯಾದ ಮೊಬೈಲ್ ವೀಕ್ಷಣೆ ಒಳ್ಳೆಯದಲ್ಲ.-ಹಸನ್ ಬೆಳ್ಳಿಗನೂಡು

Date:

Rotary Club Shimoga ಒತ್ತಡದ ಜೀವನ ಶೈಲಿ, ಕೌಟುಂಬಿಕ ಸಮಸ್ಯೆ, ನಿರಾಸೆ ಸೇರಿದಂತೆ ಅನೇಕ ಕಾರಣಗಳು ಆತ್ಮಹತ್ಯೆಗೆ ದಾರಿಯಾಗುತ್ತಿವೆ ಎಂದು ಕವಿ, ಶಿಕ್ಷಕ ಹಸನ್ ಬೆಳ್ಳಿಗನೂಡು ಹೇಳಿದರು.
ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಪ್ರಯುಕ್ತ ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಂಸ್ಥೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಅತಿಯಾದ ಮೊಬೈಲ್ ವೀಕ್ಷಣೆ ಮಾಡಬಾರದು. ಒಂಟಿತನ ಮನೋಭಾವದಲ್ಲಿ ಇರಬಾರದು. ದುಡುಕಿನ ನಿರ್ಧಾರ ತೆಗೆದುಕೊಳ್ಳಬಾರದು. ಸಮಸ್ಯೆಗಳಿದ್ದಲ್ಲಿ ಆಪ್ತರ ಬಳಿ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದರು.
ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಅಧ್ಯಕ್ಷ ಪ್ರಕಾಶ್ ಮೂರ್ತಿ ಮಾತನಾಡಿ, ಆಧುನಿಕ ಜಗತ್ತಿನಲ್ಲಿ ಸಂಬಂಧಗಳ ಬೆಲೆ ತಿಳಿಯದಿರುವುದು, ಒತ್ತಡ, ಮಾನಸಿಕ ಖಿನ್ನತೆ, ಇತರ ಮಕ್ಕಳೊಂದಿಗೆ ಹೋಲಿಕೆ ಮಾಡುವುದರಿಂದ ಆತ್ಮಹತ್ಯೆಗೆ ಪ್ರಚೋದನೆಯಾಗುತ್ತಿದೆ. ಪ್ರಸ್ತುತ ಅವಿಭಕ್ತ ಕುಟುಂಬಗಳ ಪ್ರೀತಿ, ಸಂಬಂಧ, ಸಹಾಯ, ಮಾನವೀಯ ಮೌಲ್ಯಗಳು ಇಂದಿಗೆ ಅವಶ್ಯಕವೆನಿಸಿದೆ ಎಂದು ತಿಳಿಸಿದರು.
Rotary Club Shimoga ರೋಟರಿ ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಜತೆಯಲ್ಲಿ ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಅರಿವು ಕಾರ್ಯಕ್ರಮಗಳನ್ನು ನಡೆಸುತ್ತಿದೆ. ವಿವಿಧ ವಿಷಯಗಳ ಬಗ್ಗೆ ಜನರಿಗೆ ಸೂಕ್ತ ಮಾರ್ಗದರ್ಶನ ನೀಡುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ರೋಟರಿ ಜಿಲ್ಲಾ ಮಾಜಿ ಗವರ್ನರ್ ರವಿ ಮಾತಾನಾಡಿ, 26-27ನೇ ಸಾಲಿನ ಅಂತರಾಷ್ಟ್ರೀಯ ಅಧ್ಯಕ್ಷರ ಬಗ್ಗೆ ವಿವರಿಸಿದರು. ವಲಯ ಸಂಯೋಜಕಿ ಮಂಜುಳಾ ರಾಜು ಪ್ರಾರ್ಥನೆ ಮಾಡಿದರು. ಚನ್ನಯ್ಯ ನಿರೂಪಣೆ ಮಾಡಿದರು. ಗೀತ ಗಾಯನದ ಮೂಲಕ ರಂಜಿಸಿದರು. ರಶ್ಮಿ ವಂದನಾರ್ಪಣೆ ಮಾಡಿದರು. ಎಲ್ಲ ರೋಟರಿ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...